ವಿಜಯಪುರ | ಧಾರ್ಮಿಕ ಸಹಬಾಳ್ವೆಗೆ ಮಾದರಿಯಾದ ಸೌಹಾರ್ದ ಮೆರವಣಿಗೆ

Date:

ನಮ್ಮ ದೇಶ ಬಹುತ್ವವನ್ನು ಪ್ರತಿಪಾದಿಸುವಂತಹದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವುದು, ವಿವಿಧ ಧರ್ಮ ಜಾತಿಯ ಭಾಷೆಯ ಜನಾಂಗದವರಿದ್ದೇವೆ ನಾವೆಲ್ಲರೂ ಸೌಹಾರ್ದತೆಯಿಂದ ಬದುಕುತ್ತಿದ್ದೇವೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರು ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಸೌಹಾರ್ದತೆ, ಸಹಬಾಳ್ವೆ ಮತ್ತು ರಾಷ್ಟ್ರೀಯ ಏಕತೆಗಾಗಿ ನಡೆದ ಬೃಹತ್ ಸೌಹಾರ್ದ ಮೆರವಣಿಗೆಯಲ್ಲಿ ಅವರು ಮಾತನಾಡಿದರು.

ಸೌಹಾರ್ದ ಸಮನ್ವಯ ವೇದಿಕೆ ಆಶ್ರಯದಲ್ಲಿ ಈ ಮೌನ ಮೆರವಣಿಗೆ ಬಸವೇಶ್ವರ ಚೌಕದಿಂದ ಕಂಟ್ರಿ ಸರ್ಕಲ್ ವರೆಗೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೆರವಣಿಗೆಯಲ್ಲಿ ಎಲ್ಲಾ ಧರ್ಮಗಳ ಧಾರ್ಮಿಕ ಮುಖಂಡರು, ವಿದ್ಯಾರ್ಥಿಗಳು, ಶಿಕ್ಷಕರು, ಮದ್ರಸಾ ಮತ್ತು ಶಾಲೆಗಳ ಪ್ರತಿನಿಧಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ರಾಷ್ಟ್ರಪರತೆಯ ಮೌಲ್ಯಗಳನ್ನು ಪ್ರತಿಪಾದಿಸಿದರು.

ನಂದವಾಡಗಿ ಯಾ ಚಂದ್ರಮಹಾಸ್ವಾಮೀಜಿ ಮಾತನಾಡಿ, “ಪ್ರೀತಿ ಹಂಚುವುದು ಮತ್ತು ಹೃದಯಗಳನ್ನು ಬೆಸೆದುಕೊಳ್ಳುವುದು ಕಾಲದ ಅವಶ್ಯಕತೆ. ಶುದ್ಧ ಮನಸ್ಸು, ಉತ್ತಮ ನಡೆ ಸಮಾಜದಲ್ಲಿ ಶಾಂತಿಯನ್ನು ತಂದೊಡುತ್ತದೆ.” ಎಂದರು.

ಶರಣಪ್ಪ ಅಮದಿಹಾಳ್ ಮಾತನಾಡಿ, ದೇಶದ ಇತ್ತೀಚಿನ ಪರಿಸ್ಥಿತಿಗಳತ್ತ ಗಮನ ಸೆಳೆಯುತ್ತಾ, ಸಂವಿಧಾನಕ್ಕೆ ವ್ಯಕ್ತಪಡಿಸುತ್ತಿರುವ ದೊಡ್ಡ ಶಕ್ತಿಗಳ ವಿರುದ್ಧ ನಾವು ಒಗ್ಗಟ್ಟಾಗಿ ಹೋರಾಟ ಮಾಡಬೇಕಾಗಿದೆ.ಸಂವಿಧಾನದ ರಕ್ಷಣೆಗೆ ನಾವೆಲ್ಲರೂ ಒಟ್ಟಾಗಿ ಪ್ರಯತ್ನಿಸಬೇಕು ಎಂದರು.

WhatsApp Image 2025 07 06 at 8.43.11 AM

ಇದನ್ನೂ ಓದಿ: ವಿಜಯಪುರ | ವಿದ್ಯಾರ್ಥಿನಿಯರ ವಸತಿ ನಿಲಯ ಮಂಜೂರಾತಿಗೆ ಆಗ್ರಹ

ಕ್ರೈಸ್ತ ಸಮುದಾಯದ ಪ್ರತಿನಿಧಿ ಶ್ರೀ ಜಾನ್ ಬೆಟ್ಟರ್ ಅವರು ಧರ್ಮ, ಜಾತಿ, ಭಾಷೆ ಮೀರಿ ಸೌಹಾರ್ದತೆ, ಸಹಬಾಳ್ವೆ ಕುರಿತು ಮಾತನಾಡಿದರು.

ಈ ಮೆರವಣಿಗೆಯಲ್ಲಿ ಮೊಹಮ್ಮದ್ ಯೂನೂಸ್ ಮುದ್ದಗಲ್, ಸಿದ್ರಾ ಅಕಾಡೆಮಿ ವಿದ್ಯಾರ್ಥಿಗಳು, ಸ್ಥಳೀಯ ಶಾಲೆಗಳ ಶಿಕ್ಷಕರು, ಜನಾಬ್ ಅಬ್ದುಲ್ ರಝಕ ಟಟ್ಗಾರ್, ಜಮಾತ್ ಇಸ್ಲಾಮಿ ಹಿಂದ್ ಸ್ಥಾನಿಯ ಅದ್ದಕ್ಷರು ಹುಸೈನ್ ಭಾಷಾ, ಸುಳಿಬಾವಿ ಸಾಯೇದ್ ಕೂತವಾಲ್,ಡಾ. ಟಿಪ್ಪುಸುಲ್ತಾನ್ ಬಂಡಾರಿ, ಫಾರೂಕ್ ಉಮಾರಿ ,ಹಾಫೀಜ್ ಮೊಹಮ್ಮದ್, ಸೂಫಿಯನ್ ಸಖಾಫಿ,ಮೊಲಾನಾ ಫಾರೂಕ್ ಸಖಾಫಿ ಮತ್ತು ಸಾಮಾನ್ಯ ನಾಗರಿಕರು ಉತ್ಸಾಹದಿಂದ ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...