ವಿಜಯನಗರ | ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯ ಸಂಗ್ರಹದ ದಾರಿದೀಪ: ಡಾ. ಎಂ ಎಸ್ ಮದಭಾವಿ

Date:

ಡಾ. ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯವನ್ನು ಪುರಾತನ ಮಠಗಳ ಅಂತರಾಳದಿಂದ ಹೊರತೆಗೆದು, ಇಂದಿನ ಜನಸಾಮಾನ್ಯರ ಮನಸ್ಸಿಗೆ ತಲುಪಿಸಿದ ಶ್ರೇಷ್ಠ ಸಂಶೋಧಕ, ಲೇಖಕ ಹಾಗೂ ಸಮಾಜಸೇವಕ ಎಂದು ವಿಜಯಪುರದ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರ ಕಾರ್ಯದರ್ಶಿ ಡಾ. ಎಂ ಎಸ್ ಮದಭಾವಿ ಅಭಿಪ್ರಾಯಪಟ್ಟರು.

ಕನ್ನಡ ವಿಶ್ವವಿದ್ಯಾಲಯದ ಪಂಪ ಸಭಾಂಗಣದಲ್ಲಿ ಹಸ್ತಪ್ರತಿಶಾಸ್ತ್ರ ಅಧ್ಯಯನ ವಿಭಾಗದಿಂದ ಹಮ್ಮಿಕೊಂಡಿದ್ದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ದತ್ತಿನಿಧಿ ಅಂಗವಾಗಿ ಹಸ್ತಪ್ರತಿ ತರಬೇತಿ ಹಾಗೂ ಜಾಗೃತಿ ಶಿಬಿರ-24ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

“ಡಾ. ಫ.ಗು. ಹಳಕಟ್ಟಿಯವರು ಕಾನೂನು ಪದವಿ ಪಡೆದು ಆಕಸ್ಮಿಕವಾಗಿ ಸಿಕ್ಕ ವಚನ ಹಸ್ತಪ್ರತಿಗಳ ಕಟ್ಟನ್ನು ನೋಡಿ ಅವರಿಗೆ ಆಸಕ್ತಿ ಮೂಡಿತು. ಹಾಗೆ ಪರಿಪೂರ್ಣತ್ವವನ್ನು ಪಡೆದುಕೊಂಡವರು ಹಳಕಟ್ಟಿ ವಚನ ಸಾಹಿತ್ಯ ಸಂಗ್ರಹಕ್ಕೆ ಅರವತ್ತು ವರ್ಷಗಳ ನಿರಂತರ ತಮ್ಮ ಬದುಕು ಮುಡಿಪಾಗಿಟ್ಟು, ಇಪ್ಪತ್ತು ವರ್ಷಗಳ ಕಾಲ ಹಸ್ತಪ್ರತಿಗಳ ಸಂಗ್ರಹದಲ್ಲಿ ತೊಡಗಿದ್ದರು. ಇವುಗಳು ಜನರ ಮನಸ್ಸಿಗೆ ತಲುಪಬೇಕು ಎಂದು ಯೋಚಿಸಿ, ಹಸ್ತಪ್ರತಿಗಳನ್ನು ಮುದ್ರಣ ರೂಪದಲ್ಲಿ ತರಬೇಕೆಂದು ವಚನ ಶಾಸ್ತ್ರಸಾರ ಭಾಗ 1ನ್ನು ಮುದ್ರಣಕ್ಕೆಂದು ಕಳುಹಿಸಿದರು. ಅದು ಆಗ ಧರ್ಮದ ಆಧಾರವಾಗಿದೆಯೆಂದು ತಿರಸ್ಕರಿಸಿದರು. ನಂತರ ಬೆಳಗಾವಿಯಲ್ಲಿ ಮುದ್ರಣಗೊಂಡಿತು. ತಮ್ಮ ಮನೆಯನ್ನು ಮಾರಿ ಸ್ವಂತ ಮುದ್ರಣ ಯಂತ್ರವನ್ನು ಖರೀದಿಸಿದರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯನಗರ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಡಾ. ಎಸ್. ಶಿವಾನಂದ ಮಾತನಾಡಿ, “ಡಾ. ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯಕ್ಕೆ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ತಮ್ಮ ಕುಟುಂಬವನ್ನು ಮರೆತು ವಚನ ಸಾಹಿತ್ಯದ ಉಳಿವಿಗಾಗಿ ಶ್ರಮಪಟ್ಟ ದುಡಿದರು. ಇನ್ನು ಹಸ್ತಪ್ರತಿಗಳ ಸಂಗ್ರಹ ಕೆಲಸದಲ್ಲಿ ಶ್ರದ್ಧೆ, ಆಸಕ್ತಿ ಮತ್ತು ಬದ್ಧತೆ ಇದ್ದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ” ಎಂದರು.

ಇದನ್ನೂ ಓದಿದ್ದೀರಾ? ಹಾವೇರಿ | ಹದಗೆಟ್ಟ ರಸ್ತೆ; ಕರ್ಜಗಿ ಗ್ರಾಮಸ್ಥರ ಗೋಳು ಕೇಳುವವರಿಲ್ಲ

ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವೀರೇಶ ಬಡಿಗೇರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕನ್ನಡ ವಿಶ್ವವಿದ್ಯಾಲಯವು ಹಸ್ತಪ್ರತಿಶಾಸ್ತ್ರ ಅಧ್ಯಯನ ಶಿಬಿರದಿಂದ ನಮ್ಮ ಭಾರತೀಯ ಹಾಗೂ ಕರ್ನಾಟಕದ ಶಾಸ್ತ್ರ ಹಾಗೂ ವಚನ ಪರಂಪರೆಯನ್ನು ತಿಳಿಯುವ ಕೆಲಸ ಮಾಡಿರುವುದು ಅಭಿನಂದನೀಯ” ಎಂದು ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನರು ಹಾಗೂ ಹಸ್ತಪ್ರತಿ ತರಬೇತಿ ಮತ್ತು ಜಾಗೃತಿ ಶಿಬಿರದ ನಿರ್ದೇಶಕರಾದ ಡಾ. ಎಫ್.ಟಿ. ಹಳ್ಳಿಕೇರಿ, ಕಾರ್ಯಕ್ರಮದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿಗಳು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...