ವಿಜಯಪುರ | ಸಾಂಪ್ರದಾಯಿಕ ಚೌಕಟ್ಟನ್ನು ಮೀರಿದಾಗ ಮಾತ್ರ ಹೊಸ ಚಿಂತನೆಯ ಹುಟ್ಟು : ಪ್ರೊ. ಚಂದ್ರ ಪೂಜಾರಿ

Date:

“ಸಂಶೋಧಕರು ವಿಚಾರ, ಆಚಾರ ಮತ್ತು ಅಧಿಕಾರ ನಡುವೆ ಇರುವ ಸಂಬಂಧವನ್ನು ಅರ್ಥ ಮಾಡಿಕೊಳ್ಳಬೇಕು. ಸಾಂಪ್ರದಾಯಿಕ ಚೌಕಟ್ಟನ್ನು ಮೀರಿದಾಗ ಮಾತ್ರ ಹೊಸ ಚಿಂತನೆ ಹುಟ್ಟಲು ಸಾಧ್ಯ” ಎಂದು ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರ ಪೂಜಾರಿ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ. ಹಾ, ಪ. ಪಂ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಸಂಶೋಧನಾ ವೈಧಾನಿಕತೆ’ ಕಾರ್ಯಾಗಾರದ 2ನೇ ದಿನದ ಕಾರ್ಯಾಗಾರದ ಮೊದಲನೆ ಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಸಾಮಾಜಿಕ ಜಗತ್ತಿನಲ್ಲಿ ಹಲವು ಸಂಶೋಧನಾ ಸಮಸ್ಯೆಗಳು ಇವೆ. ಅವುಗಳನ್ನು ಗ್ರಹಿಸುವ, ಸಂಶೋಧನೆಯ ಚೌಕಟ್ಟಿನಲ್ಲಿ ತರುವ ಕೆಲಸವನ್ನು ಸಂಶೋಧಕರುಗಳು ಮಾಡಬೇಕಾಗುತ್ತದೆ. ಸಂಶೋಧಕರು ತಾವು ಆಯ್ಕೆ ಮಾಡಿಕೊಂಡ ವಿಷಯದ ಕುರಿತು ಸಂಬಂಧಿಸಿದ ಸಾಹಿತ್ಯವನ್ನು ನಿರಂತರ ಅಧ್ಯಯನ ಮಾಡಬೇಕು.
ಸಾಹಿತ್ಯ ಅವಲೋಕನ ಸಂಶೋಧನೆಯ ಮೊದಲ ಹೆಜ್ಜೆ” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಶೋಧಕರುಗಳು ಸಂಶೋಧನಾ ಪರಿಕಲ್ಪನೆಗಳನ್ನು ಸರಿಯಾಗಿ ಅರ್ಥೈಸುವ, ವ್ಯಾಖ್ಯಾನಿಸುವ, ಪರೀಕ್ಷಿಸುವ ಹಾಗೂ ವಿಮರ್ಶಿಸುವ ಜ್ಞಾನವನ್ನು ಪಡೆಯಬೇಕಾಗುತ್ತದೆ. ಜ್ಞಾನ ಒಂದು ಕ್ಷಣಕ್ಕೆ, ಗಂಟೆಗೆ. ದಿನಕ್ಕೆ ಬರುವುದಿಲ್ಲ” ಎಂದು ತಿಳಿಸಿದರು.

“ಜ್ಞಾನವು ನಿರಂತರವಾದ ಅಧ್ಯಯನ, ಆಲೋಚನೆಯಿಂದ ಮಾತ್ರ ಬರುತ್ತದೆ. ಸಂಶೋಧಕರುಗಳಿಗೆ ಸೂಕ್ಷ್ಮತೆ ಇರಬೇಕಾಗುತ್ತದೆ. ಸಂಶೋಧನಾ ಸಮಸ್ಯೆಗಳಿಗೆ ಉತ್ತರಗಳನ್ನು ಸೈದ್ಧಾಂತಿಕವಾಗಿ, ತಾರ್ಕಿಕವಾಗಿ, ಕ್ರಿಯಾತ್ಮಕವಾಗಿ ಹುಡುಕಬೇಕಾಗುತ್ತದೆ. ಈ ಹುಡುಗಾಡುವಿಕೆಯು ನಿರಂತರವಾದ ಕ್ರಿಯೆ ಮತ್ತು ಪ್ರಕ್ರಿಯೆಯಾಗಿರುತ್ತದೆ. ಸಾಮಾಜಿಕ ಸಂಶೋಧನೆಗಳು ಜಗತ್ತಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ” ಎಂದು ಪ್ರೊ. ಚಂದ್ರ ಪೂಜಾರಿ ಹೇಳಿದರು.

ಬಳ್ಳಾರಿಯ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಪ್ರೊ.ಅರುಣಕುಮಾರ ಲಗಶೆಟ್ಟಿ ಮಾತನಾಡಿ, “ಸಂಶೋಧಕರುಗಳು ಓದುವ, ಬರೆಯುವ ಅಭಿರುಚಿ ಬೆಳೆಸಿಕೊಳ್ಳಬೇಕು. ವಿಜ್ಞಾನ, ಸಮಾಜ ವಿಜ್ಞಾನ, ವಾಣಿಜ್ಯ ಇತ್ಯಾದಿ ಎಲ್ಲ ನಿಕಾಯಗಳ ಸಂಶೋಧನೆಗಳು ಸಮಾಜ ಮುಖಿ ಅಭಿವೃದ್ಧಿಗೆ ಕೊಡುಗೆ ನೀಡಬೇಕು” ಎಂದರು.

ಪ್ರೊ. ಸಂಜೀವಕುಮಾರ ಗಿರಿ, ಡಾ.ಭಾಗ್ಯಶ್ರೀ ದೊಡಮನಿ, ಡಾ.ಸರೋಜಾ ಸಂತಿ, ಡಾ. ಶಶಿಕಲಾ ರಾಠೋಡ, ಡಾ.ರಜಿಯಾ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಬೀದರ್ | ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ವರ್ಗಾವಣೆ : ಶಿಲ್ಪಾ ಶರ್ಮಾ ನೂತನ ಡಿಸಿ

ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಯನ ಕೇಂದ್ರ ಮತ್ತು ಪ.ಜಾ / ಪ.ಪಂಗಡದ ನಿರ್ದೇಶಕಿ ಪ್ರೊ.ಲಕ್ಷ್ಮೀದೇವಿ ಸ್ವಾಗತಿಸಿದರು. ಸಂಶೋಧನಾ ವಿದ್ಯಾರ್ಥಿನಿಯರಾದ ಗಿರಿಜಾ ನವಲಿಮಠ ಕಾರ್ಯಕ್ರಮ ನಿರೂಪಿಸಿದರು. ಹಿನಾ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...