ವಿಜಯನಗರ | ತಗಡಿನ ಶೆಡ್‌ನಲ್ಲಿ ಮಕ್ಕಳಿಗೆ ಪಾಠ; ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತೆರೆದಿದೆ. ಆದರೆ, ಸ್ವಂತ ಕಟ್ಟಡವಿದೆ, ಇಲಾಖೆಯ ಒಂದೇ ಕಟ್ಟಡದಲ್ಲಿ ಬಾಲಕ, ಬಾಲಕಿಯರ ವಾಸ್ತವ್ಯ ಮತ್ತು ತರಗತಿ ನಡೆಯುತ್ತಿದೆ.

ಇರುವ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಸ್ಥಳದ ಅಭಾವ ಉಂಟಾಗಿದ್ದು, ತಗಡಿನ ಶೆಡ್‌ನಲ್ಲಿ ಪಾಠ, ಹೊರಾಂಗಣದಲ್ಲಿ ಲಗೇಜು, ಒಂದೇ ಕೊಠಡಿಯಲ್ಲಿ 25ರಿಂದ 30 ವಿದ್ಯಾರ್ಥಿಗಳು ವಾಸಮಾಡುತ್ತಿದ್ದಾರೆ. ವಸತಿ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಎರಡು ವರ್ಷಗಳಿಂದ ಶೃಂಗಾರತೋಟ ಗ್ರಾಮದ ಸಮೀಪ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಟ್ಟಡ ನಿರ್ಮಾಣಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

2017-18ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭವಾಗಿತ್ತು. ಆರಂಭದಲ್ಲಿ ಪಟ್ಟಣದ ಕೆಎಚ್‍ಬಿ ಬಡಾವಣೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತಿತ್ತು. 2022-23ನೇ ಸಾಲಿನಲ್ಲಿ ವಸತಿ ಇಲಾಖೆಯ, ವಸತಿ ನಿಲಯದ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿ 6ರಿಂದ 10ನೇ ತರಗತಿವರೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 8 ಕಾಯಂ ಶಿಕ್ಷಕರು, 3 ಅತಿಥಿ ಶಿಕ್ಷಕರು, 8 ಜನ ಡಿ ದರ್ಜೆಯ ನೌಕರರು ಸೇರಿದಂತೆ 19 ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ.

ವಸತಿ ನಿಲಯ ಎರಡು ಅಂತಸ್ತಿನ ಕಟ್ಟಡವಾಗಿದ್ದು, ನೆಲಮಹಡಿಯಲ್ಲಿರುವ 6 ಕೋಣೆಗಳಲ್ಲಿ ಬಾಲಕರು, ಮೇಲ್ಭಾಗದ ಕೋಣೆಗಳಲ್ಲಿ ಬಾಲಕಿಯರು ಉಳಿದುಕೊಂಡಿದ್ದಾರೆ. ಜಾಗ ಸಾಲದೆ ಅಡುಗೆ ಕೋಣೆ, ಊಟದ ಹಾಲ್‌ನಲ್ಲೂ ವಿದ್ಯಾರ್ಥಿಗಳು ಮಲಗುತ್ತಾರೆ.

ಶಾಲೆಯ ಸಿಬ್ಬಂದಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಟ್ಟಡದ ಹಿಂಭಾಗದಲ್ಲಿ ನಿರ್ಮಿಸಿರುವ ತಗಡಿನ ಚಪ್ಪರ, ತಗಡಿನ ಛಾವಣಿಗಳಲ್ಲಿ 8ರಿಂದ 10ನೇ ತರಗತಿಗಳಿವೆ. ವಿದ್ಯಾರ್ಥಿಗಳು ಉಳಿದುಕೊಳ್ಳುವ ಕೊಠಡಿಯಲ್ಲಿಯೇ 6ಮತ್ತು 7ನೇ ತರಗತಿ ನಡೆಸಲಾಗುತ್ತಿದೆ. ಮಕ್ಕಳ ಲಗೇಜ್‍, ಕಚೇರಿಗೆ ಸಂಬಂಧಿಸಿದ ವಸ್ತುಗಳನ್ನು ಹೊರಾಂಗಣದಲ್ಲಿ ಇರಿಸಲಾಗಿದೆ.

ಆದಷ್ಟು ಬೇಗ ಶೃಂಗಾರತೋಟ ಸಮೀಪದ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಶೀಘ್ರ ಪೂರ್ಣಗೊಂಡು, ಹಸ್ತಾಂತರಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ ಎನ್ನುತ್ತಿದ್ದಾರೆ ಪೋಷಕರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...