ವಿಜಯನಗರ | ದೇವದಾಸಿಯರ ವಿಮೋಚನೆಯ ‘ನೀಲಿ ಹೂವು’ ಪ್ರೇಕ್ಷಕರ ಮನಗೆದ್ದ ನಾಟಕ

Date:

ಯುವರಂಗ 2025 ಉಚಿತ ನಾಟಕ ತರಬೇತಿಯ ಶಿಬಿರಾರ್ಥಿಗಳು ಅಭಿನಯಿಸುತ್ತಿರುವ ದೇವದಾಸಿ ಪದ್ಧತಿಯ ವಿಮೋಚನೆಯ ಕುರಿತಾದ ಶಿಕ್ಷಣದ ಮಹತ್ವವನ್ನು ಸಾರುವ ‘ನೀಲಿ ಹೂವು’ ನಾಟಕ ಡಾ.ಸಹನಾ ಪಿಂಜಾರ ಅವರ ನಿರ್ದೇಶನದಲ್ಲಿ ಪ್ರದರ್ಶನವಾಯಿತು.

ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಟಿಎಮ್‌ಎಇಎಸ್ ಆಯುರ್ವೇದಿಕ್ ಕಾಲೇಜಿನಲ್ಲಿ ಸ್ನೇಹ ಭಾರತಿ ಹಳೇ ವಿದ್ಯಾರ್ಥಿನಿಯರ ಸಂಘ ಹಾಗೂ ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಬಹುತ್ವ ಪ್ರತಿಷ್ಠಾನ ಸಹಯೋಗದೊಂದಿಗೆ ‘ನೀಲಿ ಹೂವು’ ನಾಟಕ ಪ್ರದರ್ಶನ ಪ್ರದರ್ಶನವಾಯಿತು.

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಶಿವನಾಯಕ ದೊರೆ ರಚನೆಯ ದೇವದಾಸಿ ವಿಮೋಚನೆಯ ‘ನೀಲಿ ಹೂವು’ ನಾಟಕವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ.ಸಹನಾ ಪಿಂಜಾರ ಅವರ ವಿನ್ಯಾಸ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ನೀಲಿ ಹೂವು ನಾಟಕ 1

ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಬಹುತ್ವ ಪ್ರತಿಷ್ಠಾನದ ಸಹಯೋಗದೊಂದಿಗೆ ಒಂದೂವರೆ ತಿಂಗಳುಗಳ ಕಾಲ ರಾಜ್ಯದ ಬೇರೆಬೇರೆ ಜಿಲ್ಲೆಯ 40ಕ್ಕೂ ಹೆಚ್ಚು ಕಲಾಸಕ್ತರು ಶಿಬಿರದಲ್ಲಿ ಭಾಗವಹಿಸಿ ನಾಟಕ ತರಬೇತಿ ಪಡೆದುಕೊಂಡಿದ್ದಾರೆ.

ಇತ್ತಿಚೆಗೆ ಸಮಾಜ ಕಲ್ಯಾಣ ಇಲಾಖೆಯ ‘ಪ್ರಬುದ್ಧ’ ಯೋಜನೆಯಡಿ ಇಂಗ್ಲೆಂಡಗೆ ಪಿಎಚ್‌ಡಿ ಪಡೆಯಲು ತೆರಳುತ್ತಿರುವ ಹೊಸಪೇಟೆಯ ಮಾಜಿ ದೇವದಾಸಿ ಮಗಳು ಕಾಮಾಕ್ಷಿಯ ಬದುಕಿನ ಎಳೆಹಿಡಿದು, ದೇವದಾಸಿ ಕುಟುಂಬದ ಯುವತಿ ಶಿಕ್ಷಣ ಪಡೆದು ಹೇಗೆ ಉನ್ನತ ಸ್ಥಾನಕ್ಕೇರುತ್ತಾಳೆ ಎಂದು ಆಧರಿಸಿದ ಕಥೆಯಾಗಿದೆ.

ನೀಲಿ ಹೂವು ನಾಟಕ 2

ನಾಟಕದ ಮೂಲಕ ಶಿಕ್ಷಣದ ಮಹತ್ವ, ದೇವದಾಸಿ ಪದ್ಧತಿಯಿಂದ ಮಹಿಳೆ ಮೇಲಾಗುವ ಶೋಷಣೆ, ಅವಳ ಹಕ್ಕುಗಳು, ಸಾಮಾಜಿಕ ನ್ಯಾಯದ ಅರಿವು ಹಾಗೂ ಜಾಗೃತಿ ಮೂಡಿಸುವ ನಾಟಕವಾಗಿದೆ. ಪ್ರತಿಯೊಂದು ಸಮುದಾಯದವರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆಯಲೇಬೇಕು, ಶಿಕ್ಷಣ ಎಲ್ಲದಕ್ಕೂ ದೊಡ್ಡ ಶಕ್ತಿಯಾಗಿದೆ ಎಂಬ ಸಂದೇಶವನ್ನು ಸಾರುವ ನಾಟಕ, ದೇವದಾಸಿ ಪದ್ಧತಿ ವಿಮೋಚನೆಗೆ ಶಿಕ್ಷಣವೊಂದೆ ಅಸ್ತ್ರ ಎಂಬಂತ ಮಹತ್ವದ ಸಂದೇಶವನ್ನೂ ನೀಡುವುದು ನಾಟಕದ ಉದ್ದೇಶವಾಗಿತ್ತು.

ನೀಲಿ ಹೂವು ನಾಟಕ 3
ನೀಲಿ ಹೂವು ನಾಟಕ 4

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಸ್ತೆ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ

ತಲತಲಾಂತರದಿಂದ ದೇಶದಲ್ಲಿ ದೇವದಾಸಿ ಮಹಿಳೆಯರ ಶೋಷಣೆ ಪದ್ದತಿ ದಲಿತ ಮಹಿಳೆಯರನ್ನು ಶೋಷಿಸುತ್ತ ಬಂದಿದೆ. ಆ ಶೋಷಣೆಯಿಂದ ದೇವದಾಸಿಯಾದ ಸಾವಿತ್ರಮ್ಮ ತನ್ನ ಮೊಮ್ಮಕಳನ್ನು ದೇವದಾಸಿ ಆಚರಣೆಯಿಂದ ವಿಮುಕ್ತಗೊಳಿಸುವುದರ ಕುರಿತು ರಚಿತವಾದ ನಾಟಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. 20ಕ್ಕೂ ಹೆಚ್ಚು ಕಲಾವಿದರು ಮನೋಜ್ಞವಾಗಿ ಅಭಿನಯಿಸಿದರು.

ನೀಲಿ ಹೂವು ನಾಟಕ 5

ಶಿಬಿರದ ಸಂಚಾಲಕ ರಿಯಾಜ್ ಸಿಹಿಮೊಗೆ ಮಾತನಾಡಿ, “ಶಿಬಿರದಲ್ಲಿ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ‘ನೀಲಿ ಹೂ’ ನಾಟಕ ಇದು ದೇವದಾಸಿಯರ ಬದುಕು-ಬವಣೆ, ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ತಾರತಮ್ಯದ ಕುರಿತು ಶಿವನಾಯಕ್ ದೊರೆ ರಚಿಸಿದ್ದಾರೆ. ಇವತ್ತಿನ ಕಾಲಘಟ್ಟದಲ್ಲಿಯೂ ಈ ಥರದ ನಾಟಕ ಪ್ರಸ್ತುತ ಅನಿಸುತ್ತದೆ. ಹಾಗಾಗಿ ಆಯ್ಕೆ ಮಾಡಿಕೊಂಡು ಪ್ರದರ್ಶನ ಮಾಡುತ್ತಿದ್ದೆವೆ ಮತ್ತು ಈ ನಾಟಕ ಪ್ರಥಮ ಪ್ರದರ್ಶನ ನಡೆದಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...