ವಿಜಯನಗರ | ಸಾಗುವಳಿ ಜಮೀನುಗಳಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ

Date:

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಡಣಪುರ್, ಗರಗ, ನಾಯಕನಕೆರೆ ಸೇರಿದಂತೆ ಇತರ ಗ್ರಾಮದ ರೈತರು ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ಎಂದು ರಾಜ್ಯ ರೈತ ಸಂಘ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

“ರೈತರು ಸುಮಾರು 70 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಈವರೆಗೆ ರೈತರಿಗೆ ಹಕ್ಕುಪತ್ರ ಸಿಕ್ಕಿಲ್ಲ. ಸಾಗುವಳಿ ಮಾಡುತ್ತಿರುವ ಜಮೀನನ್ನು ಸರ್ಕಾರ ಕೆಐಎಡಿಬಿ ಮುಖಾಂತರ ಕಾರ್ಖಾನೆಗೆ ಹಸ್ತಾಂತರಿಸಿದ್ದು, ಇದನ್ನು ಹಿಂಪಡೆಯಬೇಕು. ಸದರಿ ಜಮೀನನ್ನು ತುಂಗಭದ್ರಾ ಅಣೆಕಟ್ಟು ಕಟ್ಟುವಾಗ ಮುಳುಗಡೆ ಹೊಂದಿ ಪುನರ್ವಸತಿ ಪಡದಂತ ಜನರಿಗೆ ಸರ್ಕಾರ ವಿತರಣೆ ಮಾಡಿತ್ತು” ಎಂದರು.

“ಸದರಿ ರೈತರೇ ಜಮೀನನ್ನು ಸಾಗುವಳಿ ಮಾಡುತ್ತಾ ಬಂದಿದ್ದು, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್‌ಗೆ ಸೇರಿರುವುದಾಗಿ ತಹಶೀಲ್ದಾರ್ ಇಬ್ಬರಿಗೆ ಮಾತ್ರ ಹಕ್ಕು ಪತ್ರ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ತಂದೆ ತಾಯಿಯಂದಿರು ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು: ಎಸ್‌ಪಿ

“ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ ಆಗಿ ಏಳು ವರ್ಷವಾಗಿದೆ. ಅದಕ್ಕೂ ಮುನ್ನ ರೈತರು ಸಾಗುವಳಿ ಮಾಡುತ್ತ ಜೀವನ ಕಟ್ಟಿಕೊಂಡಿದ್ದಾರೆ. ಈ ಭಾಗದ ರೈತರು ಜಮೀನಿನಲ್ಲಿ ಸಾಗುವಳಿ ಮಾಡಿ ಅದನ್ನೇ ನಂಬಿ ಬದುಕುತ್ತಿದ್ದಾರೆ. ಹಾಗಾಗಿ ಕೂಡಲೇ ಹಕ್ಕುಪತ್ರ ಒದಗಿಸಬೇಕು. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಮುಖಂಡ ವೀರ್ ಸಂಗಯ್ಯ, ಜಿಲ್ಲಾ ಮುಖಂಡ ಗೋಣಿಬಸಪ್ಪ, ಕರ್ನಾಟಕ ಜನಶಕ್ತಿ ಸರ್ದಾರ್, ವೇಣುಗೋಪಾಲ್, ಪರಶುರಾಮ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...