ವಿಜಯನಗರ | ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಎಸ್‌ಎಫ್‌ಐ ಒತ್ತಾಯ

Date:

ವಿಜಯನಗರದ ಕಮಲಾಪುರ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಹಾಗೂ ಪ್ರತಿ ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ವಿಜಯನಗರ ತಾಲೂಕು ಸಮಿತಿ ಒತ್ತಾಯಿಸಿದೆ.

ಕಮಲಾಪುರದ ಪುರಸಭೆಯ ಮುಖ್ಯಧಿಕಾರಿ ಡಿ ಈರಣ್ಣ, ಬಸ್ ನಿಲ್ದಾಣ ಅಧಿಕಾರಿಗಳು ಪಿ.ವಾಸುದೇವ್ ಹಾಗೂ ಕೆಡಿಪಿ ಮೆಂಬರ್ ಕಾಳಪ್ಪ ಅವರಿಗೆ ಎಸ್‌ಎಫ್‌ಐ ಮನವಿ ಪತ್ರ ಸಲ್ಲಿಸಿದೆ.

ಎಸ್ಎಪ್ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವರೆಡ್ಡಿ ಮಾತನಾಡಿ, “ಕಮಲಾಪುರುದ ಸುತ್ತು ಮುತ್ತಲಿನ ಗ್ರಾಮೀಣ ಪ್ರದೇಶದಿಂದ ಅತಿ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕಮಲಾಪುರದ ಕಾಲೇಜಿಗೆ ಬರುತ್ತಾರೆ. ಆದರೆ, ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಿಂದ ದೂರ ಉಳಿಯುವ ಪರಿಸ್ಥಿತಿ ಬಂದಿದೆ ಹಾಗಾಗಿ ಅದಕ್ಕೆ ಅವಕಾಶ ಕೊಡದೆ ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಇಲ್ಲದ ಹಳ್ಳಿಗಳಿಗೆ ಕೂಡುಲೆ ಬಸ್ ಬಿಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಸಹಕಾರ್ಯದರ್ಶಿ ಕೆ.ಎ. ಪವನ್ ಕುಮಾರ್ ಮಾತನಾಡಿ, “ಕಾಲೇಜು ಇಲ್ಲದ ಸಮಯದಲ್ಲಿ ಪುಂಡ ಪೋಕರಿಗಳು ಕಾಲೇಜಿನ ಆವರಣದಲ್ಲಿ ಡ್ರಿಂಕ್ಸ್, ಅನೈತಿಕ ಚಟುವಟಿಕೆಗಳು, ಹಾಗೂ ಕಾಲೇಜು ಗೋಡೆಗಳ ಮೇಲೆ ಅಶ್ಲೀಲ ಬರೆಯುತ್ತಿದ್ದಾರೆ. ಹಾಗಾಗಿ ಇದಕ್ಕೆಲ್ಲಾ ಕಡಿವಣ ಹಾಕವಂತೆ ಎಸ್‌ಎಫ್‌ಐ ಒತ್ತಾಯಿಸುತ್ತದೆ.. ಅಲ್ಲದೇ ಶಾಲಾ-ಕಾಲೇಜು ಒಂದೇ ಆವರಣದಲ್ಲಿ ಇರವುದರಿಂದ ಕಾವಲುಗಾರನನ್ನು ನೇಮಕ ಮಾಡಬೇಕು. ಕಾಲೇಜಿನ ಆವರಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ವಿಜಯನಗರ | ಮಕ್ಕಳ ಸಾಹಿತ್ಯಕ್ಕೆ ಅಂತರಾಳದ ಅಭಿವ್ಯಕ್ತಿ ಅತ್ಯಗತ್ಯ: ಡಾ. ಕೆ ಶಿವಲಿಂಗಪ್ಪ ಹಂದಿಹಾಳು

ಈ ವೇಳೆ ಕಾಲೇಜು ಘಟಕದ ಅಧ್ಯಕ್ಷೆ ಹರಿಪ್ರಿಯಾ, ಕಾರ್ಯದರ್ಶಿ ದುರ್ಗೇಶ್, ಉಪಾಧ್ಯಕ್ಷ ಸುಭಾಷ್, ಸುಲೋಚನ, ಮೋಹಿನಿ ಶ್ರೀನಿಧಿ, ಸಹಕಾರ್ಯದರ್ಶಿ ಕೇಶವ, ರಮೇಶ್, ಅಜಯ, ಸದಸ್ಯ ವೀರೇಶ್, ನಾಗರಾಜ್, ಮಾರೆಮ್ಮ ಹಾಗೂ ನುರೂರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...