ವಿಜಯನಗರ | ಮಹಮದ್ ಪೈಗಂಬರ್‌ ಜನ್ಮದಿನ: ಡಿವೈಎಫ್‌ಐನಿಂದ ಸಿಹಿ ಹಂಚಿಕೆ

Date:

ಮಹಮ್ಮದ್ ಪೈಗಂಬರ್‌ ಅವರು 570ರಂದು ಮೆಕ್ಕಾದಲ್ಲಿ ಜನಿಸಿದರು. ಇಸ್ಲಾಂ ಧರ್ಮದ ಸ್ಥಾಪಕ ಹಾಗೂ ಖುರ್‌ಆನ್‌ನ ಘೋಷಕರಾಗಿದ್ದಾರೆ. ತಮ್ಮ ಯೌವನದಲ್ಲಿ ತಾಯಿಯನ್ನು ಕಳೆದುಕೊಂಡ ಅವರು ಚಿಕ್ಕಪ್ಪನ ಆಶ್ರಯದಲ್ಲಿ ಬೆಳೆದರು. 40ನೇ ವಯಸ್ಸಿನಲ್ಲಿ, ಅಲ್ಲಾಹನಿಂದ ದೇವದೂತ ಜಿಬ್ರೀಲ್ ಮೂಲಕ ಖುರ್‌ಆನ್‌ನ ಮೊದಲ ವಾಕ್ಯಗಳನ್ನು ಸ್ವೀಕರಿಸಿದರು. ಅವರು ಏಕದೇವೋಪಾಸನೆಯ ಸಂದೇಶವನ್ನು ಪ್ರಚಾರ ಮಾಡಿದರು ಎಂದು ಡಿವೈಎಫ್‌ಐ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಇಡಿಗಾರ ಹೇಳಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆಯ ಶ್ರಮಿಕ ಭವನದಲ್ಲಿ ಮಹಮ್ಮದ್ ಪೈಗಂಬರ್‌ ಅವರ 1500ನೇ ಜನ್ಮ ದಿನಾಚರಣೆಯನ್ನು ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಶನ್ ವತಿಯಿಂದ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.

“ಬಹುದೇವತಾ ವಾದವನ್ನು ವಿರೋಧಿಸಿದರು ಮತ್ತು ಅಂತಿಮವಾಗಿ ತಮ್ಮ ಅನುಯಾಯಿಗಳೊಂದಿಗೆ ಮೆಕ್ಕಾದಿಂದ ಮದೀನಾಗೆ ವಲಸೆ ಹೋದರು. ಅವರ ಜೀವನದ ಪ್ರಮುಖ ಸಾಧನೆಗಳು ಇಸ್ಲಾಮಿಕ್ ಸಮಾಜದ ಸ್ಥಾಪನೆ, ಖುರ್‌ಆನ್‌ನ ಸಂಕಲನ ಹಾಗೂ ಮಾರ್ಗದರ್ಶನ ನೀಡಿದ ಜೀವನ ವಿಧಾನದ ರಚನೆಯಾಗಿದೆ. ಪೈಗಂಬರರು ಸಮಾಜದಲ್ಲಿ ನ್ಯಾಯ, ಸಾಮರಸ್ಯ, ಸಹಾನುಭೂತಿ ಮತ್ತು ಸಮಾನತೆಯನ್ನು ಉತ್ತೇಜಿಸಿದರು. ಅವರು ಬಡವರು ಹಾಗೂ ನಿರ್ಗತಿಕರಿಗೆ ಸಹಾಯ ಮಾಡಲು ಆದೇಶಿಸಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೈಗಂಬರರು ನಮಗೆ ಎಲ್ಲ ವಿಷಯದಲ್ಲಿ ಅಂದರೆ ಧಾರ್ಮಿಕ, ಸಾಮಾಜಿಕ, ದೈವಿಕ ನಂಬಿಕೆ, ರಾಜಕೀಯ ವ್ಯವಹಾರ, ವ್ಯಾಪಾರ, ಊಟ-ಉಪಾಸನ, ಅರೋಗ್ಯ, ಅಸ್ತಿ, ಸ್ನೇಹ-ರಕ್ತಸಂಭಂದ, ವಿಜ್ಞಾನ, ಮೂಢನಂಬಿಕೆ, ಯುದ್ಧ ಕರುಣೆ ಕಾಡು-ನಾಡು, ಮಸೀದಿ, ಮಂದಿರ, ಚರ್ಚ್, ಸ್ತ್ರೀ-ಪುರುಷರ, ಮಕ್ಕಳು, ತಂದೆ-ತಾಯಂದಿರ ಹಕ್ಕು, ಪ್ರಾಣಿ, ಪಕ್ಷಿಗಳ, ಮಾನವರ ಹಕ್ಕು, ಮಳೆ ಬೆಳೆ ಹೀಗೆ ಹಲವು ವಿಷಯಗಳ ಬಗ್ಗೆ ಅರಿವು ಮೂಡಿಸಿ ಮಾರ್ಗದರ್ಶನ ನೀಡಿದ್ದು, ಇವತ್ತಿಗೂ ಅವರು ಇಡೀ ವಿಶ್ವಕ್ಕೆ ಒಬ್ಬ ಶ್ರೇಷ್ಠ ದಾರ್ಶನಿಕ, ತತ್ವಜ್ಞಾನಿ ಹಾಗೂ ಶಿಕ್ಷರೆಂದು ಹೇಳುವುದರಲ್ಲಿ ಹೆಮ್ಮೆಯ ಮಾತಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರವಾದಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಶಾಂತಿ, ಸೌಹಾರ್ದತೆ ಸಂದೇಶ

ವಿ. ಸ್ವಾಮಿ, ಬಂಡೆ ತಿರುಕಪ್ಪ, ಅಲ್ತಾಫ್, ಮಹಮ್ಮದ್ ಖಾಲಿದ್, ಖಾಸಿಂ, ಬಷೀರ ಅಹಮದ್ ವಕೀಲರು, ಜಾಫರ್ ಸಾದಿಕ್ ವಕೀಲರು, ಮಾಲತೇಶ್, ನಿಖಿಲ್, ಸಿದ್ದಲಿಂಗಪ್ಪ, ಅಮೀರ್ ಸಾಬ್ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...