ವಿಜಯನಗರ | ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಅವಹೇಳನ; ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

Date:

ಬಿಜೆಪಿ ಮಾಜಿ ಸಚಿವ ಆರಗ ಜ್ಞಾನೇಂದ್ರನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು‌ ಹೊಸಪೇಟೆ ಘಟಕದ ಬಾಬಾ ಸಾಹೇಬ ಅಂಬೇಡ್ಕರ್ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹೊಸಪೇಟೆ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

“ಹಿರಿಯ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ವರ್ಣಭೇದ ಮಾಡುವುದರ ಮೂಲಕ ದ್ರಾವಿಡರ ಅಸ್ಮಿತೆಯ ಬಣ್ಣವಾದ ಕಪ್ಪು ಬಣ್ಣವನ್ನು ಹಿಯ್ಯಾಳಿಸುವುದರ ಜೊತೆಗೆ ಜನಾಂಗೀಯ ನಿಂದನೆ ಮಾಡಿದ್ದಾರೆ. ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“ಸಂವಿಧಾನದಲ್ಲಿ ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನಾಂಗೀಯ ಆಧಾರದ ಮೇಲೆ ಮಾತನಾಡುವುದನ್ನು ನಿಷೇಧಿಸಿದೆ. ಆದರೂ ಮನುವಾದವನ್ನು ಹೊತ್ತಿರುವ ಆರಗ ಜ್ಞಾನೇಂದ್ರನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಬೆಳೆಹಾನಿ ಜಂಟಿ ಸಮೀಕ್ಷೆಗೆ ರೈತ ಸಂಘ ಒತ್ತಾಯ

ಅಂಬೇಡ್ಕರ್ ಸಂಘದ ಜಿಲ್ಲಾ ಅಧ್ಯಕ್ಷ ಟಿ ವಾಸುದೇವ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಬಣ್ಣದ ಮನೆ, ಜೈ ಶಿವಕುಮಾರ್, ಪ್ರಗತಿಪರ ಸಂಘಟನೆಯ ಮುಖಂಡರುಗಳಾದ ದುರ್ಗಪ್ಪ ಪೂಜಾರ್, ತಮ್ಮನಳ್ಳೆಪ್ಪ ಡಿ ವೆಂಕಟರಮಣ, ಆಟೋ ರಾಮಚಂದ್ರ, ವೀರಭದ್ರ ನಾಯಕ, ಸಜ್ಜದ್ ಖಾನ್, ಮುದುಕಪ್ಪ, ನೀಲಕಂಠ, ಇಂತಿಯಾಜ್ ಓಬಳೇಶ್, ಹುಲುಗಣ್ಣ, ಗುಲಾಂ ರಸೂಲ್, ಕಾರಿಗನೂರು ರಾಮಕೃಷ್ಣ, ಚಲವಾದಿ ಮಹಾಸಭಾದ ಮುಖಂಡರಾದ ಜಿಕೆಟಿ ಕೊಟ್ರೇಶ್, ಸುನಿಲ್ ಕುಮಾರ್, ಕೂಡ್ಲಿಗಿ ಕೊಟ್ರೇಶ್, ಜಗದೀಶ್ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...