ವಿಜಯಪುರ | 18 ಸರ್ಕಾರಿ ಪ್ರಾಥಮಿಕ ಶಾಲೆಗಳು ಪ್ರೌಢಶಾಲೆಗಳಾಗಿ ಉನ್ನತೀಕರಣ: ಸಚಿವ ಎಂ ಬಿ ಪಾಟೀಲ್

Date:

ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಕ್ಕೆ ಸ್ಪಂದಿಸಿ ಸರ್ಕಾರವು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಉನ್ನತೀಕರಣಕ್ಕೆ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನೂ ಪ್ರೌಢಶಾಲೆಗಳಾಗಿ ಉನ್ನತೀಕರಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಸಿಎಸ್ಆರ್ ಮತ್ತು ಧಾನಿಗಳ ಅನುದಾನ ಸರ್ಕಾರಿ ಅನುದಾನದಡಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿ ಜಿಲ್ಲೆಯಲ್ಲಿ ಒಟ್ಟು 18 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಪ್ರಸಕ್ತ 2025-26ರ ನೇ ಶೈಕ್ಷಣಿಕ ವರ್ಷದಿಂದ ಉನ್ನತೀಕರಿಸಿ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ ಎಂದು ತಿಳಿಸಿದರು.

ಇದರಲ್ಲಿ ಬಬಲೇಶ್ವರ ಮತಕ್ಷೇತ್ರದ ಆರು, ಸಿಂದಗಿ ತಾಲೂಕಿನ ಎಂಟು, ಬಸವನಬಾಗೇವಾಡಿ ಮತ್ತು ಇಂಡಿ ತಾಲೂಕಿನ ತಲ ಒಂದು ಶಾಲೆಗಳನ್ನು ಪ್ರೌಢಶಾಲೆಗೆ ಉನ್ನತಿಕರಿಸಿ ಆದೇಶ ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಗಾರಿಕಾ ಇಲಾಖೆ ಸಿಎಸ್ಆರ್ ಅನುದಾನದಲ್ಲಿ ಬಬಲೇಶ್ವರ ಮತ್ತು ತಿಕೋಟಾ ತಾಲೂಕಿನ ಮನವಾಡದಲ್ಲಿರುವ ಸರ್ಕಾರಿ ಎಂ ಪಿ ಎಸ್, ಕಾತ್ರಾಳದ ಹಿರಿಯ ಪ್ರಾಥಮಿಕ ಶಾಲೆ, ರಾಜ್ಯ ಸರ್ಕಾರಿ ಅನುದಾನದಡಿ ಸಿದ್ದಾಪುರ (ಅ ) ಸರ್ಕಾರಿ ಜಿ ಎಚ್ ಪಿ ಎಸ್ ಶಾಲೆ, ನೀಡೋಣಿಯ ಸರ್ಕಾರಿ ಎಚ್‌ಪಿಎಸ್, ತಿಗಣಿ ಬಿದರಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿ ಕೊಟ್ಯಳದ ಎಚ್ ಪಿ ಎಸ್ ಶಾಲೆ ಪ್ರೌಢಶಾಲೆಗಳಾಗಿ ಉನ್ನತೀಕರಣವಾಗಲಿವೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಅನುದಾನದ ಅಡಿ ಸಿಂದಗಿ ತಾಲೂಕಿನ ಸಿಂದಗಿ ಪಟ್ಟಣದ ಸರ್ಕಾರಿ ಕೆಜಿಎಚ್ ಪಿ ಎಸ್ ಶಾಲೆ, ಬೊಮ್ಮನ ಜೋಗಿ ಎಲ್ ಟಿ 1, ಸರ್ಕಾರಿ ಜಿ ಎಚ್ ಪಿ ಎಸ್ ಶಾಲೆ, ಕೊರವಾರದ ಕೆ ಬಿ ಎಚ್ ಪಿ ಎಸ್ ಶಾಲೆ, ಚಿಕ್ಕ ಸಿಂದಗಿಯ ಸರ್ಕಾರಿ ಕೆ ಬಿ ಎಚ್ ಪಿ ಎಸ್ ಶಾಲೆ, ಆಹೇರಿಯ ಸರ್ಕಾರಿ ಎಂಪಿಎಸ್ ಶಾಲೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿ ಗುಂದಗಿಯ ಸರ್ಕಾರಿ ಕೆ ಬಿ ಎಚ್ ಪಿ ಎಸ್ ಶಾಲೆ ಮತ್ತು ಮಾದನಹಳ್ಳಿಯ ಸರ್ಕಾರಿ ಕೆ ಬಿ ಎಚ್ ಪಿ ಎಸ್ ಶಾಲೆಗಳು ಪ್ರೌಢ ಶಾಲೆಗಳಾಗಿ ಉನ್ನತಿಕರಣವಾಗಲಿವೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಅನುದಾನದಡಿ ಮುದ್ದೇಬಿಹಾಳ ತಾಲೂಕಿನ ಶಿವಪೂರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಗಡಿ ಸೋಮನಾಳ ಗ್ರಾಮದ ಸರ್ಕಾರಿ ಎಚ್ ಪಿ ಎಸ್ ಶಾಲೆಗಳು ಪ್ರೌಢ ಶಾಲೆಗಳಾಗಿ ಉನ್ನತೀಕರಣವಾಗಿವೆ ಎಂದರು.

ಇದನ್ನು ಓದಿದ್ದೀರಾ? ಮತಗಳ್ಳತನ | ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಬಸವನಬಾಗೇವಾಡಿ ತಾಲೂಕಿನ ಒಕ್ಕಲಿಯ ಸರ್ಕಾರಿ ಯು ಬಿ ಎಚ್ ಪಿ ಎಚ್ ಎಸ್ ಶಾಲೆಯನ್ನು ರಾಜ್ಯ ಸರ್ಕಾರದ ಅನುದಾನದಡಿ ಮತ್ತು ಹಿಂಡಿ ತಾಲೂಕಿನ ತೆಗ್ಗಿಹಳ್ಳಿಯ ಸರ್ಕಾರಿ ಎಚ್ ಪಿ ಎಸ್ ಶಾಲೆಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿ ಉನ್ನತಿಕರಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...