“ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಸುಮಾರು 2.86 ಲಕ್ಷ ವಿವಿಧ ಹುದ್ದೆಗಳು ಖಾಲಿ ಇದ್ದು ತಕ್ಷಣ ಭರ್ತಿ ಮಾಡಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿ ಯುವ ಜನರು ವಿಜಯಪುರ ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಿಂದ, ಡಾ. ಬಿ ಆರ್ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಜಾತ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚಿತ್ರ ಇರುವ ಫಲಕಗಳನ್ನು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
“ಪಾರದರ್ಶಕವಾಗಿ ನೇಮಕಾತಿ ಮಾಡಬೇಕು, ಬ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ನೋಡಿಕೊಳ್ಳಬಹುದು” ಎಂದು ಒತ್ತಾಯಿಸಿದರು.
ವಿಜಯಪುರ್ ನಗರದ ಡಾ. ಬಿಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರವೇಶ ಶುಲ್ಕ ₹500 ನಿಗದಿ ಪಡಿಸಿರುವುದನ್ನು ತೆಗೆದು ಹಾಕಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಬೇಕು” ಎಂದು ಆಗ್ರಹಿಸಿದರು.
“ಅನೇಕ ವರ್ಷಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ವಯೋಮಿತಿಯನ್ನು ಹೆಚ್ಚಿಸುವುದೇ ಇದಕ್ಕೆ ಪರಿಹಾರ. ಇಲ್ಲವಾದರೆ ಸರ್ಕಾರ ಮಾಡಿದ ತಪ್ಪಿಗೆ ಲಕ್ಷಾಂತರ ಬಡವರು ಉದ್ಯೋಗ ವಂಚಿತರಾಗ ಬೇಕಾಗುತ್ತದೆ. ಹೀಗಾಗಿ ಸರ್ಕಾರ ಕೂಡಲೇ ವಯೋಮಿತಿ ಹೆಚ್ಚಿಸಿ ನೇಮಕಾತಿಯನ್ನು ಆರಂಭಿಸಬೇಕು” ಎಂದು ಆಗ್ರಹಿಸಿದರು.
“ನೇಮಕಾತಿ ಇಂದು ನಡೆಯುತ್ತದೆ, ನಾಳೆ ನಡೆಯುತ್ತದೆ ಎಂದು ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದರೆ, ಆಳುವ ಸರ್ಕಾರಗಳು ಮಾತ್ರ ಇದಕ್ಕೆ ಕ್ಯಾರೆ ಎನ್ನುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ರಾಜ್ಯ ಸರ್ಕಾರ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಪೊಲೀಸಳಕ್ಕೆ ಪಶು ಸಂಗೋಪನ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಉದ್ಯೋಗಗಳಿಗೆ ನೇಮಕಾತಿ ಸೂಚನೆ ಹೊರಡಿಸಬೇಕು” ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂತ ಕುಮಾರ್ ಆರ್, ಶ್ರೀಶೈಲ ತೇಲಿ, ಅನಿಲ್ ಕಾಂಬಳೆ, ವಿಜಯಕುಮಾರ ಮಮದಾಪುರ ಸಿದ್ದು ಕೇರಿ ಶರಣಯ್ಯ ಭಂಡಾರಿ ಮಠ ಪ್ರಭುಗೌಡ ರೆಡ್ಡಿ ಮಾಂತು ಮಾವರ ಇದ್ದರು.





