ವಿಜಯನಗರ | ವಿದ್ಯಾರ್ಥಿನಿ ಸಾವು; ಡೆಂಗಿ ಶಂಕೆ

Date:

ವಿಜಯನಗರದ ವಿಜ್ಞಾನ ಇ ಟೆಕ್ನೊ ಸ್ಕೂಲ್‌ನಲ್ಲಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಜಾಹ್ನವಿ ಎನ್‌ (12) ತೀವ್ರ ಅಸೌಖ್ಯದಿಂದ ಮಂಗಳವಾರ ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಕೆಗೆ ಡೆಂಗಿ ಬಾಧಿಸಿರುವ ಶಂಕೆ ವ್ಯಕ್ತವಾಗಿದೆ.

“ಬಾಲಕಿ ಡೆಂಗಿಯಿಂದಲೇ ಮೃತಪಟ್ಟಿದ್ದಾಳೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಆಕೆಯ ಮನೆಯ ಸುತ್ತಮುತ್ತಲಿನ ಪರಿಸರವನ್ನು ಅಧ್ಯಯನ ಮಾಡಿ, ಡೆಂಗಿಗೆ ಕಾರಣವಾಗುವ ಸೊಳ್ಳೆಗಳು ಇವೆಯೇ ಎಂಬುದನ್ನು ದೃಢಪಡಿಸಲು ತಂಡವನ್ನು ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಸಾವಿಗೆ ನಿಖರ ಕಾರಣವನ್ನು ತಿಳಿಯುವ ವಿಶ್ವಾಸವಿದೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್‌ ತಿಳಿಸಿದ್ದಾರೆ.

“ವಿದ್ಯಾರ್ಥಿನಿಯ ತಂದೆ ಲ್ಯಾಬ್‌ ಟೆಕ್ನಿಶಿಯನ್‌. ಮನೆಯಲ್ಲಿ ಮೊದಲಿಗೆ ಚಿಕಿತ್ಸೆ ಮಾಡಿಕೊಂಡಿದ್ದಾರೋ ಎಂಬ ಬಗ್ಗೆ ತಿಳಿಯಬೇಕಿದೆ. ವಿದ್ಯಾರ್ಥಿನಿಗೆ ಇದ್ದಕ್ಕಿದ್ದಂತೆಯೇ ತೀವ್ರ ಅಸೌಖ್ಯ ಕಾಡಿದೆ. ಆಕೆಯ ಕಾಯಿಲೆಯ ಲಕ್ಷಣ ತಿಳಿದುಬಂದರೆ ಮುಂದಿನ ಎಚ್ಚರಿಕೆ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಯಾವ ಕಾಯಿಲೆಯಿಂದ ಮೃತಪಟ್ಟಳು ಎಂಬುದನ್ನು ತಿಳಿಯುವ ಪ್ರಯತ್ನ ಮುಂದುವರೆದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಅರಣ್ಯ ಇಲಾಖೆ ಕಾರ್ಯಾಚರಣೆ; ಬಾಲಕನನ್ನು ಕೊಂದಿದ್ದ ಹುಲಿ ಸೆರೆ

ನಗರದ ಟಿ ಟಿ ಡ್ಯಾಂ ಪ್ರದೇಶದಲ್ಲಿ ವಾಸವಿರುವ ತಿರುಮಲೇಶ್‌–ರೇಣುಕಾ ದಂಪತಿಯ ಪುತ್ರಿ ಜಾಹ್ನವಿ ಅವರು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ಇದೇ 18ರಂದು ಏಕಾಏಕಿ ಅನಾರೋಗ್ಯಕ್ಕೀಡಾದ ಆಕೆಯನ್ನು ಮೊದಲಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತಾಗಿ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದರಿಂದ ದಾವಣಗೆರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಪ್ರತಭಾನ್ವಿತಳಾಗಿದ್ದ ಜಾಹ್ನವಿ ಅವರು ತರಗತಿಗೆ ಟಾಪರ್‌ ಆಗಿದ್ದರು. ಇದೀಗ ಅವರ ಸಾವಿಗೆ ಶಾಲೆ ಕಂಬನಿ ಮಿಡಿದಿದ್ದು, ಬುಧವಾರ ಮಧ್ಯಾಹ್ನದವರೆಗೆ ಶಾಲೆಗೆ ರಜೆ ನೀಡಲಾಗಿತ್ತು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಡಾಕ್ಟರೇಟ್ ಪದವಿ ಪಡೆದ ಗಿರೀಶ್ ಕುಮಾರ್ ಜಿ

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಡಾ. ನಾಗೇಂದ್ರ ಮಾರ್ಗದರ್ಶನದಲ್ಲಿ ʼಕರ್ನಾಟಕದಲ್ಲಿ...

ವಿಜಯನಗರ | ಬಿಜೆಪಿ ಮನೆ ದೇವ್ರು ಸುಳ್ಳು, ಶತಭಂಡರು: ಸಿಎಂ ಸಿದ್ದರಾಮಯ್ಯ ಆಕ್ರೋಶ

'ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ...

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು...

ವಿಜಯನಗರ | ರೈತರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ರೈತ ಸಂಘ ಆಗ್ರಹ

ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು...