ವಿಜಯನಗರ | ಇತಿಹಾಸ ಬರವಣಿಗೆಯಲ್ಲಿ ವಸ್ತುನಿಷ್ಠತೆ ಬಹಳ ಮುಖ್ಯ: ಪ್ರೊ. ತಿಪ್ಪೇಸ್ವಾಮಿ

Date:

ಇತಿಹಾಸದ ಬರವಣಿಗೆ ವಸ್ತುನಿಷ್ಠತೆ ಹಾಗೂ ನೈಜತೆಯಿಂದ ಕೂಡಿರಬೇಕು. ಇತಿಹಾಸವನ್ನು ಪುರಾಣಗಳ ಆಧಾರದ ಮೇಲೆ ವೈಭವೀಕರಣ ಮಾಡುವುದು ಸರಿಯಲ್ಲ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಚೀನ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್ ಎಸ್ ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.

ಕನ್ನಡ ವಿಶ್ವವಿದ್ಯಾಲಯದ ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ 2025-26ನೇ ಶೈಕ್ಷಣಿಕ ಸಾಲಿನ ಹಂಪಿ ಪರಿಸರದ ಪುರಾತತ್ವ ಮತ್ತು ಇತ್ತೀಚಿನ ಶೋಧಗಳು ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಹಂಪಿಯ ಗತಕಾಲದ ಇತಿಹಾಸವನ್ನು ಕಟ್ಟಿಕೊಡುವಲ್ಲಿ ಇಲ್ಲಿನ ನೈಸರ್ಗಿಕ ಅಂಶಗಳು ಮತ್ತು ಮಾನವ ನಿರ್ಮಿತ ವಸ್ತುಗಳು ಮಹತ್ವದ ಪಾತ್ರವಹಿಸುತ್ತವೆ. ಹಂಪಿ ಪರಿಸರ ಮತ್ತು ಜನಜೀವನದ ಕುರಿತು ತಳಸ್ಪರ್ಶೀಯ ಅಧ್ಯಯನಗಳು ನಡೆಯಬೇಕು. ಹಂಪಿ ಪರಿಸರವು ಧಾರ್ಮಿಕ ಕ್ಷೇತ್ರವಾಗಿ, ತೀರ್ಥ ಕ್ಷೇತ್ರವಾಗಿ, ಪ್ರವಾಸಿ ಕ್ಷೇತ್ರವಾಗಿ ತುಂಬಾ ಪ್ರಾಚೀನವಾದ ಸ್ಥಳ. ಸಹೋದರತ್ವವನ್ನು ಜಗತ್ತಿಗೆ ಪ್ರತಿಪಾದಿಸಿದ ಕ್ಷೇತ್ರ. ರಾರ್ಬಟ್ ಸಿವಿಲ್ ಅವರ ಮರೆತು ಹೋದ ಮಹಾಸಾಮ್ರಾಜ್ಯ ಕೃತಿಯು ವಿಜಯನಗರ ಸಾಮ್ರಾಜ್ಯದ ಆಡಳಿತ, ಕಲೆ ಮತ್ತು ವಾಸ್ತುಶಿಲ್ಪವನ್ನು ಎತ್ತಿಹಿಡಿಯುತ್ತದೆ. ದೇಶದ ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣದ ನಂತರ ಹಂಪಿ ಪ್ರದೇಶ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1986ರಲ್ಲಿ ಯುನೆಸ್ಕೋ ಹಂಪಿಯನ್ನು ವಿಶ್ವಪಾರಂಪರಿಕ ತಾಣವಾಗಿ ಘೋಷಣೆ ಮಾಡಿತು. ಹಂಪಿಯ ವಿಶ್ವಪರಂಪರೆಗೆ ಧಕ್ಕೆಯಾಗದಂತೆ, ಹಂಪಿ ಪರಿಸರದ ರಕ್ಷಣೆ ಮತ್ತು ಅದರ ಉತ್ಖನನಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸಂಸ್ಥೆ, ಕೇಂದ್ರ ಪುರಾತತ್ವ ಇಲಾಖೆ ಮತ್ತು ರಾಜ್ಯ ಪುರಾತತ್ವ ಇಲಾಖೆಗಳು ಸಾಕಷ್ಟು ಯೋಜನೆಗಳನ್ನು ರೂಪಿಸಿವೆ. ಹಂಪಿಯ ಕುರಿತ ಸಂಶೋಧನೆಯು ಅನೇಕ ಆಯಾಮಗಳನ್ನು ಒಳಗೊಂಡಿದೆ. ಯುವ ಸಂಶೋಧಕರು ತಮ್ಮ ಸಂಶೋಧನೆಯಲ್ಲಿ ಏನು? ಎಲ್ಲಿ? ಯಾವಾಗ?, ಹೇಗೆ, ಯಾರಿಂದ ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವುದು ತುಂಬಾ ಮುಖ್ಯ. ಇತಿಹಾಸ ಎನ್ನುವುದು ಇತಿಹಾಸಕಾರನ ಆಲೋಚನೆಗಳ ಫಲ. ಹೀಗಾಗಿ ಇತಿಹಾಸ ಬರವಣಿಗೆಯು ಕಾರ್ಯಕಾರಣ ಸಂಬಂಧ ಹೊಂದಿರಬೇಕು” ಎಂದು ತಿಳಿಸಿದರು.

“ಹಂಪಿಯ ರಕ್ಷಣೆ ಮತ್ತು ಜನಜೀವನಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸವಾಲುಗಳಿವೆ. ಹಂಪಿಯ ಜನರು ಜೀವನವನ್ನು ಕಟ್ಟಿಕೊಳ್ಳುವ ಭರದಲ್ಲಿ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಂತಹ ನಿರ್ಲಕ್ಷ್ಯಕ್ಕೆ ಒಳಗಾಗಿರುವ ವಿಷಯಗಳ ಮೇಲೆ ಹೆಚ್ಚು ಅಧ್ಯಯನಗಳು ನಡೆಯಬೇಕು” ಎಂದರು.

ಚರಿತ್ರೆ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ. ವಿರೂಪಾಕ್ಷಿ ಪೂಜಾರಹಳ್ಳಿ ಮಾತನಾಡಿ, “ವಿಜಯನಗರವು ಆ ಕಾಲದ ಮಹಾನಗರವಾಗಿತ್ತು. ಇಲ್ಲಿನ ವಾಸ್ತುಶಿಲ್ಪ, ಕಲೆ, ಸಾಹಿತ್ಯ ಸಂಸ್ಕೃತಿ ಮತ್ತು ಪ್ರಕೃತಿ ಕುರಿತು ಹಲವಾರು ವಿದೇಶಿ ವಿದ್ವಾಂಸರು ಹಾಡಿ ಹೊಗಳಿದ್ದಾರೆ. ಪ್ರೌಢ ದೇವರಾಯನ ಕಾಲದಲ್ಲಿ ಭಕ್ತಿ ಸಾಹಿತ್ಯ ಮತ್ತು ಶರಣ ಸಾಹಿತ್ಯಕ್ಕೆ ಆದ್ಯತೆ ನೀಡಲಾಯಿತು. ವಿಜಯನಗರ ಕಾಲದಲ್ಲಿ ಹಂಪಿ ಪರಿಸರವು ಭೇಟೆ ಹಾಗೂ ಪಶುಪಾಲನೆಗೆ ಹೆಸರುವಾಸಿಯಾಗಿತ್ತು. ವಿಜಯನಗರ ಸಾಮ್ರಾಜ್ಯವು ಅಧಿಕಾರ ವಿಕೇಂದ್ರಿಕರಣಕ್ಕೆ ಒತ್ತು ನೀಡಿತ್ತು. ಇಂದು ಹೊಸದನ್ನು ಸಂಶೋಧಿಸುವ ಭರದಲ್ಲಿ ಸಮಾಜದಲ್ಲಿ ದ್ವಂದ್ವ ಸೃಷ್ಠಿಸಬಾರದು” ಎಂದರು.

ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಎಸ್.ವೈ. ಸೋಮಶೇಖರ್ ಮಾತನಾಡಿ, “ವಿಜಯನಗರ ಅರಸರು ಪರಿಸರ ಪ್ರಜ್ಞೆಯುಳ್ಳವರಾಗಿದ್ದರು. ಸಾಮ್ರಾಜ್ಯ ಕಟ್ಟುವಲ್ಲಿ ಜಲಮೂಲಗಳ ರಕ್ಷಣೆ ಮತ್ತು ಬಳಕೆಯು ತುಂಬಾ ಮುಖ್ಯವಾಗುತ್ತದೆ. ಜೀವಜಲದ ಬಳಕೆಗಾಗಿ ಅರಸರು ತುರ್ತು ಆಣೆಕಟ್ಟು ನಿರ್ಮಾಣ, ಕಮಲಾಪುರ ಕೆರೆ ನಿರ್ಮಾಣ, ಕಾಲುವೆಗಳ ನಿರ್ಮಾಣದ ಮೂಲಕ ಜನಜಾನುವಾರುಗಳಿಗೆ ಕೃಷಿ ಕಾರ್ಯಗಳಿಗೆ ನದಿಯ ನೀರನ್ನು ವರ್ಷಪೂರ್ತಿ ಒದಗಿಸಲು ತುಂಬಾ ವ್ಯವಸ್ಥಿತವಾದ ಮತ್ತು ಪರಿಸರ ಸ್ನೇಹಿಯಾದ ಯೋಜನೆಯನ್ನು ರೂಪಿಸಿದ್ದರು” ಎಂದರು.

ಇದನ್ನೂ ಓದಿ: ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ವಾಸುದೇವ ಬಡಿಗೇರ ಮಾತನಾಡಿ, ಮಧ್ಯಕಾಲೀನ ಯುಗದಲ್ಲಿ ಉತ್ತರ ಭಾರತದಲ್ಲಿ ಫತೇಪುರ ಸಿಕ್ರಿ ಮತ್ತು ದಕ್ಷಿಣ ಭಾರತದಲ್ಲಿ ಹಂಪಿ ತುಂಬಾ ವ್ಯವಸ್ಥಿತವಾದ ನಗರಗಳು ಎಂದು ಪ್ರಸಿದ್ಧಿ ಪಡೆದಿದ್ದವು. ಹಂಪಿ ಎರಡು ಸಂಸ್ಕೃತಿಗಳ ಸಮ್ಮಿಲನ. ಅಲಕ್ಷಿತ ಮತ್ತು ನಿರ್ಲಕ್ಷಿತ ಸಮುದಾಯಗಳ ಬಗ್ಗೆ ಹಾಗೂ ಸ್ಥಳನಾಮಗಳ ಬಗ್ಗೆ ಅಧ್ಯಯನಗಳು ನಡೆಯಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ರಮೇಶ ನಾಯ್ಕ, ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರು, ಅಧ್ಯಾಪಕರು, ಸಂಶೋಧನಾರ್ಥಿಗಳು, ವಾಸುದೇವ ಬಸವರಾಜ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...