ವಿಜಯನಗರ | ಭಾರತದ ವಿವಿಧತೆ ತಿಳಿಯಲು ಭಾಷಾಂತರ ಅಗತ್ಯ: ಬಸವರಾಜ ಟಿ ಎಚ್

Date:

ಹಲವು ರಾಜ್ಯಗಳನ್ನು ಹೊಂದಿರುವ ಬಹುತ್ವ ಭಾರತದಲ್ಲಿ ಸಂಸ್ಕೃತಿ, ಭಾಷೆ, ಆಚಾರ ವಿಚಾರ ಭಿನ್ನವಾಗಿವೆ. ಅದನ್ನು ನಾವು ತಿಳಿಯಬೇಕಾದರೆ ಭಾಷಾಂತರ ಕಲಿಕೆಯ ಅಗತ್ಯವಿದೆ ಎಂದು ವಿಜಯನಗರ ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿ ಮಂಡಳಿ ಸದಸ್ಯ ಬಸವರಾಜ್ ಟಿ ಎಚ್ ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ನುಡಿ ಕಟ್ಟಡದಲ್ಲಿ ಭಾಷಾಂತರ ಕೇಂದ್ರ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಭಾಷಾಂತರ ಅಧ್ಯಯನ ವಿಭಾಗ ಅಲ್ಯುಮ್ನಿ ಸಹಯೋಗದಲ್ಲಿ ಮೂರು ದಿನಗಳ ಭಾಷಾಂತರ ತರಬೇತಿ ಕಮ್ಮಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಸವರಾಜ್ ಟಿ ಎಚ್ ಉದ್ಘಾಟಿಸಿ ಮಾತನಾಡಿದರು.

“ಅನುವಾದದಲ್ಲಿ ಮೂಲಕೃತಿಗೆ ಹಲವಾರು ಬಾರಿ ಧಕ್ಕೆ ಉಂಟಾಗುವ ಸಾಧ್ಯತೆ ಇರುತ್ತದೆ. ಅದನ್ನು ಅರಿತುಕೊಳ್ಳಬೇಕು. ಇಂಗ್ಲೀಷ್ ಭಾಷೆಯಲ್ಲಿ ನಾವು ಒಮ್ಮೆಲೇ ಧುಮುಕುತ್ತಿದ್ದೇವೆ. ನಿಧಾನವಾಗಿ, ಸರಳವಾಗಿ ಅರ್ಥ ಮಾಡಿಕೊಂಡು ಕಲಿಯಬೇಕು. ಇಂಗ್ಲಿಷ್‌ನ ಬಹುದೊಡ್ಡ ಬರಹಗಾರರಾದ ಜಾರ್ಜ್ ಬರ್ನಾಡ್ ಶಾ, ʼಎಲ್ಲರಿಗೂ ಇಂಗ್ಲಿಷ್ ಬರುತ್ತದೆ ಆದರೆ ಅದನ್ನು ಒಪ್ಪುವ ರೀತಿ ನಮಗೆ ಕಷ್ಟವಾಗುತ್ತಿದೆ’ ಎಂದು ಹೇಳಿದ್ದಾರೆ. ಬೇರೆ ದೇಶಗಳಲ್ಲಿ ಒಂದೇ ರೀತಿಯ ಇಂಗ್ಲಿಷ್ ಮಾತನಾಡುವವರು ಸಿಗುವುದು ಕಷ್ಟ. ಅವರು ಮಾತನಾಡುವ ಶೈಲಿ ಭಿನ್ನವಾಗಿರುತ್ತದೆ. ಭಾಷೆಯು ಬಳಕೆಯಿಂದ ಬರುತ್ತದೆ ವಿನಹ ಓದಿದರೆ, ಬರೆದರೆ ಬರುವುದಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅನಿವಾರ್ಯದ ತೂಗುಗತ್ತಿಯಾಗಿ ಇಂಗ್ಲಿಷ್ ನಿಂತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 09 at 8.47.03 AM 1

ಭಾಷಾಂತರ ಕೇಂದ್ರ ಮತ್ತು ಐಕ್ಯೂಎಸಿ ನಿರ್ದೇಶಕ ಡಾ. ಎ ಮೋಹನ್ ಕುಂಟಾರ್ ಮಾತನಾಡಿ, “ಪ್ರತಿ ವರ್ಷ ಎಂ.ಎ ವಿದ್ಯಾರ್ಥಿಗಳಿಗಾಗಿ ಭಾಷಾಂತರ ತರಬೇತಿ ಕಮ್ಮಟವನ್ನು ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ನಾನಾ ಕಡೆಗಳಿಂದ ಬರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವುದನ್ನು ಹೇಳಿಕೊಡಲಾಗುತ್ತದೆ. ಭಾಷಾಂತರ ಎನ್ನುವುದು ಕೇವಲ ತರಗತಿಯ ಚಟುವಟಿಕೆ ಮಾತ್ರ ಅಲ್ಲ ಇದನ್ನು ವಿಸ್ತರಿಸಬೇಕು. ಇಂಗ್ಲಿಷ್ ಒಂದೇ ಭಾಷೆ ಅಲ್ಲದೆ ನಮ್ಮ ಸಮೀಪದ ಭಾಷೆಗಳನ್ನು ತಿಳಿದುಕೊಂಡು ಅವುಗಳನ್ನು ಭಾಷಾಂತರ ಮಾಡುವ ಕಲೆಯನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು. ಭಾಷಾ ಸಂಬಂಧಿಯಾಗಿ ಮಾಡುವ ಕಾರ್ಯಗಳಿಗೆ ಗೊಂದಲಗಳು ಬಂದಲ್ಲಿ ಮುಕ್ತವಾಗಿ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ಭಾಷಾಂತರದಲ್ಲಿ ವೃತ್ತಿ ಸಾಧ್ಯತೆಯು ಬಹಳ ಇದೆ ಉಪಯೋಗ ಮಾಡಿಕೊಳ್ಳಬೇಕು” ಎಂದು ಹೇಳಿದರು.

WhatsApp Image 2025 03 09 at 8.47.02 AM

ಕನ್ನಡ ವಿವಿಯ ಕನ್ನಡ ಭಾಷಾ ನಿಕಾಯದ ಡೀನರಾದ ಡಾ. ಎಫ್ ಟಿ ಹಳ್ಳಿಕೇರಿ ಮಾತನಾಡಿ, “ಮಾತೃ ಭಾಷೆಯೊಂದಿಗೆ ಇನ್ನೊಂದು ಭಾಷೆಯನ್ನು ಕಲಿಯುವುದು ಇಂದಿನ ಕಾಲದಲ್ಲಿ ಮುಖ್ಯವಾಗಿದೆ. ಭಾಷಾಂತರ ಕಲೆಯನ್ನು ಹವ್ಯಾಸವಾಗಿ ಬೆಳೆಸಿದರೆ ಕಥೆ, ಕೃತಿ, ಲೇಖನಗಳನ್ನು ಬೇರೆ ಭಾಷೆಗೆ ಅನುವಾದ ಮಾಡುವುದು ಸುಲಭವಾಗುತ್ತದೆ. ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆಸುವ ಇಂತಹ ಭಾಷಾಂತರ ಕಮ್ಮಟಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತವೆ” ಎಂದರು.

ಇದನ್ನೂ ಓದಿ: ವಿಜಯಪುರ | ಮಹಿಳೆಯರಿಗೆ ಅವಕಾಶ ಕಲ್ಪಿಸಿದರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಸಚಿವ ಎಂ ಬಿ ಪಾಟೀಲ್

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖಸ್ಥರು, ಸಂಪನ್ಮೂಲ ವಿದ್ವಾಂಸರು, ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, ಐಕ್ಯೂಎಸಿ ಸಹಾಯಕ ನಿರ್ದೇಶಕಿ ಡಿ. ಪ್ರಭಾ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...