ವಿಜಯಪುರ | ಜಾನಪದ ದಿಗ್ಗಜ ಡಾ. ಸಿಂಪಿ ಲಿಂಗಣ್ಣನವರ 119ನೇ ಜನ್ಮ ದಿನಾಚರಣೆ

Date:

ಜಾನಪದ ದಿಗ್ಗಜ ಕರ್ನಾಟಕ ಜಾನಪದ ರತ್ನ ಡಾ. ಸಿಂಪಿ ಲಿಂಗಣ್ಣನವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಆಚರಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಭಿಪ್ರಾಯಪಟ್ಟರು.

ವಿಜಯಪುರ ಜಿಲ್ಲೆ ಚಡಚಣ ಪಟ್ಟಣದಲ್ಲಿರುವ ಲಿಂಗಣ್ಣನವರ ಸಮಾಧಿಗೆ ಅವರ 119ನೇ ಜನ್ಮ ದಿನದ ಅಂಗವಾಗಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು, ನವೋದಯ ಕಾಲದ ಪ್ರಮುಖ ಸಾಹಿತಿಗಳು ಹಾಗೂ ಜಾನಪದ ತಜ್ಞರಾಗಿ ರಾಜ್ಯದ ಗಮನ ಸೆಳೆದರು. ಶ್ರೇಷ್ಠ ಶಿಕ್ಷಕರು ಮಧುರಚೆನ್ನರ ಒಡನಾಡಿಗಳು ಹಾಗೂ ಅರವಿಂದರ ಭಕ್ತರಾಗಿದ್ದರು.

ಇವರು ಸಂಗ್ರಹಿಸಿದ ಗರತಿ ಹಾಡು, ಜೀವನ ಸಂಗಾತಿ ಅಂತಹ ಜನಪದ ಹಾಡುಗಳ ಕೃತಿಗಳು ಜಾನಪದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯ ಅನೇಕ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕೋಶಾಧ್ಯಕ್ಷ ಸಂಗಮೇಶ ಮೇತ್ರಿ ಮಾತನಾಡಿ, ಸಿಂಪಿ ಲಿಂಗಣ್ಣ ಜಾನಪದ ಸಂಶೋಧಕರಾಗಿ, ಕವಿಗಳಾಗಿ, ಪ್ರಬಂಧಕಾರ ಹಾಗೂ ನಾಟಕಕಾರ ರಾಜ್ಯಕ್ಕೆ ಪರಿಚಿತರಾಗಿದ್ದರು. 1993ರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಜರುಗಿದ 62ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಾಕ್ಷರಾಗಿದ್ದರು. ಗಡಿನಾಡಿನ ಜಾನಪದ ಭೀಷ್ಮರಾಗಿದ್ದ ಅವರು ಜಾನಪದ ಸಾಹಿತ್ಯಕ್ಕೆ ಘನತೆ ತಂದು ಕೊಟ್ಟ ಮಹಾನ ಚೇತನ ಎಂದರು.

ಚಡಚಣ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಪ್ಪ ಮಾನೆ ಮಾತನಾಡಿ, ಇಂದು ಫೆಬ್ರುವರಿ 10 ಡಾ. ಸಿಂಪಿ ಲಿಂಗಣ್ಣ ನವರ ಜನ್ಮದಿನ, ಇವರು ಮಧುರಚೆನ್ನರ ಜೊತೆ ಕೂಡಿ ಸಂಗ್ರಹಿಸಿದ ಗರತಿಹಾಡುಗಳ ಗ್ರಂಥ ಜಾನಪದ ಸಾಹಿತ್ಯ ಕ್ಷೇತ್ರದಲ್ಲಿ ಆಚಾರ್ಯ ಕೃತಿಯಾಗಿ ನಿಲ್ಲುತ್ತದೆ. ಸಿಂಪಿ ಲಿಂಗಣ್ಣ ಅವರು ಜಾನಪದ ಕ್ಷೇತ್ರದಲ್ಲಿ ನೂರಾರು ಕೃತಿಗಳ ಕೊಡುಗೆ ನೀಡಿದ್ದಾರೆ ಎಂದರು.

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಸಂಚಾಲಕ ರಾಜೇಸಾಬ ಶಿವನಗುತ್ತಿ, ಸಿಂಪಿ ಲಿಂಗಣ್ಣ ಅವರ ಜೀವನ ಚರಿತ್ರೆ ಕುರಿತು ಮಾತನಾಡಿದರು. ಚಡಚಣ ಸಾಹಿತಿಗಳಾದ ವಿದ್ಯಾ ಕಲ್ಯಾಣಶೆಟ್ಟಿ ಅವರು ಮೊದಲ ಬಾರಿಗೆ ಜಾನಪದ ಲಾವಣಿಗಳ ಕುರಿತು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಬಂಧ ಮಂಡಿಸಿ ಪ್ರಮುಖರಾದವರು ಎಂದರು.

ವೇದಿಕೆಯಲ್ಲಿ ಚಡಚಣ ಅಂಜುಮನ್ ಸಂಸ್ಥೆ ಅಧ್ಯಕ್ಷ ಮುರ್ತುಜಾ ನಧಾಫ್, ಸಂತೋಷ ಕಲ್ಯಾಣಶೆಟ್ಟಿ, ನಿಂಗಪ್ಪ ಅಗಸರ ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...