ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಹಿಂದು-ಮುಸ್ಲಿಂ ಭಯೋತ್ಪಾದಕತೆಯಂತಿದೆ: ಸಚಿವ ರಾಮಲಿಂಗಾರೆಡ್ಡಿ

Date:

ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಹಿಂದು ಹಾಗೂ ಮುಸ್ಲಿಂ ಸಂಘಟನೆಗಳ ಭಯೋತ್ಪಾದಕರ ಕಾರ್ಖಾನೆಯಂತೆ ತೋರುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ವಿಜಯನಗರದ ಹೊರವಲಯದ ಅಮರಾವತಿ ಗ್ರಾಮದಲ್ಲಿ ನಿರ್ಮಿಸಲಾದ ದೇವರಾಜ ಅರಸ್ ಟ್ರಕ್ ಟರ್ಮಿನಲ್ ಉದ್ಘಾಟನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದಕ್ಷಿಣ ಕನ್ನಡದ ಚರಿತ್ರೆ ತೆಗೆದು ನೋಡಿದರೆ ಯಾರೇನೂ ಕಡಿಮೆ ಇಲ್ಲವೆಂದೇ ಅರ್ಥ. ಯಾರೇ ಇಂತಹ ಹೀನ ಕೃತ್ಯ ಮಾಡಿರಲಿ,‌ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲೇಬೇಕು” ಎಂದು ಆಗ್ರಹಿಸಿದರು.

“ಒಂದು ಕೈಯಿಂದ ಚಪ್ಪಾಳೆ ಆಗಲು ಸಾಧ್ಯವಿಲ್ಲ. ಎರಡೂ ಕೋಮುದ್ವೇಷಿ ಸಮುದಾಯಗಳಿಂದ ಅಪಾರ ಸಂಖ್ಯೆಯಲ್ಲಿ ಕೊಲೆಯಾಗಿವೆ. ಗಲಾಟೆ ಮಾಡಿದವರು, ಕೊಲೆ ಮಾಡಿದವರು ಬಂಧಿತರಾಗುತ್ತಾರೆ. ಆದರೆ, ಅವರ ಹಿಂದೆ ಇರುವ ಶಕ್ತಿಗಳ ಬಂಧನ ಆಗುತ್ತಿಲ್ಲ. ಬಡ ಜೀವಗಳು ಕೊಲೆಯಾಗುತ್ತಿವೆ. ಬಡವರು ಅಪರಾಧ ಮಾಡಿ ಜೈಲುಪಾಲಾಗುತ್ತಿದ್ದಾರೆ. ನಾನು ಗೃಹಸಚಿವನಾಗಿದ್ದಾಗ ಗಲಭೆಯ ಹಿಂದೆ ಯಾರಿದ್ದಾರೋ ಅವರನ್ನು ಹುಡುಕುವ ಪ್ರಯತ್ನ ಮಾಡಿ ಕಾನೂನು ಕ್ರಮ ಕೈಗೊಂಡಿದ್ದೆ. ಬಷೀರ್, ದೀಪಕ್ ರಾವ್ ಪ್ರಕರಣಗಳು ಇದಕ್ಕೆ ಸಾಕ್ಷಿಗಳಾಗಿವೆ. ಐದಾರು ವರ್ಷ ಯಾವುದೇ ಇಂತಹ ಘಟನೆಗಳು ಆಗಿರಲಿಲ್ಲ, ಈಗ ಮತ್ತೆ ಆರಂಭವಾಗಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಗೃಹ ಸಚಿವನಾಗಿದ್ದಾಗ ‘ನಗ್ನ ಸತ್ಯ’ ಎಂಬ ಪುಸ್ತಕ ಬಿಡುಗಡೆ ಮಾಡಿದ್ದೆ. ಅದನ್ನು ಓದಿದರೆ ಗಲಭೆ ನಡೆಯುವ ಹಿನ್ನೆಲೆ, ಕಾರಣಗಳು ಗೊತ್ತಾಗುತ್ತವೆ. ಸುಹಾಸ್ ಶೆಟ್ಟಿಯನ್ನು ರೌಡಿ ಶೀಟರ್ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ನಾವು ಯಾರಿಗೂ ಕುಮ್ಮಕ್ಕು ಕೊಡುವುದಿಲ್ಲ. ಇಲ್ಲಿ ನಮ್ಮ ಪಕ್ಷದವರು ಇದ್ದರೂ ‘ಅಂತರವನ್ನು ಬಂಧಿಸಿ’ ಎಂದೇ ಹೇಳುತ್ತೇವೆ. ಆರೋಪಿಗಳು ಜೈಲಿಗೆ ಹೋದಾಗ, ಕುಟುಂಬ ಸಂರಕ್ಷಣೆ ಮಾಡೋರು ಯಾರು? ಕೋರ್ಟ್ ಗೆ ಓಡಾಡೋರು ಯಾರು? ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು” ಎಂದರು.

ಇದನ್ನೂ ಓದಿ: ವಿಜಯನಗರ | ಪಹಲ್ಗಾಮ್‌ನ ಉಗ್ರ ದಾಳಿ; ಡಿವೈಎಫ್‌ಐ ಆಕ್ರೋಶ

ಮುಂದುವರೆದು, “ಕೆಎಸ್‌ಆರ್‌ಟಿಸಿ ನೌಕರರ ಸಂಬಳ ಬಾಕಿ ಸಮಸ್ಯೆಗೆ ಬಿಜೆಪಿ ಸರ್ಕಾರವೇ ಕಾರಣ. ಅವರ ಅವಧಿಯಲ್ಲಿ ಬಾಕಿ ಉಳಿಸಿದ ಹಣವೇ ಹೆಚ್ಚಾಗಿದೆ. ಬಜೆಟ್ ಇಲ್ಲದೆ ಘೋಷಣೆ ಮಾಡಿದ್ದರಿಂದ ಹೀಗಾಗಿದೆ. ಈ ಸಮಸ್ಯೆಯನ್ನು ಸದ್ಯದಲ್ಲೇ ಬಗೆಹರಿಸಲಾಗುತ್ತದೆ. ಅಲ್ಲದೆ ಅವಧಿ ಮುಗಿದ ಯಾವುದೇ ವಾಹನವನ್ನು ಓಡಿಸಲ್ಲ, 15 ವರ್ಷ ದಾಟಿದ ಯಾವುದೇ ವಾಹನವನ್ನು ರಸ್ತೆಗೆ ಇಳಿಸಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ 700 ಹೊಸ ಬಸ್ ನೀಡಲಾಗುತ್ತದೆ. ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಬಸ್ ಕೊಟ್ಟಿರಲಿಲ್ಲ” ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...