ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ

Date:

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಜ್ಞಾನಶಕ್ತಿ ಆವರಣದ ಕ್ರೀಡಾ ಮೈದಾನದಲ್ಲಿ ವಿಶೇಷವಾಗಿ ನಿರ್ಮಿಸಿರುವ ಸಭಾಂಗಣದಲ್ಲಿ ಜನವರಿ 9ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಪ್ರೊ ಬಿ ಕೆ ತುಳಸಿಮಾಲಾ ತಿಳಿಸಿದರು.‌

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಗೌರವಾನ್ವಿತ ರಾಜ್ಯಪಾಲರು ಮತ್ತು ಮಹಿಳಾ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ ಅವರು ಘಟಿಕೋತ್ಸವದ ಮುಖ್ಯ ಅತಿಥಿ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಮತ್ತು ಕುಲಪತಿ ಪ್ರೊ.‌ ಬಿ ಕೆ ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್ ಅವರು ಉಪಸ್ಥಿತರಿರುವರು” ಎಂದು ಹೇಳಿದರು.

“ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಮಹನೀಯರಿಗೆ ಈ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು. ಕಲಾಕ್ಷೇತ್ರದ ಸಾಧನೆಗಾಗಿ ಶಿಗ್ಗಾಂವಿಯ ಗೋಟಗೋಡಿ ರಾಕ್‌ಗಾರ್ಡ್‌ ವೇದರಾಣಿ ದಾಸನೂರು, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಮತ್ತು ಸಿನಿಮಾ ಕ್ಷೇತ್ರದ ಸಾಧನೆಗಾಗಿ ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿ ತಾರಾ ಅವರಿಗೆ ರಾಜ್ಯಪಾಲರು ಮತ್ತು ನಮ್ಮ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಥಾವರ್‌ ಚಂದ್ ಗೆಹ್ಲೋಟ್ ಅವರು ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 63 ಮಂದಿ ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟಿಕೋತ್ಸವದಲ್ಲಿ ಒಟ್ಟು 13.461 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಈ ಘಟಿಕೋತ್ಸವದಲ್ಲಿ ಒಟ್ಟು 34 ವಿದ್ಯಾರ್ಥಿನಿಯರಿಗೆ ಪಿಎಎಚ್‌ಡಿ ಪದವಿ ಪ್ರದಾನ ಮಾಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾಲ ಕಟ್ಟದ್ದಕ್ಕೆ ಹಸುಗೂಸು-ಬಾಣಂತಿಯನ್ನು ಮನೆಯಿಂದ ಹೊರ ಹಾಕಿದ ಫೈನಾನ್ಸ್ ಕಂಪೆನಿ

“ವಿಶ್ವವಿದ್ಯಾನಿಲಯದ 16ನೆಯ ಘಟಕೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಲು ಈಗಾಗಲೇ ಹಲವಾರು ಸಮಿತಿಗಳನ್ನು ರಚಿಸಲಾಗಿದ್ದು, ಭರದಿಂದ ಸಿದ್ದತೆಗಳು ನಡೆದಿವೆ.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ. ಸಕ್ಸಾಲ್ ಹೂವಣ್ಣ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ. ಓಂಕಾರ ಕಾಕಡೆ ಹಾಗೂ ಸಂಯೋಜಕಿ ಡಾ.ತಹಮೀನಾ ಕೋಲಾರ, ಐಸಿಟಿ ಸಂಯೋಜಕ ಸಂದೀಪ್ ನಾಯಕ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...