ವಿಜಯಪುರ | ಜಿಲ್ಲೆಯ ಶಾಸಕರು ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಲಿ; ರೈತ ಮುಖಂಡ ಸಂಗಮೇಶ್ ಆಗ್ರಹ

Date:

ವಿಜಯಪುರ ಜಿಲ್ಲೆಯ ಜಿಲ್ಲೆಯ ಎಲ್ಲ ಶಾಸಕರು ಸದನದಲ್ಲಿ ರೈತಪರ ಧ್ವನಿ ಎತ್ತಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಂಚ ನದಿಗಳ ಜಿಲ್ಲೆ ಎಂದೇ ಖ್ಯಾತಿ ಪಡೆದಿರುವ ವಿಜಯಪುರ ಜಿಲ್ಲೆಯಲ್ಲಿ ಪ್ರತಿ ಬೇಸಿಗೆಯಲ್ಲಿ ಟ್ಯಾಂಕರ್ ನೀರು ಹಾಕಿಸಿಕೊಳ್ಳುವುದು ತಪ್ಪುತ್ತಿಲ್ಲ. ರೈತರ ಆತ್ಮಹತ್ಯೆಗಳು ಕಡಿಮೆ ಆಗುತ್ತಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.256ಕ್ಕೆ ಎತ್ತರಿಸಿರುವುದರಿಂದ ನಷ್ಟಗೊಂಡ ಎಲ್ಲ ರೈತರಿಗೆ ಪರಿಹಾರ, ಪುರ್ನವಸತಿ ನೀಡಿ ರೈತ ಆತ್ಮಹತ್ಯೆಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ.

ರೈತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಯಾವೊಬ್ಬ ಜನಪ್ರತಿನಿಧಿಗಳು ಈ ಕುರಿತು ಬಾಯಿ ಬಿಚ್ಚುತ್ತಿಲ್ಲ. ವಿಪತ್ತು ನಿರ್ವಹಣಾ ಯೋಜನೆಯಡಿ ರಾಜ್ಯ ಮತ್ತು ಕೇಂದ್ರ ಸರಕಾರ ಬರ ಪರಿಹಾರ ಹಾಕುವಲ್ಲಿ ಅನೇಕರಿಗೆ ಅನ್ಯಾಯವಾಗಿದೆ. ರೈತರು ಇಲಾಖೆಗಳಿಗೆ ಅಲೆದಾಡಿ ಸುಸ್ತಾದರೆ ಹೊರತು, ಯಾರಿಗೂ ಪರಿಹಾರ ಸಿಕ್ಕಿಲ್ಲ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ನೋಡಿಕೊಂಡು ಕಂಡು ಕಾಣದಂತೆ ಜಿಲ್ಲೆ ಜನಪ್ರತಿನಿಧಿಗಳು ಸುಮ್ಮನೆ ಕುಳಿತಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಬ್ಬು ಕಾರ್ಖಾನೆಗೆ ಕಳುಹಿಸಿ 6 ತಿಂಗಳೂ ಕಳೆದರೂ ಜಿಲ್ಲೆಯ ಕೆಲ ರೈತರಿಗೆ ಬರಬೇಕಾದ ಕಬ್ಬಿನ ಬಾಕಿ ಬಿಲ್ ಬಂದಿಲ್ಲ. ಅದು ಸುಮಾರು 100 ಕೋಟಿ ಹಣ ಕಬ್ಬು ಬೆಳೆಗಹಾರರಿಗೆ ತಲುಪದೆ, ರೈತರು ಸಾಲ ಮಾಡಿಕೊಂಡು ಕಷ್ಟ ಅನುಭವಿಸುತ್ತಿದ್ದಾರೆ. ರೈತರ ಕಷ್ಟಕ್ಕೆ ಯಾರು ನಿಲ್ಲುತ್ತಿಲ್ಲ ಎಂಬುದೇ ಬೇಸರದ ವಿಷಯ ಎಂದಿರುವ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ಏತ ನೀರಾವರಿ ಕಾಲುವೆಗಳಲ್ಲಿ ಕ್ಲೋಜರ್ ಕಾಮಗಾರಿ ಮಾಡದೇ ವರ್ಷಗಳೆ ಕಳೆದಿವೆ. ಡೋಣಿ ನದಿ ಹೂಳೆತ್ತವುದು. ಭೂಮಿ ಕಳೆದುಕೊಂಡ ರೈತರಿಗೆ 10-15 ವರ್ಷಗಳೇ ಕಳೆದರು ಇನ್ನು ಪರಿಹಾರ ಬಂದಿಲ್ಲ. ಈ ಕುರಿತು ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸಚಿವರುಗಳು ಧ್ವನಿ ಎತ್ತಿ ರೈತರ ಪರವಾಗಿ ನಿಲ್ಲಬೇಕು ಎಂದು ಸಂಗಮೇಶ ಸಗರ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಯಾದಗಿರಿ | ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ರೈತ ಸಂಘದಿಂದ ಪ್ರತಿಭಟನೆ

ಕಬ್ಬಿಗೆ ಸೂಕ್ತ ಬೆಂಬಲ ಬೆಲೆ, ತೋಟಗಾರಿಕಾ ಬೆಳೆಗಳಿಗೆ ವಿಶ್ವಪ್ರಸಿದ್ದಿ ಪಡೆದಿರುವ ದ್ರಾಕ್ಷಿ, ದಾಳಿಂಬೆ, ಲಿಂಬೆ, ಡ್ರಾಗನ್ ಸೇರಿದಂತೆ ವಿವಿಧ ಬೆಳೆಗಳಿಗೆ ಪ್ರೋತ್ಸಾಹ ನೀಡಿ ಉಪ ಉತ್ಪನ್ನ ಮಾಡುವಂತೆ ಉತ್ತೆಜಿಸುವ ಯೋಜನೆ ಮಾಡಬೇಕಾಗಿದೆ. ಇನ್ನು ಮಳೆಯಾಶ್ರಿತ ಬೆಳೆಗಳಾದ ಜೋಳ, ಸಜ್ಜೆ, ತೊಗರಿ, ಕಡಲೆ ಸೇರಿದಂತೆ ಮೆಣಸಿನಕಾಯಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದರಿಂದ ಅಕ್ಕಪಕ್ಕದ ಜಿಲ್ಲೆ ಹಾಗೂ ರಾಜ್ಯಗಳಿಗೆ ನಮ್ಮ ರೈತರು ಹಣ ಹಾಗೂ ಸಮಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳು ನಮ್ಮ ಜನಪ್ರತಿನಿಧಿಗಳಿಗೆ ಕಾಣುತ್ತಿಲ್ಲವೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಸದನದಲ್ಲಿ ರೈತರ ಧ್ವನಿಯಾಗಿ ಜಿಲ್ಲೆಯ ಜನಪ್ರತಿನಿಧಿಗಳು ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...