ವಿಜಯನಗರ | ಉನ್ನಾಂವ್‌ ಪ್ರಕರಣ: ಅತ್ಯಾಚಾರಿಯ ಜೀವಾವಧಿ ಶಿಕ್ಷೆ ಅಮಾನತಿಗೆ ಎಐಡಿಎಸ್ಒ ಖಂಡನೆ

Date:

ಉನ್ನಾಂವ್‌ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅತ್ಯಾಚಾರಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆಯನ್ನು ಅಮಾನತಿನಲಿಟ್ಟ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ಎಐಡಿಎಸ್ಒ ವಿಜಯನಗರ ಜಿಲ್ಲಾ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ವಿಜಯನಗರ ಜಿಲ್ಲಾ ಕಾರ್ಯದರ್ಶಿ ಉಮಾದೇವಿ‌ ಯು ಪತ್ರಿಕೆ ಹೇಳಿಕೆ ನೀಡಿದ್ದು, “ಈ ತೀರ್ಪು ಕೇವಲ ಕಾನೂನಿನ ಹಿನ್ನಡೆಯಲ್ಲ, ಇದು ನ್ಯಾಯದ ಸಂಪೂರ್ಣ ಅಪಹಾಸ್ಯವಾಗಿದೆ. ಕಾನೂನಿನ ಆಳ್ವಿಕೆ ಮತ್ತು ಮಹಿಳೆಯರ ಸುರಕ್ಷತೆಯನ್ನು ನಂಬುವ ಪ್ರತಿಯೊಬ್ಬ ನಾಗರಿಕನ ಆತ್ಮಸಾಕ್ಷಿಯನ್ನು ಇದು ಬೆಚ್ಚಿಬೀಳಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕುಲದೀಪ್ ಸಿಂಗ್ ಸೆಂಗಾರ್ ಸಾಮಾನ್ಯ ಅಪರಾಧಿಯಲ್ಲ, ಉನ್ನಾಂವ್‌ನಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ವಿಚಾರಣಾ ನ್ಯಾಯಾಲಯದಿಂದ ಆತ ದೋಷಿ ಎಂಬ ಸಾಬೀತಾದ ವ್ಯಕ್ತಿ. ಅಷ್ಟೇ ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದ ಭಯಾನಕ ಸರಣಿ ಘಟನೆಗಳಲ್ಲಿ ಸಂತ್ರಸ್ತೆಯ ತಂದೆಯ ಕಸ್ಟಡಿಯಲ್ಲಿ ಸಾವು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬವನ್ನು ಮಟ್ಟಹಾಕಲು ಸಂಚು ರೂಪಿಸಿದ ಸಂಶಯಾಸ್ಪದ ರಸ್ತೆ ʼಅಪಘಾತʼವೂ ಸೇರಿದೆ. ಇಂತಹ ಕ್ರೂರ ಅಪರಾಧಿಗೆ, ಆತ ʼಸಾರ್ವಜನಿಕ ಸೇವಕʼ ಎಂಬ ತಾಂತ್ರಿಕ ಕಾರಣ ನೀಡಿ ಅಪೀಲು ಬಾಕಿ ಇರುವಾಗಲೇ ಜಾಮೀನು ನೀಡಿರುವುದು ಸಂತ್ರಸ್ತೆಯ ದಶಕದ ಸುದೀರ್ಘ ಹೋರಾಟಕ್ಕೆ ಮಾಡಿದ ಅವಮಾನವಾಗಿದೆ” ಎಂದು ಬೇಸರ‌ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೆಂಗಾರ್‌ನಂತಹ ಅತ್ಯಾಚಾರಿಯನ್ನು ಮುಕ್ತವಾಗಿ ತಿರುಗಾಡಲು ಬಿಡುವ ಮೂಲಕ ನ್ಯಾಯಾಂಗವು ಒಂದು ಭಯಾನಕ ಸಂದೇಶವನ್ನು ರವಾನಿಸಿದೆ. ಅದೇನೆಂದರೆ, ರಾಜಕೀಯ ಬಲ ಮತ್ತು ಹಣದ ಶಕ್ತಿ ಅತ್ಯಂತ ಘೋರ ಅಪರಾಧಗಳನ್ನೂ ಮೀರಿಸಬಲ್ಲದು ಎಂಬುದು ಸಾಬೀತಾಗಿದೆ. ಪ್ರಭಾವಿ ನರಭಕ್ಷಕನಿಗೆ ನ್ಯಾಯಾಂಗದ ಸಹಾನುಭೂತಿ ಸಿಗುತ್ತಿರುವಂತಹ ದುರಂತ ಕಾಲಘಟ್ಟಗಳಲ್ಲಿ ನಾವಿದ್ದೇವೆ. ಸಂತ್ರಸ್ತೆ ತನ್ನದೇ ಆದ ಆಘಾತ ಮತ್ತು ಭಯದ ಸೆರೆಯಲ್ಲೇ ಇರುವಾಗ, ದೇಶಾದ್ಯಂತ ಇರುವ ಅತ್ಯಾಚಾರ ಸಂತ್ರಸ್ತರಿಗೆ ಈ ವ್ಯವಸ್ಥೆಯ ಮೇಲೆ ಏನಾದರೂ ಭರವಸೆ ಉಳಿಯಲು ಸಾಧ್ಯವೇ?” ಎಂದು ಆತಂಕ ವ್ಯಕ್ತಪಡಿಸಿತು.

ಈ ಸುದ್ದಿ ಓದಿದ್ದೀರಾ? ಉನ್ನಾಂವ್ ಅತ್ಯಾಚಾರ ಕಾಂಡ: ಕುಲದೀಪ್ ಸೆಂಗರ್ ಶಿಕ್ಷೆ ಅಮಾನತಿಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ

“ದೆಹಲಿ ಪೊಲೀಸರು ಉನ್ನಾಂವ್ ಸಂತ್ರಸ್ತೆ ಮತ್ತು ಆಕೆಯ ತಾಯಿಯನ್ನು ನಡೆಸಿಕೊಂಡ ನಾಚಿಕೆಗೇಡಿನ ಹಾಗೂ ನಿರಂಕುಶ ವರ್ತನೆ, ಡಿಸೆಂಬರ್ 23ರಂದು ಜಾಮೀನು ಆದೇಶದ ವಿರುದ್ಧ ಇಂಡಿಯಾ ಗೇಟ್‌ನಲ್ಲಿ ತಾಯಿ ಮತ್ತು ಮಗಳು ಶಾಂತಿಯುತವಾಗಿ ಪ್ರತಿಭಟಿಸಲು ಪ್ರಯತ್ನಿಸಿದಾಗ, ಪೊಲೀಸರು ಅವರನ್ನು ಎಳೆದಾಡಿ, ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಸರ್ಕಾರಿ ಪ್ರಾಯೋಜಿತ ಬೆದರಿಕೆಗೆ ಒಳಗಾದ ಸಂತ್ರಸ್ತೆಯೊಬ್ಬರು ನ್ಯಾಯ ಕೇಳಿದಾಗ ಅವರಿಗೆ ಪೊಲೀಸರ ಬೂಟು ಮತ್ತು ಲಾಠಿಗಳೇ ಉತ್ತರವಾಗಿವೆ. ಈ ವರ್ತನೆಯು ಪ್ರಜಾಪ್ರಭುತ್ವ ವಿರೋಧಿ, ಅಮಾನವೀಯ ಮತ್ತು ರಾಜ್ಯ ಯಂತ್ರವು ದುರ್ಬಲರಿಗಿಂತ ಪ್ರಭಾವಿಗಳನ್ನು ರಕ್ಷಿಸುವುದರಲ್ಲೇ ಹೆಚ್ಚಿನ ಆಸಕ್ತಿ ಹೊಂದಿದೆ ಎಂಬುದನ್ನು ಸಾಬೀತುಪಡಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿತು.

“ಸಮಾಜದ ಈ ಅಧಃಪತನಕ್ಕೆ ನಾವು ಮೂಕಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ಮಾನವೀಯತೆಯನ್ನು ಉಳಿಸಲು ವಿದ್ಯಾರ್ಥಿಗಳು, ಯುವಜನರು ಮತ್ತು ಸಾರ್ವಜನಿಕರು ಒಗ್ಗೂಡಿ ರಾಷ್ಟ್ರವ್ಯಾಪಿ ಚಳವಳಿ ರೂಪಿಸಬೇಕು” ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಬಿಜೆಪಿ ಮನೆ ದೇವ್ರು ಸುಳ್ಳು, ಶತಭಂಡರು: ಸಿಎಂ ಸಿದ್ದರಾಮಯ್ಯ ಆಕ್ರೋಶ

'ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ...

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು...

ವಿಜಯನಗರ | ರೈತರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ರೈತ ಸಂಘ ಆಗ್ರಹ

ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು...

ವಿಜಯನಗರ | ಮುಂದಿನ ಜನಾಂಗಕ್ಕೆ ಕನ್ನಡ ತಲುಪಿಸುವುದೂ ನಮ್ಮ ಜವಾಬ್ದಾರಿ: ಕುಲಪತಿ ಪರಮಶಿವಮೂರ್ತಿ

ಕನ್ನಡತನವನ್ನು, ಕನ್ನಡದ ಹಿರಿಮೆ-ಗರಿಮೆಯನ್ನು ನಮ್ಮ ಮುಂದಿನ ಜನಾಂಗಕ್ಕೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ...