ವಿಜಯಪುರ | ಕೂಲಿಯಾಸೆಗಾಗಿ ತೆಂಗಿನಮರ ಏರಿದ್ದ ಯುವಕ ಆಯತಪ್ಪಿ ಬಿದ್ದು ಮೃತ್ಯು: ಎಫ್‌ಐಆರ್

Date:

ಕೂಲಿ ಸಿಗುವ ಆಸೆಗಾಗಿ ತೆಂಗಿನಮರಕ್ಕೆ ಏರಿದ್ದ ಯುವಕನೋರ್ವ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು 21 ವರ್ಷದ ಅವಿವಾಹಿತ ಯುವಕ ಸಂತೋಷ ಶರಣಪ್ಪ ವಾಲಿಕಾರ ಎಂದು ಗುರುತಿಸಲಾಗಿದೆ.

ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಭಾಗ್ಯಾ ಮಹೇಶ ಮುರಾಳ ಎನ್ನುವವರ ಮನೆಯ ಮುಂದೆ ಇದ್ದ ಭಾರಿ ಎತ್ತರದ ತೆಂಗಿನ ಮರ ಏರಿ ತೆಂಗಿನಕಾಯಿ ಮತ್ತು ಒಣಗಿದ ಗರಿ ಕೆಳಗೆ ಇಳಿಸುವಾಗ ಮೇಲಿಂದ ಜಾರಿ ನೆಲಕ್ಕೆ ಬಿದ್ದು ಯುವಕ ಸಂತೋಷ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೋಷ ನೆರಬೆಂಚಿ ಗ್ರಾಮದವನಾಗಿದ್ದು, ತನ್ನೂರಲ್ಲೇ ಕುರಿ ಕಾಯುತ್ತಿದ್ದ. ತೆಂಗಿನ ಮರ ಸ್ವಚ್ಛಗೊಳಿಸಿದರೆ ಕೂಲಿ ಸಿಗುತ್ತದೆ ಎನ್ನುವ ಆಸೆಗೆ ಬಿದ್ದು ತನ್ನೂರಿನಿಂದ 10 ಕಿಮಿ ದೂರದಲ್ಲಿರುವ ಕವಡಿಮಟ್ಟಿಗೆ ಬಂದಿದ್ದ. 4-5 ಮನೆಗಳ ಮುಂದಿನ ತೆಂಗಿನ ಮರ ಸ್ವಚ್ಛಗೊಳಿಸಿದ್ದ ಈತ ಮುರಾಳ ಅವರ ಮನೆಯ ಮುಂದಿದ್ದ ಬಹಳಷ್ಟು ಎತ್ತರದ ಮರ ಏರಿದ್ದ. ಎಲ್ಲರೂ ನೋಡುತ್ತಿದ್ದಂತೆಯೇ ಅಂದಾಜು 50-60 ಅಡಿ ಎತ್ತರದಿಂದ ಆಯತಪ್ಪಿ ರಸ್ತೆಯ ಮೇಲೆ ಬಿದ್ದಿದ್ದಾನೆ. ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ಬೆಳಗ್ಗೆ ನಡೆದಿದ್ದರೂ ರಾತ್ರಿ 8.30 ಗಂಟೆಯಾದರೂ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವ ಪ್ರಕ್ರಿಯೆ ನಡೆದಿತ್ತು. ಎಫ್ಐಆರ್ ದಾಖಲಾಗದೆ ಶವದ ಮರಣೋತ್ತರ ಪರೀಕ್ಷೆ ನಡೆಯುವುದಿಲ್ಲ. ಹೀಗಾಗಿ ರಾತ್ರಿಯಾದರೂ ಶವ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿಯೇ ಅನಾಥವಾಗಿ ಇತ್ತು. ಎಫ್ಐಆರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ರಾತ್ರಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಇದನ್ನು ಓದಿದ್ದೀರಾ? ರಾಜ್ಯೋತ್ಸವ ಪ್ರಶಸ್ತಿಗೆ ‘ಮಲಹೊರುವವರ ಯೋಗ್ಯತೆ’ ಬಗ್ಗೆ ಪ್ರಶ್ನೆ: ವಿವಾದದ ಕಿಡಿ ಹೊತ್ತಿಸಿದ ನಾಗೇಶ್ ಹೆಗಡೆ ಪೋಸ್ಟ್‌

ಘಟನೆಗೆ ಸಂಬಂಧಿಸಿ ಮೃತ ಸಂತೋಷನ ತಂದೆ ಶರಣಪ್ಪ ಅಡಿವೆಪ್ಪ ವಾಲಿಕಾರ ಅವರು ಕವಡಿಮಟ್ಟಿಯ ಪ್ರಶಾಂತ ಮಹೇಶ ಮುರಾಳ, ಭಾಗ್ಯ ಮಹೇಶ ಮುರಾಳ, ಪವಿತ್ರಾ ಮಹೇಶ ಮುರಾಳ, ಉಮೇಶ ಸಿದ್ರಾಮಪ್ಪ ಮುರಾಳ, ಪರಪ್ಪ ಸಿದ್ರಾಮಪ್ಪ ಮುರಾಳ ಇವರು ಸಂತೋಷನನ್ನು ಎತ್ತರವಾದ ತೆಂಗಿನ ಮರ ಏರಲು ಒತ್ತಾಯಿಸಿ ನನ್ನ ಮಗನ ಸಾವಿಗೆ ಕಾರಣರಾಗಿದ್ದಾರೆ ಎಂದು ಲಿಖಿತ ದೂರು ನೀಡಿದ್ದಾರೆ. ಅಲ್ಲದೇ, ಕೆಲವು ಸ್ಥಳೀಯ ರಾಜಕೀಯ ವ್ಯಕ್ತಿಗಳಿಂದ ನನಗೆ ಬೆದರಿಕೆ ಇರುವುದರಿಂದ ಸೂಕ್ತ ರಕ್ಷಣೆ ನೀಡಬೇಕೆಂದು ಪೊಲೀಸರನ್ನು ಕೋರಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...