ವಿಜಯನಗರ | ಕಾಂಗ್ರೆಸ್‌ನವರೇ ನಿಜವಾದ ರಾಮ ಭಕ್ತರು, ನೀವಲ್ಲ; ಬಿಜೆಪಿ ನಾಯಕರಿಗೆ ಉಗ್ರಪ್ಪ ತಿರುಗೇಟು

Date:

ʼಕಾಂಗ್ರೆಸ್‌ನವರೇ ನಿಜವಾದ ರಾಮ ಭಕ್ತರು, ನೀವಲ್ಲʼ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ವಿಜಯನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ರಾಮ ದೇವರಲ್ಲ, ರಾಮ ದೇವರಲ್ಲ, ರಾಮ ಮನುಷ್ಯ. ಆತ ರಾಜಕುಮಾರ, ರಾಜ” ಎಂದು ಒತ್ತಿ ಹೇಳಿದರು.

“ಈ ಬಾರಿ ರಾಮನ ಹೆಸರಲ್ಲಿ ಲೋಕಸಭಾ ಚುನಾವಣೆಯಲ್ಲಿ ಎತ್ತಿಕಟ್ಟುತ್ತಾರೆ. ಕಳೆದ ಬಾರಿ ಪುಲ್ವಾಮಾ ಹೆಸರಲ್ಲಿ ಚುನಾವಣೆ ಮಾಡಿದ್ದೀರಿ. ಈ ಬಾರಿ ರಾಮನ ಹೆಸರಲ್ಲಿ ಚುನಾವಣೆ ನಡೆಸಲು ಹೊರಟಿದ್ದೀರಿ. ಆದರೆ ರಾಮನ ಹೆಸರು ಹೇಳೋದಕ್ಕೆ ನಿಮಗೆ ಯೋಗ್ಯತೆ ಇಲ್ಲ. ರಾಮನ ಹೆಸರು ಹೇಳೋದಕ್ಕೆ ಯೋಗ್ಯರಿರುವರು ಕಾಂಗ್ರೆಸ್‌ನವರು. ಶಿಲಾನ್ಯಾಸ ಮಾಡಿದ್ದು ಕಾಂಗ್ರೆಸ್‌ನವರೇ, ಇದೀಗ ಟ್ರಸ್ಟ್ ಅನ್ನೇ ಹೈಜಾಕ್ ಮಾಡಿದ್ದಾರೆಂದು ಆರೋಪಿಸಿ, ರಾಮ ಕೊಟ್ಟ ವಚನವನ್ನು ಈಡೇರಿಸಿದನು. ಆದರೆ ನರೇಂದ್ರ ಮೋದಿ ವಚನಭ್ರಷ್ಟರಾಗಿದ್ದಾರೆ” ಎಂದು ಮಾಜಿ ಸಂಸದ ಉಗ್ರಪ್ಪ ಗುಡುಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮನ ಬಗ್ಗೆ ನಿಮಗೇನಾದರೂ ಭಕ್ತಿ ಇದೆಯಾ, ರಾಮ ದೇವರಲ್ಲ, ಆತ ಮನುಷ್ಯ. ಆತ ರಾಜನಾಗಿದ್ದು, ತನ್ನ ಆದರ್ಶಗಳ ಮೂಲಕ ರಾಮ ದೈವತ್ವವನ್ನು ಪಡೆದ” ಎಂದು ಉಗ್ರಪ್ಪ ಪ್ರತಿಪಾದಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪಶ್ಚಿಮ ಬಂಗಾಳದ ವರದಿಗಾರ ಸಂತುಪನ್ ಬಂಧನಕ್ಕೆ ಖಂಡನೆ

“ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸೀಟ್ ಗೆದ್ದೇ ಗೆಲ್ಲುತ್ತೇವೆ” ಎಂಬ ಬಿಜೆಪಿ ನಾಯಕರ ಮಾತಿಗೆ ಉಗ್ರಪ್ಪ ಅವರು ತಿರುಗೇಟು ನೀಡಿದ್ದು, “ಯಾವ ಪುರುಷಾರ್ಥಕ್ಕೆ ನಿಮಗೆ 400 ಸೀಟ್ ಕೊಡಬೇಕು?. ಚೀನಾ, ಪಾಕಿಸ್ತಾನ, ಮಾಲ್ಡೀವ್ಸ್ ಸೇರಿದಂತೆ ಅಕ್ಕಪಕ್ಕದ ದೇಶಗಳು ನಮ್ಮ ವಿರುದ್ಧ ಇವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...