ವಿಜಯನಗರ | ಬಿಸಿಯೂಟದ ಅಕ್ಕಿ ಕಸದ ತೊಟ್ಟಿಗೆ ಸುರಿದ ಸಿಬ್ಬಂದಿ, ಗ್ರಾಮಸ್ಥರ ಆಕ್ರೋಶ

Date:

ಬಿಸಿಯೂಟಕ್ಕೆ ಬಳಸ ಬೇಕಿದ್ದ ಅಕ್ಕಿಯನ್ನು ಬಿಸಿಯೂಟದ ಅಡುಗೆ ಸಿಬ್ಬಂದಿ ಕಸದ ತೊಟ್ಟಿಗೆ ಸುರಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಮಕ್ಕಳಿಗೆ ಆಹಾರವಾಗಿ ನೀಡಬೇಕಿದ್ದ 50 ಕೆಜಿಗೂ ಅಧಿಕ ಅಕ್ಕಿಯನ್ನು ಸಿಬ್ಬಂದಿ ಕಸದ ರಾಶಿಗೆ ಸುರಿದಿದ್ದಾರೆ ಎಂದು ಹೊಳಲು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಅಕ್ಕಿ ಮುಗ್ಗು ಬಂದದ್ದರಿಂದ, ಮಕ್ಕಳಿಗೆ ಯೋಗ್ಯವಲ್ಲ ಎಂದು ಸಿಬ್ಬಂದಿ ಅಕ್ಕಿಯನ್ನು ತೊಟ್ಟಿಗೆ ಸುರಿದಿದ್ದಾರೆ ಎಂದು ಮುಖ್ಯ ಶಿಕ್ಷಕ ಲಿಂಗಪ್ಪ ಸಮರ್ಥನೆ ನೀಡಿದ್ದಾರೆ.

ಅಕ್ಕಿ ಕೆಡುವವರೆಗೆ ಯಾಕೆ ಸಂಗ್ರಹಿಸಿದ್ದೀರಿ ಎಂದು ಗ್ರಾಮಸ್ಥರು ಪ್ರಶ್ನೆ ಮಾಡಿದ್ದು, ತಪ್ಪಿತರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...