ವಿಜಯನಗರ | ಬೀದಿ ನಾಯಿ ದಾಳಿ; 2 ವರ್ಷದ ಮಗು ಗಂಭೀರ

Date:

ವಿಜಯನಗರದ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ನಗರದಲ್ಲಿ 2 ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಪರಿಣಾಮ, ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಳೆದ ವಾರ ಜರುಗಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜೈ ಭೀಮ (2) ಮಗು ಮನೆಯ ಅಂಗಳದಲ್ಲಿ ಆಟ ವಾಡುತ್ತಿದ್ದ ಸಮಯದಲ್ಲಿ ಬೀದಿ ನಾಯಿ ದಿಢೀರ್ ದಾಳಿ ನಡೆಸಿದ್ದು, ಮಗುವಿನ ತಲೆ ಹಾಗೂ ಕಣ್ಣಿನ ಭಾಗದಲ್ಲಿ ಚರ್ಮ ಕಿತ್ತು ಬಂದಿದೆ. ಕೂಡಲೇ ಸ್ಥಳೀಯರು ಹಾಗೂ ಪೋಷಕರು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೀದಿ ನಾಯಿಗಳ ದಾಳಿಗಳು ಆಗಾಗ ನಡೆಯುತ್ತಲೇ ಇದ್ದು, ತೀವ್ರ ಆತಂಕ ಸೃಷ್ಟಿಸಿದೆ ಎಂದು ಮಗು ತಾಯಿ ಶೃತಿ ಹೇಳಿದ್ದಾರೆ.

ಘಟನೆ ಜರುಗಿ ಮೂರು ದಿನಗಳಾದರೂ ಗಾಯದ ಸ್ಥಿತಿ ಗತಿ ಸುಧಾರಿಸಿಲ್ಲ, ನೋವು ಕಡಿಮೆಯಾಗಿಲ್ಲ. ವಿಪರೀತ ಬಾವು ಉಂಟಾಗಿದೆ. ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅಶಕ್ತರಾಗಿದ್ದು, ಹೆಚ್ಚಿನ ಚಿಕಿತ್ಸೆಯನ್ನು ಒದಗಿಸುವ ಆರ್ಥಿಕ ಶಕ್ತಿ ನನ್ನ ಬಳಿ ಇಲ್ಲ. ಗಾಯ ಗುಣಮುಖವಾಗುವವರೆಗೆ ನಿರಂತರ ಚಿಕಿತ್ಸೆ ಒಸಗಿಸಬೇಕಿದ್ದು, ಚಿಕಿತ್ಸೆ ದೊರಕಿಸುವ ಶಕ್ತಿ ತನ್ನ ಬಳಿ ಇಲ್ಲ ಎಂದು ತಾಯಿ ಶೃತಿ ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಯಾಳು ಮಗುವಿನ ಮನಗೆ ಜನಪ್ರತಿನಿಧಿಗಳು, ಪಪಂ ಅಧಿಕಾರಿಗಳು, ಶಾಸಕರ ಕಚೇರಿಯ ಸಿಬ್ಬಂದಿಯವರು ಶೀಘ್ರವೇ ಭೇಟಿ ನೀಡಿ, ವಸ್ತು ಸ್ಥಿತಿಯನ್ನರಿತು ಅಗತ್ಯ ನೆರವು ನೀಡಬೇಕಿದೆ ಎಂದು ವಂದೇ ಮಾತರಂ ಜಾಗೃತಿ ವೇದಿಕೆ, ಮಾದಿಗ ದಂಡೋರ ಹೋರಾಟ ಸಮತಿ, ದಲಿತ ಸಂಘರ್ಷ ಸಮಿತಿ, ಬಾಬು ಜಗ ಜೀವನ್ ರಾಮ್ ಸಂಘ, ಅಂಬೇಡ್ಕರ್‌ ಸಂಘ ಸೇರಿದಂತೆ ವಿವಿದ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ವಿಜಯನಗರ | ಶಂಕರರ ‘ಅನ್ಯ’ ಕಾದಂಬರಿ ಅವಲೋಕನ; ಹಂಪಿ ವಿವಿ ವಿದ್ಯಾರ್ಥಿಗಳಿಂದ ಸಂವಾದ

ಪಟ್ಟಣದ ಪ್ರತಿ ಗಲ್ಲಿಗಳಲ್ಲಿ ಹತ್ತಾರು ಬೀದಿನಾಯಿಗಳಿವೆ. ಅವು ಮಕ್ಕಳ ಮಹಿಳೆಯರ ವೃದ್ಧರ ಮೇಲೆ ದಾಳಿ ಮಾಡುತ್ತಿವೆ. ಮನೆಯಂಗಳದಲ್ಲಿ ಕಟ್ಟಿಹಾಕಿರುವ ದನಕರು ಸಾಕು ಪ್ರಾಣಿಗಳನ್ನು ಕಚ್ವುತ್ತಿವೆ, ಮಕ್ಕಳ ಮೇಲೆ ಮಾರಣಾಂತಿಕ ದಾಳಿ ಪ್ರಕರಣಗಳು ಅತೀ ಹೆಚ್ಚಾಗಿ ಜರುಗುತ್ತಿವೆ. ಆದ್ದರಿಂದ ಅಧಿಕಾರಿಗಳು ಶೀಘ್ರವೇ ಸೂಕ್ತ ಕ್ರಮವಹಿಸಬೇಕು ಎಂದು ಒತ್ತಾಯಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...