ವಿಜಯಪುರ | ʼಭಾರತ ಪ್ರಜಾಪ್ರಭುತ್ವ ವ್ಯವಸ್ಥೆ, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಸಂವಿಧಾನದಿಂದʼ

Date:

ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಮಾತ್ರ ಎಂದು ಶಾಸಕ ನಾಡಗೌಡ್ ಹೇಳಿದರು.

ತಾಳಿಕೋಟಿ ಪಟ್ಟಣದಲ್ಲಿ ಕಂದಾಯ ಇಲಾಖೆ ಹಾಗು ತಾಲೂಕ ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆರಕ್ಷಕ ಪಡೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಚರಿಸಲಾದ 75ನೇ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಶಾಸಕ ಸಿ.ಎಸ್. ನಾಡಗೌಡ ಮತ್ತು ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ಸಿಪಿಐ ತುಳಸಿಗೆರಿ, ತಹಸೀಲ್ದಾರರಾದ ಕೀರ್ತಿ ಚಾಲಕ್, ಪುರಸಭೆಯ ಪ್ರಧಾನ ಕಾರ್ಯದರ್ಶಿ ಮೋಹನ್ ಜಾದವ ಹಾಗೂ ತಾಲೂಕು ಆಡಳಿತದ ಎಲ್ಲಾ ಸಿಬ್ಬಂದಿ ಸೇರಿ ಧ್ವಜಾರೋಹಣ ನೆರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಮಾತನಾಡಿದ ಶಾಸಕ ಸಿ.ಎಸ್. ನಾಡಗೌಡ, ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವುದು ವಿಶೇಷ. ಇದು ನಮ್ಮ ಹೆಮ್ಮೆಯ ಭಾರತ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ನೇತಾಜಿ, ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಇಂದು ನಾವು ನಡೆಯುವುದು ಅತ್ಯಂತ ಮುಖ್ಯವಾದದ್ದು ಎಂದರು.

ನಮ್ಮ ದೇಶದಲ್ಲಿ ಸಾಕಷ್ಟು ಜಾತಿ ಧರ್ಮಗಳಿದ್ದರೂ ಕೂಡ ನಾವು ಒಂದೇ ಎಂಬ ಭಾವನೆಯಿಂದ ಬದುಕುತ್ತಿದ್ದೇವೆ. ಆದರೆ, ಈಗಿನ ಕೇಂದ್ರ ಸರ್ಕಾರವು ಜಾತಿ ಧರ್ಮಗಳ ಮಧ್ಯೆ ಕಂದಕವನ್ನುಂಟು ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಇದರ ವಿರುದ್ಧ ಜನರು ಧ್ವನಿ ಎತ್ತಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಳಿಕೋಟಿಯ ಮಾಜಿ ಸೈನಿಕರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾನವ ಬಂದತ ವೇದಿಕೆಯ ತಾಲೂಕು ಸಂಚಾಲಕ ಕಾಶಿನಾಥ್ ಕಟ್ಟಿಮನಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೈ ಭೀಮ್ ಮುತ್ತಗಿ ಇದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಭಾರತ ಸಂವಿಧಾನ ಕುರಿತ ಕ್ವೀಜ್ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಅಂಜುಮನ್ ಕಾಲೇಜಿನ ವಿದ್ಯಾರ್ಥಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದಕುರಿತು ನಾಟಕ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...