ವಿಜಯನಗರ | ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿತ; ಸಾರ್ವಜನಿಕರಿಂದ ಆಕ್ರೋಶ

Date:

ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿದಿರುವ ದೃಶ್ಯ ಕಂಡು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದೆ.

ಹರಪನಹಳ್ಳಿ ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ನಡೆದ ಪ್ರಾಥಮಿಕ ಶಿಕ್ಷಕರ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶದ ಹೆಸರಲ್ಲಿ ಶಿಕ್ಷಕರು ಗುಂಪುಗೂಡಿದ್ದು, ಯಾವುದೇ ಪರವಾನಗಿಯನ್ನು ಪಡೆಯದೆ ಡೋಲು ತಮಟೆಗಳನ್ನು ಬಳಸಿ ಪಟಾಕಿ ಸಿಡಿಸಿ ಅರಾಜಕತೆ ಮೆರವಣಿಗೆ ಮಾಡಿದ್ದಾರೆ. ಶಿಷ್ಟಾಚಾರವನ್ನು ಮರೆತು ಕೂಗುತ್ತ, ಚೀರುತ್ತ ಮನಬಂದಂತೆ ಕುಣಿದು ಕುಪ್ಪಳಿಸಿರುವ ವರ್ತನೆಗೆ ಸಾರ್ವಜನಿಕರು, ಪಟ್ಟಣದ ನಾಗರಿಕರು ಶಿಕ್ಷಕರನ್ನು ನೋಡಿ ತಲೆಬಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಲ್ಲದೇ ಆಕ್ರೋಶ ವ್ಯಕ್ತವಾಗಿರುವುದು ಕಂಡುಬಂದಿತು.

ಈ ಘಟನೆಯು ಶನಿವಾರ ರಾತ್ರಿ 9:30ರ ಸುಮಾರಿಗೆ ಚುನಾಯಿತ ಶಿಕ್ಷಕರು ಮತ್ತು ಬೆಂಬಲಿತ ಶಿಕ್ಷಕರು ಭಾರೀ ಮೆರವಣಿಗೆಯನ್ನು ಮಾಡಿದ್ದರು. ಸಮಾಜದಲ್ಲಿ ಮಕ್ಕಳಿಗೆ ಉತ್ತಮ ಪಾಠ ಬೋಧನೆ ಮಾಡಿ ಉತ್ತಮ ಸಮಾಜ ಕಟ್ಟಿ, ಸಮಾಜವನ್ನು ಉತ್ತಮದ ಕಡೆಗೆ ನಡೆಸಬೇಕಾದಂಥ ಶಿಕ್ಷಕರೇ ಹೀಗೆ ನೈತಿಕ ಶಿಷ್ಟಾಚಾರವನ್ನು ಉಲ್ಲಂಘಿಸಿ ಮನಬಂದಂತೆ ಕುಣಿಯುತ್ತ ಕೂಗುತ್ತ ಪಟ್ಟಣದ ಪ್ರಮುಖ ಬೀದಿಗಳ ಉದ್ದಕ್ಕೂ ಮೆರವಣಿಗೆ ಮಾಡಿದ್ದು ತೀರಾ ಮುಜುಗರದ ಸಂಗತಿಯಾಗಿದೆ. ಶಿಕ್ಷಕರ ವರ್ತನೆ ಇವತ್ತಿನ ರಾಜಕೀಯ ನಾಯಕರ ವರ್ತನೆಗೂ ಕೆಟ್ಟದಾಗಿದೆ ಎಂದು ಸಾರ್ವಜನಿಕರು ಛೀಮಾರಿ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವಿಪ್‌ ಉಲ್ಲಂಘನೆ; ಮಟಮಪ್ಪ, ವೀಣಾ ರಾಮು ಜೆಡಿಎಸ್‌ನಿಂದ ಉಚ್ಚಾಟನೆ

ಪೊಲೀಸ್ ಇಲಾಖೆಯ ಯಾವುದೇ ಪೂರ್ವ ಅನುಮತಿಯಿಲ್ಲದೆ ಈ ರೀತಿ ಮೆರವಣಿಗೆ ಮಾಡಿರುವುದು ಕಾನೂನನ್ನು ಉಲ್ಲಂಘಿಸಿದಂತೆ ಹಾಗೂ ಇವರ ಮರೆವಣಿಗೆಯಿಂದ ವಾಹನ ಸವಾರರಿಗೂ ಸಾಕಷ್ಟು ಕಿರಿಕಿರಿ ಉಂಟಾಗಿ ಅರ್ಧಗಂಟೆಗೂ ಹೆಚ್ಚುಕಾಲ ವಾಹನಗಳು ರಸ್ತೆಯಲ್ಲೇ ನಿಂತಿದ್ದರೂ ಕೂಡಾ ಪೊಲೀಸರು ಮಾತ್ರ ಇತ್ತಕಡೆ ತಿರುಗಿಯೂ ನೋಡಿಲ್ಲ. ಆದುದರಿಂದ ಸಂಬಂಧಪಟ್ಟ ವಿಜಯನಗರ ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಿಕ್ಷಣ ಇಲಾಖೆಯ ಆಯುಕ್ತರು, ಇತ್ತ ಕಡೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮೌಖಿಕವಾಗಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...