ವಿಜಯನಗರ | ಶಂಕರರ ‘ಅನ್ಯ’ ಕಾದಂಬರಿ ಅವಲೋಕನ; ಹಂಪಿ ವಿವಿ ವಿದ್ಯಾರ್ಥಿಗಳಿಂದ ಸಂವಾದ

Date:

ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ‘ವ್ಯಾಖ್ಯಾನ’ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಸಾಹಿತಿ ಡಿ ಎ ಶಂಕರ ಅವರ ‘ಅನ್ಯ’ ಕಾದಂಬರಿಯ ಕುರಿತು ಅವಲೋಕನ ಸಂವಾದ ಏರ್ಪಡಿಸಲಾಗಿತ್ತು.

ಈ ಸಂವಾದದಲ್ಲಿ ಮಾತನಾಡಿದ ಸಂಶೋಧನಾರ್ಥಿ ಮಂಜುನಾಥ ಕರಿಲಿಂಗಣ್ಣ, “ಮನುಷ್ಯ ತಾನು ಸೃಷ್ಟಿಸಿಕೊಂಡ ವ್ಯವಸ್ಥೆಯಲ್ಲಿ ತಾನೇ ಹೇಗೆ ಬಂಧಿಯಾದ ಎಂಬ ವಿಷಯವನ್ನು ʼಅನ್ಯʼ ಕಾದಂಬರಿಯು ಚರ್ಚಿಸುತ್ತದೆ. ಅನುವಾದಕರ ಕುರಿತ ಚರ್ಚೆಗಳು ನಡೆಯುವುದೇ ವಿರಳ. ಈ ಅನುವಾದಕರು ತಮ್ಮ ಭಾಷೆಗಳಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸುವ ಉದ್ದೇಶವನ್ನು ಈ ಕಾರ್ಯಕ್ರಮವು ಪೂರೈಸುತ್ತದೆ. ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುತ್ತಾ ಹುಟ್ಟಿದುದೆ ಅಸ್ತಿತ್ವವಾದ” ಎಂದು ಹೇಳಿದರು.

“ನಮ್ಮದೇ ವ್ಯವಸ್ಥೆ ನಮ್ಮನ್ನೇ ನಾಶಮಾಡುವಾಗಲೂ ಅದನ್ನು ಒಪ್ಪಿಕೊಳ್ಳುವ ದೀರ್ಘಾವಧಿಯ ಅಭ್ಯಾಸವೊಂದಿದ್ದು, ನಮ್ಮನ್ನು ಸದಾ ಅದಕ್ಕೆ ಸಿದ್ಧವಾಗಿರುವಂತೆ ಮಾಡುತ್ತದೆ. ಈ ಕಾದಂಬರಿಯು ಈಗಾಗಲೇ ಇರುವ ವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ. ಸಮಾಜದ ಭಾವನಾತ್ಮಕ ಲೋಕವನ್ನು ಮುಂದಿಟ್ಟು ಮಾಡಿದ ಅಪರಾಧಗಳಿಗಿಂತ ವ್ಯಕ್ತಿಯ ವ್ಯಕ್ತಿತ್ವವನ್ನೇ ಪ್ರಶ್ನಿಸುತ್ತಿರುತ್ತದೆ. ಸಮಾಜದ ಮಿತ್‌ಗಳನ್ನು ಒಪ್ಪಿಕೊಳ್ಳದವನಿಗೆ ಆ ಸಮಾಜದಲ್ಲಿ ಬದುಕುವ ಅರ್ಹತೆಯಿಲ್ಲ. ಅವನು ಕೇವಲ ಶಿಕ್ಷೆಗೆ ಮಾತ್ರ ಅರ್ಹ ಎಂದು ಕಾದಂಬರಿಯಲ್ಲಿ ನಿರೂಪಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಮುಕ್ತ ಚಿಂತನೆಗೆ ಅಪಾಯವಿದೆ: ಎಸ್. ಸಿರಾಜ್ ಅಹಮದ್

ಕಾರ್ಯಕ್ರಮದಲ್ಲಿ ವಿಭಾಗದ ವಿದ್ಯಾರ್ಥಿನಿ ಶ್ವೇತಾ ಬಾಳಿ, ಭಾಷಾಂತರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಮಾಧವ, ರೆಬೆಕ್ಕ, ಬರ‍್ಗಿ ಜಯಶ್ರೀ, ವಿನೀತ, ವಿಭಾಗದ ವಿದಾರ್ಥಿಗಳು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...