ವಿಜಯನಗರ | ಮನಸ್ಮೃತಿ ದಹಿಸಿ ದಲಿತಪರ ಸಂಘಟನೆಗಳ ಪ್ರತಿಭಟನೆ

Date:

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮನಸ್ಮೃತಿ ಸುಡುವ ಮೂಲಕ ಮನುಸ್ಮೃತಿ ದಹನ ದಿನವನ್ನು ಆಚರಿಸಿದರು.

ಸಂವಿಧಾನ ರಚಿಸುವ ಮೊದಲು ದಲಿತರ ಶೋಷಣೆ, ಮಹಿಳೆಯರ ಶೋಷಣೆ, ಜಾತಿವಾದ ಹಾಗೂ ಅಸಮಾನತೆಗೆ ಮನುವಾದಿಗಳ ಮನುಸ್ಮೃತಿ ಗ್ರಂಥ ಕಾರಣವಾಗಿತ್ತು. ಅದರಿಂದ ಕೆರಳಿದ ಶೋಷಿತ ವರ್ಗದವರು ಅಂಬೇಡ್ಕರ್‌ ನೇತೃತ್ವದಲ್ಲಿ ಮನುಸ್ಮೃತಿಯನ್ನು ದಹಿಸಿದ್ದರು. ಆ ದಿನದ ನೆನಪಗಾಗಿ ಡಿಸೆಂಬರ್‌ 25ರಂದು ಮನುಸ್ಮೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಸಾಮಾಜಿಕ ಹೋರಾಟಗಾರ ಸೋಮಶೇಖರ್ ಬಣ್ಣದ ಮನೆ ಮಾತನಾಡಿ, “1927 ಡಿಸೆಂಬರ್‌ 25ರಂದು ಮಹಾರಾಷ್ಟ್ರದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಮನುಸ್ಮೃತಿ ದಹನ ಮಾಡುವ ಮೂಲಕ ಸಮಾನತೆಗೆ ನಾಂದಿ ಹಾಡಿದ್ದರು. ಬಾಬಾ ಸಾಹೇಬರು ಮನುಸ್ಮೃತಿ ದಹನ ಮಾಡುವ ಮೂಲಕ ಅದರಲ್ಲಿದ್ದ ಅಸಮಾನತೆ, ಭೇದಭಾವ, ದಲಿತ, ದಮನಿತ ಹಾಗೂ ಕೆಳವರ್ಗದವರು ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರನ್ನು ಹತ್ತಿಕ್ಕುವ, ಅವರ ಹಕ್ಕುಗಳನ್ನು ಕಸಿದುಕೊಳ್ಳುವಂತಹ ಅನೇಕ ತಾರತಮ್ಯಗಳನ್ನು ಹೋಗಲಾಡಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮನುವಾದ, ಫ್ಯಾಸಿಸ್ಟ್ ವಿರುದ್ಧ ಜ.1ರಂದು ಪ್ರತಿಭಟನೆ

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡುವುದರ ಮೂಲಕ ಎಲ್ಲ ವರ್ಗದ ಜನರಿಗೆ ಎಲ್ಲ ರಂಗಗಳಲ್ಲೂ ಅವಕಾಶ ಕಲ್ಪಿಸಿಕೊಟ್ಟು ಅನೇಕ ಹಕ್ಕುಗಳನ್ನು ನೀಡಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಮರಡಿ ಜಂಬಯ್ಯ ನಾಯಕ, ಅಲೆಮಾರಿ ಸಮುದಾಯದ ರಾಜ್ಯ ಅಧ್ಯಕ್ಷ ಸಣ್ಣ ಮಾರೆಪ್ಪ, ಎನ್ ವೆಂಕಟೇಶ್(ಸ್ಲಂ ವೆಂಕಿ) ಸಣ್ಣ ಮಾರೆಪ್ಪ ರಾಮಚಂದ್ರ ಬಿಸಾಟಿ ಮಹೇಶ್, ಸೂರ್ಯನಾರಾಯಣ, ಮುದುಕಪ್ಪ ಚಲವಾದಿ, ಇಂತಿಯಾಜ್, ಚಲವಾದಿ ಮಹಾಸಭಾದ ರಾಜ್ಯ ಮಹಿಳಾ ಅದ್ಯಕ್ಷೆ ಈರಮ್ಮ , ಡಿಎಸ್‌ಎಸ್ ರಾಮಚಂದ್ರಬಾಬು, ಜೆ ಸಿ ಈರಣ್ಣ, ರಮೇಶ್ ಚಲವಾದಿ, ಈಡಿಗರ ಮಂಜುನಾಥ್, ನಿಂಬಗಲ್ ರಾಮಕೃಷ್ಣ, ಮರಿಸ್ವಾಮಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...