ವಿಜಯನಗರ | ಸಾರಿಗೆ ಬಸ್ ಚಾಲಕನಿಗೆ ಹಲ್ಲೆ; ಕೂಡ್ಲಿಗಿ ಮುಖ್ಯ ಪೊಲೀಸ್ ಪೇದೆ ವಿರುದ್ಧ ದೂರು ದಾಖಲು

Date:

ಕೂಡ್ಲಿಗಿ ತಾಲೂಕಿನ ಗಜಾಪುರ ಗ್ರಾಮದ ಬಳಿ ಸಾರಿಗೆ ಬಸ್ ತಡೆದು, ಕ್ಷುಲ್ಲಕ ಕಾರಣಕ್ಕೆ ಸಾರಿಗೆ ಬಸ್ ಚಾಲಕನ ಮೇಲೆ ಮುಖ್ಯ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಘಟನೆಯ ನಡೆದಿದೆ. ಈ ಕುರಿತು ಚಾಲಕ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪೇದೆಯ ವಿರುದ್ದ ದೂರು ದಾಖಲಿಸಿದ್ದಾರೆ.

ಕೂಡ್ಲಿಗಿ ಮುಖ್ಯ ಪೊಲೀಸ್ ಪೇದೆ ಮಂಜುನಾಥ ಸಾರ್ವಜನಿಕರೆದುರು ಹಾಗೂ ಪ್ರಯಾಣಿಕರೆದುರಲ್ಲಿ ಅಶ್ಲೀಲ ಪದಬಳಸಿ ನಿಂದನೆ ಮಾಡಿದ್ದಾರೆ ಹಾಗೂ ಚಪ್ಪಲಿಯಿಂದ ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಬಸ್‌ ಚಾಲಕ ಆರೋಪಿಸಿದ್ದಾರೆ.

ಬಸ್ ಚಾಲಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಠಾಣೆಯಲ್ಲೇ ಆರೋಪಿಯು ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರು ಕೂಡ್ಲಿಗಿ ಪಟ್ಟಣದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರಿ ಬಸ್ ಚಾಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ ಹೇಳಿಕೆ ನೀಡಿದ್ದು, “ತಾನು ಕರ್ಥವ್ಯದಲ್ಲಿದ್ದಾಗಲೇ ಚಪ್ಪಲಿಯಿಂದ ಹೊಡೆದು ಅಶ್ಲೀಲ ಪದಗಳಿಂದ ನಿಂದಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾನೆ. ಕೂಡ್ಲಿಗಿ ಮುಖ್ಯ ಪೊಲೀಸ್ ಪೇದೆ ಕ್ಷುಲ್ಲಕ ಕಾರಣಕ್ಕೆ , ಸಾರಿಗೆ ಬಸ್ ಅಡ್ಡಗಟ್ಟಿ ಚಾಲಕನ ಮೇಲೆ ಅಮಾನವೀಯವಾಗಿ ಹಿಗ್ಗಾಮುಗ್ಗಾ ಥಳಿಸಿದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 08 08 at 7.57.42 PM

ದಾವಣಗೆರೆ ಜಿಲ್ಲೆಯ ಹರಿಹರದಿಂದ ಕೂಡ್ಲಿಗಿ, ಸಂಡೂರು ಮಾರ್ಗವಾಗಿ ಬಳ್ಳಾರಿ ಕಡೆ ಚಲಿಸುತ್ತಿದ್ದ ಬಸ್, ಕೊಟ್ಟೂರಿನಿಂದ ನಿರ್ಗಮಿಸಿ ಮಲ್ಲನಾಯಕಹಳ್ಳಿ ಸಮೀಪದ ಮಾರ್ಗದಲ್ಲಿ ಮುಂದೆ ಚಲಿಸುತ್ತಿತ್ತು. ಬಸ್‌ ಮುಂದೆ ಚಲಿಸುತ್ತಿದ್ದ ಬೈಕ್ ಅನ್ನು ಹಿಂದಿಕ್ಕಲು ಬಸ್ ಚಾಲಕ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಎದುರಗಡೆಯಿಂದ ಕಾರೊಂದು ವೇಗವಾಗಿ ಬಂದಿದೆ. ಕೂಡಲೇ ಬಸ್ ಚಾಲಕ ರಾಮಲಿಂಗಪ್ಪ ಬಸ್‌ ಅನ್ನು ರಸ್ತೆ ಮೇಲೆ ತಿರುಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಿಜಯನಗರ | ಮುಕ್ತ ಚಿಂತನೆಗೆ ಅಪಾಯವಿದೆ: ಎಸ್. ಸಿರಾಜ್ ಅಹಮದ್

ಹಿಂದೆ ಇದ್ದ ಬೈಕ್ ಸವಾರ ಮುಖ್ಯ ಪೇದೆ ನಿಯಂತ್ರಣಕ್ಕೆ ತಂದುಕೊಂಡಿದ್ದಾನೆ. ಇದರಿಂದ ಕುಪಿತಗೊಂಡ, ಪೊಲೀಸ್ ಪೇದೆ ಬಸ್ ಅನ್ನು ಬೆನ್ನಟ್ಟಿ, ಗಜಾಪುರ ಗ್ರಾಮದ ಬಳಿ ಬರುತ್ತಿದ್ದಂತಿಯೇ, ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಚಾಲಕ ರಾಮಲಿಂಗಪ್ಪ ನಡೆದ ಘಟನೆಯ ಬಗ್ಗೆ ತಪ್ಪಾಗಿದೆಯೆಂದು ವಿಷಾದಿಸಿದರೂ ಮುಖ್ಯ ಪೇದೆ ಮಂಜುನಾಥರವರನ್ನು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಆದರೂ ಸುಮ್ಮನಾಗದೆ ಪುಡಿ ರೌಡಿಯಂತೆ ಬಸ್ ಒಳಗೆ ನುಗ್ಗಿ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡುತ್ತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರ ಮಾತಿಗೂ ಕಿವಿಗೊಟ್ಟಿಲ್ಲ ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.

ಪೊಲೀಸ್ ಪೇದೆ ಪುಡಿ ರೌಡಿಯಂತೆ ವರ್ತಿಸಿದ್ದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ಹಾಗೂ ಕಿರಿಯ ನಾಗರಿಗರಿಕರು ಚಾಲಕನ ತಪ್ಪು ಇದ್ದರೆ ಕಾನೂನು ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿತ್ತು. ಆದರೆ, ಈ ರೀತಿ ಪೊಲೀಸ್ ದರ್ಪ ಖಂಡನೀಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...