ವಿಜಯನಗರ | ಶ್ರದ್ಧೆಯಿಂದ‌ ಓದಿದರೆ ಜೀವನದಲ್ಲಿ ಸಾಧನೆ ಸಾಧ್ಯ: ಶಾಸಕ ಕೃಷ್ಣನಾಯ್ಕ್

Date:

ವಿದ್ಯಾರ್ಥಿಗಳ ಜೀವನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬಹುಮುಖ್ಯವಾದ ಪರೀಕ್ಷೆ. ಓದಿನ ತಯಾರಿ ಮಕ್ಕಳಲ್ಲಿ ಹೆಚ್ಚಾಗಬೇಕು. ಬೌದ್ಧಿಕ ತಿಳುವಳಿಕೆಗೆ ಕೇವಲ ಪಠ್ಯಪುಸ್ತಕಗಳಿಗೆ ಕೇಂದ್ರೀಕೃತವಾಗದೇ ಪತ್ರಿಕೆ, ಬೇರೆಬೇರೆ ಕೃತಿಗಳನ್ನು ಓದಬೇಕು ಎಂದು ಶಾಸಕ ಕೃಷ್ಣನಾಯ್ಕ್ ತಿಳಿಸಿದರು.

ಅವರು ಹೂವಿನಹಡಗಲಿ ಸರಕಾರಿ ನೌಕರರ ಭವನದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಛೇರಿ ಶಾಲಾ ಶಿಕ್ಷಣ ಇಲಾಖೆಯಿಂದ ಅಯೋಜಿಸಿದ್ದ. 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕಾಗಿ ಪ್ರೌಢಶಾಲಾ ಮುಖ್ಯ ಗುರುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪರೀಕ್ಷಾ ಪ್ಯಾಕೇಜ್‌ ಅನಾವರಣಗೊಳಿಸಿ, ಮಾತನಾಡಿದರು.

ವಿದ್ಯಾರ್ಥಿಗಳ ಜೀವನದಲ್ಲಿ ಎಸ್‌ಎಸ್‌ಎಲ‌್‌ಸಿ ಪ್ರಮುಖ ಘಟ್ಟ. ಶ್ರದ್ಧೆಯಿಂದ ಓದಿದರೆ ಸಾಧನೆ ಸಾಧ್ಯ. ಅಕ್ಷರಗಳ ಗಂಧವೇ ಗೊತ್ತಿಲ್ಲದ ಸಾವಿತ್ರಿಬಾಯಿ ಪುಲೆಗೆ ಗಂಡ ಜ್ಯೋತಿ ಬಾಪುಲೆ ಅಕ್ಷರಗಳನ್ನು ಬರೆಯೋದನ್ನ, ಓದುವುದನ್ನು ಕಲಿಸಿದರು. ಇವತ್ತು ಸಾವಿತ್ರಿ ಭಾರತದ ಮೊಟ್ಟಮೊದಲ ಶಿಕ್ಷಕಿ ಆಗಿದ್ದಾರೆ. ಆ ಮೂಲಕ ಅಕ್ಷರ ಮಾತೆ ಎಂದು ಕರೆಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಪುರುಷರಿಗೆ ಅದರಲ್ಲೂ ಮೇಲ್ವರ್ಗದ ಪುರುಷರಿಗೆ ಮೀಸಲಿದ್ದ ಶಿಕ್ಷಣ ವ್ಯವಸ್ಥೆಯನ್ನು ವಿರೋಧಿಸಿ ದಲಿತ, ಶೂದ್ರ, ಮಹಿಳೆಯರು ಶಿಕ್ಷಣವಂತರನ್ನಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟರು. ಶಿಕ್ಷಣ ಎಂಬುದು ಹುಲಿಯ ಹಾಲಿನಂತೆ, ಅದನ್ನ ಕುಡಿದವರು ಗರ್ಜಿಸಲೇಬೇಕು” ಎಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಹಾಗಾಗಿ ಸರಕಾರದ ಸೌಲಭ್ಯಗಳನ್ನು, ಮಕ್ಕಳ ಭವಿಷ್ಯ ರೂಪಿಸಲು ಬಳಸಬೇಕು. ಶಿಕ್ಷಕ ಮಕ್ಕಳಿಗೆ ಪ್ರೇರಕ, ಪ್ರೇರಣೆ ಆಗಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 04 at 11.15.18 PM 1

ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನಿಷ್ಠ ಅಂಕಗಳನ್ನು ಗಳಿಸುವ ಸದುದ್ದೇಶದಿಂದ ಪರೀಕ್ಷಾ ಪ್ಯಾಕೇಜ್ ತಾಲೂಕಿನ ಎಲ್ಲ ಪ್ರೌಢಶಾಲೆಗಳಿಗೆ ವಿತರಿಸುವ ಕಾರ್ಯ ಉತ್ತಮ ಸಂಯೋಜನೆ ಎಂದು ತಿಳಿಸಿದ ಅವರು, ಅಧಿಕ ಅಂಕ ಗಳಿಸುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು. ನಿಧಾನಗತಿಯ ಮಕ್ಕಳಿಗೂ ವಿಶೇಷ ಆದ್ಯತೆ ನೀಡಿ ಎಂದು ಹೇಳಿದರು.

ತಾಲೂಕಿನ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಮುಖ್ಯ ಗುರುಗಳು ಸಹ ಶಿಕ್ಷಕರು ಶಾಲೆಯ ಹಳೆ ವಿದ್ಯಾರ್ಥಿಗಳ ಮನಒಲಿಸಿ ಕುಡಿಯುವ ನೀರು ಕಂಪ್ಯೂಟರ್ ಗ್ರಂಥಾಲಯ ಪ್ರಯೋಗಾಲಯ ಅಭಿವೃದ್ಧಿ ಪಡಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮೈಸೂರು | ಹಂದಿಜೋಗಿ ಕುಟುಂಬ ಬೀದಿಪಾಲು: ಹೊರಳವಾಡಿ ಹೊಸೂರಿನಲ್ಲಿ ಅಮಾನವೀಯ ಘಟನೆ

ಉಪ ನಿರ್ದೇಶಕರಾದ ವೆಂಕಟೇಶ್ ರಾಮಚಂದ್ರಪ್ಪ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಫಲಿತಾಂಶ ಸುಧಾರಣೆಗಾಗಿ ಸರಣಿ ಸಭೆ ನಡೆಸಿ ಮಾರ್ಗದರ್ಶನ ನೀಡಲಾಗುತ್ತಿದೆ. ತಾಲೂಕಿನ ಎಲ್ಲ ಪ್ರೌಢಶಾಲೆಗಳ ಫಲಿತಾಂಶ ಪ್ರಗತಿ ಪರಿಶೀಲಿಸಿ ಉಪಯುಕ್ತ ಮಾಹಿತಿ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ, ವಿಷಯ ಶಿಕ್ಷಕರ ಸರಣಿ ಸಭೆ, ಬೆಳಿಗ್ಗೆ ವಿಶೇಷ ತರಗತಿ, ಸಂಜೆ ಗುಂಪು ಅಧ್ಯಯನ, ಪೋಷಕರ ಸಭೆ, ಪಾಲಕರ ಮನೆ ಭೇಟಿ ಮೊದಲಾದ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಅಯ್ಯನಗೌಡರ ಕೊಟ್ರಗೌಡ, ಎಚ್ ಹುಲಿಬಂಡಿ, ಬಸವಂತಯ್ಯ ಹಿರೇಮಠ, ಎ ಕೋಟೆಪ್ಪ, ವಿ ಹನುಮಂತಪ್ಪ, ಜಿ ಎಂ ಕಾಂತೇಶ್, ಎಂ ಶಿವಲಿಂಗಪ್ಪ, ಗಡ್ಡಿ ಶಿವಕುಮಾರ್, ಶಿವಬಸವ ಸ್ವಾಮಿ ಹಿರೇಮಠ, ಬಸಪ್ಪ ಕೆ, ಎಂ ಶೇಕ್ ಅಹಮದ್, ಕಸ್ತೂರಿ ಮುದ್ದಿ, ಎಲ್ ಖಾದರಬಾಷಾ, ವಿಶ್ವನಾಥ ಕೋರಿ, ಚಂದ್ರಪ್ಪ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...