ವಿಜಯಪುರ | ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ‌ ಬಿದ್ದು ಯುವತಿ ಮೃತ್ಯು: ಐವರ ಬಂಧನ

Date:

ವಿಜಯಪುರ ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್‌ ನಲ್ಲಿ ಸೆರೆಯಾಗಿದೆ. ಇದರ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳಿಸುವಂತಿವೆ.

ವಿಜಯಪುರದ ನವಭಾಗ್ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ ‌ಪೋದಲ್ಲಿ ಅಕ್ಟೋಬರ್ 20ರ ಸಂಜೆ ಸಂಭವಿಸಿದ ಈ ಅವಘಡದಲ್ಲಿ ನಿಖಿತಾ ಅರವಿಂದ ಬಿರಾದಾರ (21) ಎಂಬ ಯುವತಿ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಖಿತಾ ಹಾಗೂ ಮತ್ತಿಬ್ಬರು ಗೆಳೆಯತಿಯರು ಸೇರಿ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತು ಆಟವಾಡುತ್ತಿದ್ದರು. ಇದೀಗ ಯುವತಿಯ ಪೋಷಕರ ಮೊಬೈಲ್‌ ನಲ್ಲಿ ಅಂದಿನ ಘಟನೆಯ ಕೊನೆ ಕ್ಷಣಗಳು ಸೆರೆಯಾಗಿರುವುದು ಬೆಳಕಿಗೆ ಬಂದಿದೆ.

1002120311

ತೊಟ್ಟಿಲಿನಲ್ಲಿ ಕುಳಿತಿದ್ದಾಗ ನಿಖಿತಾ ಅವರಿಗೆ ಹಾಕಿದ್ದ ಸೇಫ್ಟಿ ಬೆಲ್ಟ್ ಸಡಿಲಗೊಂಡಿದೆ. ಆಗ ತೊಟ್ಟಿಲು ತಲೆ ಕೆಳಗೆ, ಮೇಲೆ ಮಾಡಿ ತೂಗುತ್ತಿರುವವಾಗಲೇ ಭಯದಿಂದ ಚೀರಾಟ ಮಾಡಿದ್ದಾರೆ. ಈ ವೇಳೆ, ನಿಖಿತಾ ತಾಯಿ ಗೀತಾ ಕೂಡ ರೇಂಜರ್ ಸ್ವಿಂಗ್ ಯಂತ್ರ ನಿಲ್ಲಿಸುವಂತೆ ಆಪರೇಟರ್ ಬಳಿ ಪದೇ ಪದೇ ಕೇಳಿಕೊಂಡಿದ್ದಾರೆ. ಆದರೂ, ಯಂತ್ರವನ್ನು ಆಪರೇಟರ್ ನಿಲ್ಲಿಸಿಲ್ಲ. ಇದರಿಂದ ನಿಖಿತಾ ಕೆಳಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಫಿಶ್ ಟನಲ್ ಎಕ್ಸ್ಪೋಗೆ ಬಂದಿದ್ದ ಜನರು ಸಹ ಓಡಿ ಬಂದಿರುವ ದೃಶ್ಯಗಳು ಮೊಬೈಲ್‌ನಲ್ಲಿ ದಾಖಲಾಗಿವೆ.

ಆದರೆ, ಕೆಳಗಡೆ ಬಿದ್ದ ರಭಸಕ್ಕೆ ನಿಖಿತಾ ಅವರ ತಲೆ ಮತ್ತು ಕಾಲುಗಳಿಗೆ ತೀವ್ರವಾಗಿ ಪೆಟ್ಟಾಗಿತ್ತು. ನಂತರದಲ್ಲಿ ಪೋಷಕರೇ ಆಟೋದಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅದೇ ದಿನ ಚಿಕಿತ್ಸೆ ಫಲಕಾರಿಯಾಗದೆ ನಿಖಿತಾ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕಳಪೆ ಸೇಫ್ಟಿ ಬೆಲ್ಟ್ ಕಾರಣದಿಂದಲೇ ಈ ದುರಂತ ನಡೆದಿದೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಸಂಬಂಧ ಫಿಶ್ ಟನಲ್ ಎಕ್ಸ್ಪೋ ಮ್ಯಾನೇಜರ್, ಆಪರೇಟರ್ಸ್ ಹಾಗೂ ಇತರರ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ, ಆಪರೇಟರ್ ಮತ್ತು ಕ್ಯಾಶಿಯರ್ ಸೇರಿದಂತೆ ಈವರೆಗೆ ಒಟ್ಟು ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...