ವಿಜಯನಗರ | ಫೆ.2ರಿಂದ 4ರವರೆಗೆ ಹಂಪಿ ಉತ್ಸವ; ಜಿಲ್ಲಾಡಳಿತ ಸಿದ್ಧತೆ

Date:

ಹಂಪಿ ಉತ್ಸವವನ್ನು ಫೆಬ್ರವರಿ 02, 03 ಮತ್ತು 04ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಜಯನಗರ ಶಾಸಕ ಎಚ್ ಆರ್ ಗವಿಯಪ್ಪ ತಿಳಿಸಿದ್ದಾರೆ.

ವಿಜಯನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ 2024ರ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಮಾತನಾಡಿದರು.

“ಪ್ರಸ್ತುತ ಬಾರಿಯ ಹಂಪಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿಗೆ ಅವಕಾಶ ಮಾಡಿಕೊಡಲಾಗುವುದು. ಉತ್ಸವಕ್ಕೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಸಮಯವಕಾಶ ಕಡಿಮೆ ಇರುವುದರಿಂದ ಯುದ್ಧೋಪಾದಿಯಲ್ಲಿ ಉತ್ಸವದ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಸೂಚಿಸಲಾಗಿದೆ” ಎಂದು ಶಾಸಕರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಬಡ್ಡಿ, ಕುಸ್ತಿ ಸೇರಿದಂತೆ ನಾನಾ ಸಾಹಸ ಕ್ರೀಡೆಗಳು, ರಂಗೋಲಿ, ಅಡುಗೆ ಸೇರಿದಂತೆ ನಾನಾ ಸ್ಪರ್ಧೆಗಳು ಇರಲಿವೆ. ಬಗೆಬಗೆಯ ಸಾಂಸ್ಕೃತಿಕ ಕಲಾತಂಡಗಳ ಮೆರವಣಿಗೆ, ವಸ್ತು ಪ್ರದರ್ಶನ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಜರುಗಲಿವೆ” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್‌ ಮಾತನಾಡಿ, “ಫೆಬ್ರವರಿ 2ರಿಂದ ಮೂರು ದಿನಗಳ ಕಾಲ ನಿಗದಿಯಾದ ಐತಿಹಾಸಿಕ ಹಂಪಿ ಉತ್ಸವವನ್ನು ಜನರ ನಿರೀಕ್ಷೆಯಂತೆ ನಡೆಸಲು ಅಗತ್ಯ ಯೋಜನೆ ರೂಪಿಸಿ ಕಾರ್ಯಪ್ರವೃತ್ತರಾಗಿದ್ದೇವೆ” ಎಂದು ಹೇಳಿದರು.

“ಉತ್ಸವ ನಡೆಸಲು ಉತ್ಸುಕರಾಗಿರುವ ಸ್ಥಳೀಯ ಶಾಸಕರು ಸೇರಿದಂತೆ ಜಿಲ್ಲೆಯ ಎಲ್ಲ ಜ‌ನಪ್ರತಿನಿಧಿಗಳ ಸಲಹೆ ಪಡೆದು ಉತ್ಸವಕ್ಕೆ ಸಿದ್ಧತೆ ಮಾಡಲಾಗುವುದು. ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗುವುದು” ಎಂದು ತಿಳಿಸಿದರು.

“ವಿರುಪಾಕ್ಷೇಶ್ವರನ ಸನ್ನಿಧಿಯಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದ್ದು, ಭರತನಾಟ್ಯ, ಕ್ಲಾಸಿಕಲ್ ಮ್ಯೂಸಿಕ್ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಮೂರು ಬೃಹತ್ ವೇದಿಕೆಗಳು, ಧ್ವನಿ, ಬೆಳಕು ಸೇರಿದಂತೆ ನಾನಾ ಕಾರ್ಯಕ್ರಮಗಳಿಗೆ ವೇದಿಕೆ ಯೋಜಿಸಲಾಗಿದೆ” ಎಂದರು.

“ಜನಾಕರ್ಷಣೆಗಾಗಿ ವಿಶೇಷ ಕಾರ್ಯಕ್ರಮ ಐತಿಹಾಸಿಕ ಉತ್ಸವಕ್ಕೆ ಸ್ವಯಂ ಪ್ರೇರಣೆಯಿಂದ ಆಗಮಿಸಲು ಇಚ್ಛಿಸುವ ಖ್ಯಾತ ಗಾಯಕರನ್ನು ಕರೆತರುವ ಯೋಜನೆ ಇದೆ” ಎಂದರು.

“ಹಂಪಿ ಉತ್ಸವದಲ್ಲಿ ಪ್ರತಿ ಬಾರಿ ಸಾಂಪ್ರದಾಯಿಕವಾಗಿ ನಡೆಸುವ ಅಡುಗೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಕುಸ್ತಿ ಹಾಗೂ ಕಲ್ಲು ಎತ್ತುವ ಸ್ಪರ್ಧೆ ಸೇರಿದಂತೆ ಎಲ್ಲ ಬಗೆಯ ಸ್ಪರ್ಧೆಗಳಿಗೆ ಉತ್ಸವದಲ್ಲಿ ಅವಕಾಶವಿರಲಿದೆ” ಎಂದರು.

“ಈ ಉತ್ಸವವು ಎಲ್ಲರನ್ನೊಳಗೊಳ್ಳುವ ನಿಟ್ಟಿನಲ್ಲಿ 25 ದಿನ ನಿರಂತರವಾಗಿ ಪ್ರಚಾರ ಮಾಡುತ್ತೇವೆ. ಉತ್ಸವಕ್ಕೆ ತಡವಾಗಿ ದಿನಾಂಕ ಘೋಷಣೆಯಾದರೂ ಕೂಡ ಉತ್ಸವವನ್ನು ಯಶಸ್ವಿ ಮಾಡುತ್ತೇವೆ. ಎಕೋ ಫ್ರೆಂಡ್ಲಿ ಬ್ಯಾನರ್ ಮತ್ತು ಪೋಸ್ಟರ್ ಹಾಕಲಾಗುವುದು” ಎಂದರು.

“ಹಂಪಿಯ ಇತಿಹಾಸದಲ್ಲಿ ಕನ್ನಡ ವಿಶ್ವವಿದ್ಯಾಲಯವು ಒಂದು ಕಿರೀಟವಿದ್ದಂತೆ.‌ ವಿಶ್ವವಿದ್ಯಾಲಯದ ಕುಲಪತಿ ಸೇರಿದಂತೆ ಅಲ್ಲಿನ ಎಲ್ಲ ವಿಭಾಗಗಳ ಪ್ರಾಧ್ಯಾಪಕರೊಂದಿಗೆ ಚರ್ಚಿಸಿ, ಪುಸ್ತಕ ಮಳಿಗೆ ಸೇರಿದಂತೆ ವಿಭಿನ್ನ ಕಾರ್ಯಕ್ರಮ ರೂಪಿಸಲಾಗುವುದು. ಯುವಕರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ವರ್ಗದ ಜನಸಮುದಾಯವನ್ನು ಆಕರ್ಷಿಸಲು ಉತ್ಸವದಲ್ಲಿ ವೈವಿಧ್ಯಮಯವಾಗಿ ಕಾರ್ಯಕ್ರಮ ರೂಪಿಸಲಾಗುವುದು. ರೈತರಿಗಾಗಿ ಕೃಷಿ ಪ್ರದರ್ಶನ, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ, ಮಹಿಳೆಯರಿಗಾಗಿ ಕ್ಲಾಸಿಕಲ್ ಸಂಗೀತ ಸೇರಿದಂತೆ ನಾನಾ ಕಾರ್ಯಕ್ರಮ ರೂಪಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ

“ಸ್ಥಳೀಯರ ಸಂಚಾರಕ್ಕೆಂದೇ 80 ರಿಂದ 100 ಬಸ್‌ಗಳನ್ನು ಮೀಸಲಿಟ್ಟು ಜನರನ್ನು ಸೇರಿಸಲಾಗುವುದು. ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳ ಪ್ರಮುಖರ ಸಹಯೋಗದೊಂದಿಗೆ ಶಾಲಾ ವಾಹನಗಳ ಮೂಲಕ ವಿದ್ಯಾರ್ಥಿಗಳನ್ನು ಸೇರಿಸಲಾಗುವುದು” ಎಂದರು.

“ಮಾಧ್ಯಮ ಪ್ರತಿನಿಧಿಗಳು, ಕಲಾವಿದರು, ಗಣ್ಯರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉತ್ಸವದಲ್ಲಿ ಅಚ್ಚುಕಟ್ಟಾಗಿ ಭಾಗಿಯಾಗಿ ಉತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗೊಂದಲವಾಗದಂತೆ ಪಾಸುಗಳ ವಿತರಣೆ ಮಾಡಲಾಗುವುದು” ಎಂದರು.

ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ಸದಾಶಿವ ಪ್ರಭು ಬಿ‌ ಸೇರಿದಂತೆ ಇತರರು ಇದ್ದರು.

ವರದಿ : ಅಂಕಲೇಶ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...