ವಿಜಯಪುರ | ಸಿದ್ದರಾಮಯ್ಯರನ್ನು ಬೆಂಬಲಿಸಿ ಆ. 29ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ: ದಸಂಸ

Date:

ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ನಡೆ ಖಂಡಿಸಿ ಮತ್ತು ಅಹಿಂದ ಪರ ನಾಯಕ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಬೆಂಬಲಿಸಿ ಆಗಸ್ಟ್ 29ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಡಿಜೆ ಸಾಗರ್ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಕಾಶ ನೀಡುವ ಮೂಲಕ ಸಂವಿಧಾನ ಬಾಹಿರವಾಗಿ ನಡೆದುಕೊಂಡಿರುವ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿ ಅವರಿಗೆ ಮನವಿ ಮಾಡಲಾಗುವುದು ಎಂದರು.

ಬಿಜೆಪಿ ಜೆಡಿಎಸ್ ಮುಖಂಡರು ಸುಳ್ಳು ಆರೋಪಗಳ ಮೂಲಕ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟುಮಾಡುವ ಉನ್ನಾರ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಎಂಬುದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಅರ್ಜಿ ಸಲ್ಲಿಸಿದ ತಕ್ಷಣ ತನಿಖೆಗೆ ಏಕಾಏಕಿ, ತರಾತುರಿಯಲ್ಲಿ ಅವಕಾಶ ನೀಡಲಾಗಿದೆ. ಆದರೆ, ಮಾಜಿ ಸಚಿವರಾದ ನಿರಾಣಿ, ಶಶಿಕಲಾ ಜೊಲ್ಲೆ, ಕುಮಾರಸ್ವಾಮಿ ವಿರುದ್ಧದ ಪ್ರಕರಣಗಳಲ್ಲಿ ತನಿಖೆ ನಡೆದು ಕ್ರಮಕ್ಕೆ ಅನುಮತಿ ಕೋರಿದರೂ ಕೂಡಾ ರಾಜ್ಯಪಾಲರು ಅವಕಾಶ ನೀಡದೆ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಮುಡಾದಲ್ಲಿ ಹಗರಣ ನಡೆದಿರುವ ಕುರಿತು ತನಿಖೆಗೆ ಈಗಾಗಲೇ ಸಮಿತಿ ರಚನೆಯಾಗಿದೆ. ಇಷ್ಟಾದರೂ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುವವರು ಖಂಡನೀಯ ಎಂದು ಹೇಳಿದರು.

ಇದನ್ನು ಓದಿದ್ದೀರಾ? ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ, ಸಂಪೂರ್ಣ ಸಮಿತಿ ವಿಸರ್ಜನೆ

ಗ್ಯಾರಂಟಿ ಯೋಜನೆಗಳ ಮೂಲಕ ಬಡ, ಮಧ್ಯಮ ವರ್ಗಗಳ ಸದೃಢತೆಗೆ ಶ್ರಮಿಸುತ್ತಿರುವ ಎಸ್ ಸಿ ಪಿ, ಟಿಎಸ್ ಪಿ ಕಾನೂನು ಜಾರಿಗೆ ತರುವ ಮೂಲಕ ವಿವಿಧ ಕಾಮಗಾರಿಗಳ ಗುತ್ತಿಗೆಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಜಾರಿಗೆ ತಂದಿದ್ದಾರೆ. ಇಂತಹ ಮುಖ್ಯಮಂತ್ರಿಯನ್ನು ದಲಿತ ವಿರೋಧಿ ಎನ್ನುವುದು ಸರಿಯಲ್ಲ ಎಂದರು.

ಈ ಸಂದರ್ಭದಲ್ಲಿ ಡಿಎಸ್ಎಸ್ ಮುಖಂಡರಾದ ಸಿದ್ದು ರಾಯಣ್ಣವರ, ವೈ ಸಿ ಮಯೂರು, ರಮೇಶ ಧರಣಾಕರ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...