ವಿಜಯನಗರ | ಮಹಿಳಾ ಸಶಕ್ತೀಕರಣ, ಯುವ ಸಬಲೀಕರಣವೇ ʼಗ್ಯಾರಂಟಿʼ ಉದ್ದೇಶ: ಎಸ್‌ ಆರ್‌ ಮೆಹರೋಜ್‌ ಖಾನ್

Date:

ಸಮಾಜದಲ್ಲಿ ಆರ್ಥಿಕ ಸಮಾನತೆ ಹಾಗೂ ಮಹಿಳಾ ಸಶಕ್ತೀಕರಣ ಇದ್ದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಮಾನತೆ ಜತೆಗೆ ಯುವ ಸಬಲೀಕರಣಗಳೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌ ಆರ್‌ ಮೆಹರೋಜ್‌ ಖಾನ್‌ ತಿಳಿಸಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗ ಆಯೋಜಿಸಿದ್ದ ʼಗ್ಯಾರಂಟಿ ಯೋಜನೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸರ್ಕಾರವು ದಕ್ಷತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಶ್ರಮಿಸುತ್ತಿದೆ. ಯುವಕರು ಉದ್ಯೋಗಸ್ಥರಾಗುವವರೆಗೆ ಆರ್ಥಿಕವಾಗಿ ನೆರವಾಗಲು ಹಾಗೂ ಮಹಿಳೆಯರು ಸಬಲರಾಗಲು ಅನುಷ್ಟಾನಗೊಳಿಸಿರುವ ಗ್ಯಾರಂಟಿಗಳು ಸಮಾಜದ ಅರ್ಹ ಫಲಾನುಭವಿಗಳನ್ನು ತಲುಪುತ್ತಿವೆ. ಗ್ಯಾರಂಟಿಗಳ ಬಡ ಹಾಗೂ ಕೆಳ ಮಧ್ಯಮವರ್ಗಕ್ಕೆ ಆರ್ಥಿಕ ಬಲ ನೀಡುವಲ್ಲಿ ಯಶಶ್ವಿಯಾಗಿವೆ” ಎಂದರು.

ರಾಜ್ಯದ ಅಭಿವೃದ್ಧಿಗಾಗಿ ಶುಲ್ಕ, ತೆರಿಗೆ ಹೆಚ್ಚಾಗುತ್ತಿದೆ. ಶೇ. 4. 1/2 ಇದ್ದ ನಿರುದ್ಯೋಗ ಪ್ರಮಾಣವು ಗ್ಯಾರಂಟಿ ಯೋಜನೆಯ ಅನುಷ್ಟಾನದ ನಂತರ ಶೇ. 2.20ಕ್ಕೆ ಇಳಿದಿದೆ. ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಗ್ರಾಮಾಂತರ ಮಹಿಳೆಯರು, ಯುವಕರು ಮತ್ತು ನಾಗರೀಕರೊಂದಿಗೆ ಸಂವಾದಿಸಿ ನೈಜತೆಯನ್ನು ತಿಳಿದು ಸಲಹೆಗಳನ್ನು ಪಡೆದಿದ್ದೇನೆ. ನಿಮ್ಮ ಸಂವಾದದಲ್ಲಿ ನನ್ನ ವ್ಯಾಪ್ತಿಗೆ ಬರದ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆದು ಗಮನಕ್ಕೆ ತರುತ್ತೇನೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಹೋಗುವ ಅಭ್ಯರ್ಥಿಗಳಿಗೆ ಉಚಿತ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿಸಲು ಪ್ರಯತ್ನಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಾದದಲ್ಲಿ ತೊಡಗಿಕೊಂಡ ವಿವಿಯ ಹಲವು ಸಂಶೋಧನಾ ವಿದ್ಯಾರ್ಥಿಗಳು, ಯುವನಿಧಿಯ ಹಣ ಪಡೆಯಲು ಅನೇಕ ತಾಂತ್ರಿಕ ತೊಂದರೆಗಳು ಇವೆ. ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಲು ಆಗುತ್ತಿಲ್ಲ. ಶಕ್ತಿಯೋಜನೆ ಮಹಿಳೆಯರಿಗೆ ಸೀಮಿತವಾಗಿವೆ. ಪುರುಷರಿಗೆ ಯಾವುದೇ ಪ್ರಯೋಜನಗಳಿಲ್ಲ. ಬಸ್‌ಗಳಲ್ಲಿ ಟಿಕೆಟ್ ಇಲ್ಲದೇ ಹೋಗುವಾಗ ಅವಮಾನಕರವಾಗಿ ಮಾತನಾಡುತ್ತಾರೆ. ಬಸ್‌ಗಳ ಕೊರತೆ ಇದೆ. ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಿ ಯೋಜನೆಗಳನ್ನು ಅರ್ಹ ಫಲಾನುಭವಿಗಳು ಪಡೆಯಲು ಕ್ರಮವಹಿಸಬೇಕು ಎಂದು ಅವಲತ್ತುಕೊಂಡರು.

ಎಸ್‌ಇಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆಯೇ? ಗ್ಯಾರಂಟಿ ಯೋಜನೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರವನ್ನು ಯಾಕೆ ಪರಿಗಣಿಸಿಲ್ಲ. ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದರು. ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ತಿಂಗಳಿಗೆ ರೂ.30,000/- ಸ್ಟೈಪೆಂಡ್ ನೀಡುತ್ತಿದ್ದು, ಕನ್ನಡ ವಿವಿ ಸೇರಿ ಕೆಲವು ವಿಶ್ವವಿದ್ಯಾಲಯಗಳಲ್ಲಿ ರೂ.
10,000/- ನೀಡಲಾಗುತ್ತಿದೆ. ಸರ್ಕಾರವು ಇದಕ್ಕೆ ಏಕರೂಪ ನೀತಿಯನ್ನು ಜಾರಿಗೊಳಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.

ಮಂಜುನಾಥ ಮತ್ತು ಮಣಿಕಂಠ ಮಾತನಾಡಿ, “ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದು ಅದರ ವಿರುದ್ಧವೇ ಮಾತನಾಡುವವರು ಇದ್ದಾರೆ. ಆದ್ದರಿಂದ ಗ್ಯಾರಂಟಿ ಯೋಜನೆಗಳ ಕುರಿತು ಸರ್ಕಾರ ಮತ್ತು ಅಧಿಕಾರಿಗಳು ರಾಜ್ಯಾದ್ಯಂತ ಜಾಗೃತಗೊಳಿಸುವ ಕಾರ್ಯಕ್ರಮಗಳನ್ನು ಮಾಡುವ ಅಗತ್ಯವಿದೆ” ಎಂದು ಉಪಾಧ್ಯಕ್ಷರಿಗೆ ಬೇಡಿಕೆಯಿಟ್ಟರು.

ಪ್ರಾಧ್ಯಾಪಕರಾದ ಡಾ.ಎಚ್ ಡಿ ಪ್ರಶಾಂತ್ ಮಾತನಾಡಿ, ಯುನಿವರ್ಸಲ್ ಬೇಸಿಕ್ ಇನ್‌ಕಮ್ ಭಾಗವಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಗ್ಯಾರಂಟಿ ಯೋಜನೆಯು ನಾಗರಿಕರು ಘನತೆಯ ಬದುಕನ್ನು ಕಟ್ಟಿಕೊಳ್ಳಲು ನೆರವಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಶರಣ ತತ್ವ, ವೈಚಾರಿಕ ಪರಂಪರೆಯ ರೂವಾರಿ ಶಾಂತರಸರು; ರಹಮತ್ ತರೀಕೆರೆ

ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥೆ ಡಾ. ಗೀತಮ್ಮ, ಪ್ರಾಧ್ಯಾಪಕ ಡಾ. ಜನಾರ್ದನ, ಕುಲಸಚಿವ ಡಾ. ವಿಜಯ್ ಪೂಣಚ್ಚ, ಅಧ್ಯಾಪಕ ಗೋವರ್ಧನ, ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...