ವಿಜಯಪುರ | ಲೆಕ್ಕಾಚಾರದ ವಿಚಾರ: ಗ್ರಾ.ಪಂ. ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಉಪಾಧ್ಯಕ್ಷೆ!

Date:

ವಿಜಯಪುರ ತಾಲೂಕಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಗ್ರಾಮ ಪಂಚಾಯಿತಿ ಲೆಕ್ಕ ಪರಿಶೋಧನೆ ವೇಳೆ ಗಲಾಟೆ ಉಂಟಾಗಿ, ಗ್ರಾಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ಕೆರೂಟಗಿ ಗ್ರಾಮದಲ್ಲಿ ಸೆಪ್ಟೆಂಬರ್ 14ರಂದು ಈ ಘಟನೆ ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಶರಣಮ್ಮ ಸಂದಿಮನಿ ಎಂಬುವವರೇ ದಾಳಿ ಮಾಡಿದ ಉಪಾಧ್ಯಕ್ಷೆ. ಗ್ರಾಪಂ ಕಾಯಕಮಿತ್ರ ಸಿಬ್ಬಂದಿ ದ್ರೌಪದಿ ಹಿರೇಮಠ ಥಳಿತಕ್ಕೆ ಒಳಗಾದವರು. ಚಪ್ಪಲಿಯಲ್ಲಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಪಂ ಲೆಕ್ಕ ಪರಿಶೋಧ ನಡೆಸುವುದಕ್ಕೆ ಉಪಾಧ್ಯಕ್ಷೆ ಶರಣಮ್ಮ ಪತಿ ರಾಜಶೇಖರ್ ಸಂದಿಮನಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಆಗಮಿಸಿದ್ದ ಲೆಕ್ಕ ಪರಿಶೋಧಕರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮತ್ತು ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಗಲಾಟೆ ಕಾರಣದಿಂದ ಗ್ರಾಮ ಕಾಯಕ ಮಿತ್ರ ದ್ರೌಪದಿ ಹಿರೇಮಠ ಮನೆಗೆ ಬಂದಿದ್ದರು. ಆದರೂ, ದ್ರೌಪದಿಯ ಮನೆಗೆ ತೆರಳಿ ಉಪಾಧ್ಯಕ್ಷೆ ಶರಣಮ್ಮ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ, ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಹಾಕಲಾಗಿದೆ. ಇದಕ್ಕೆ ಪತ್ನಿಗೆ ಪತಿ ಕುಮ್ಮಕ್ಕು ನೀಡಿದ್ದಾನೆ ಎನ್ನಲಾಗಿದೆ.

ಬಳಿಕ ಹಲ್ಲೆಗೆ ಒಳಗಾದ ಮಹಿಳೆ ಕಲಕೇರಿ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಕೋರಿದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ಶರಣಮ್ಮ ಹಾಗೂ ರಾಜಶೇಖರ್ ಅವರನ್ನು ಠಾಣೆಗೆ ಕರೆಯಿಸಿ ಕೇವಲ ಎಚ್ಚರಿಕೆ ಕೊಟ್ಟು ಪೊಲೀಸರು ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ಇದಲ್ಲದೆ, ಮತ್ತೆ ಸೆ.17ರಂದು ದ್ರೌಪದಿ ಹಿರೇಮಠ ಮೇಲೆ ಉಪಾಧ್ಯಕ್ಷೆಯ ಪತಿ ರಾಜಶೇಖರ ಎರಡನೇ ಬಾರಿ ಹಲ್ಲೆ ಮಾಡಿದ್ದಾನೆ. ಇದರಿಂದ ಎಚ್ಚೆತ್ತ ಗ್ರಾಪಂ ಪಿಡಿಒ ಎ.ಟಿ.ಅಂಗಡಿ ಹಾಗೂ ಕಾರ್ಯದರ್ಶಿ ಎ.ಎಸ್. ಮುಜಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ಪ್ರಕಾರ ರಾಜಶೇಖರ ಸಂದಿಮನಿ ವಿರುದ್ಧ ಸರ್ಕಾರಿ ಸೇವೆಗೆ ಅಡ್ಡಿ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ವೇಳೆ, ದ್ರೌಪತಿ ಹಿರೇಮಠ ನೀಡಿದ ದೂರು ಸ್ವೀಕರಿಸಬೇಕು ಮತ್ತು ಹಲ್ಲೆ ಮಾಡಿರುವ ಗ್ರಾಪಂ ಉಪಾಧ್ಯಕ್ಷೆಯ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಒತ್ತಾಯವನ್ನು ಸಾರ್ವಜನಿಕರು ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...