ವಿಜಯಪುರ | ಅಂಬೇಡ್ಕರ್‌ ಚಿಂತನೆಗೆ ಹೊಸ ವೇದಿಕೆ; ಬುದ್ಧವಿಹಾರದಲ್ಲಿ ಗ್ರಂಥಾಲಯ

Date:

ಬಾಬಾಸಾಹೇಬ ಅಂಬೇಡ್ಕರ್ ವಿಚಾರಗಳ ಪ್ರಚಾರ ಮತ್ತು ಪ್ರಸಾರದ ದೃಷ್ಟಿಯಿಂದ ಬುದ್ಧವಿಹಾರದಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿದ್ದು, ಈ ಗ್ರಂಥಾಲಯವು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿದೆ. ಎಲ್ಲರೂ ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿಜಯಪುರದ ಬೌದ್ಧ ವಿಹಾರದ ನಿರ್ದೇಶಕ ರಾಜಶೇಖರ ಯಡಳ್ಳಿ ಮನವಿ ಮಾಡಿದರು.

ನಗರದ ಸಾರಿಪುತ್ರ-ಬೌದ್ಧದಮ್ಮ ಬೌದ್ಧವಿಹಾರ ಗ್ರಂಥಾಲಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಮ್ಮ ಸಮಾಜದ ವಿದ್ಯಾರ್ಥಿ ಯುವಕರು ಹಾಗೂ ಸಾರ್ವಜನಿಕರು ಬೌದ್ಧವಿಹಾರದ ಗ್ರಂಥಾಲಯವನ್ನು ಸದುಪಯೋಗ ಮಾಡಿಕೊಂಡು ಬುದ್ಧರ ವಿಚಾರ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರಧಾರೆಗಳನ್ನು ನಾಡಿನಾದ್ಯಂತ ಪಸರಿಸುವ ಕೆಲಸ ಆಗಬೇಕು” ಎಂದರು.

ಈ ವೇಳೆ ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಕಲ್ಲಪ್ಪ ತೊರವಿ ಅವರು 5000 ರೂ. ಮುಖಬೆಲೆಯ ಬಾಬಾಸಾಹೇಬ ಅಂಬೇಡ್ಕರ್ ಅವರ ಭಾಷಣ ಮತ್ತು ಬರಹಗಳ ಇಂಗ್ಲಿಷ್ ಆವೃತ್ತಿಗಳ ಗ್ರಂಥದಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುದ್ಧವಿಹಾರಕ್ಕೆ ಆಗಮಿಸಿದ ಕಲ್ಲಪ್ಪ ತೊರವಿಯವರು ಸಾಮೂಹಿಕ ಬುದ್ಧವಂದನೆಯ ನಂತರ ಬೌದ್ಧವಿಹಾರ ನಿರ್ಮಾಣ ಸಮಿತಿಯ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಅವರಿಗೆ ಡಾ. ಅಂಬೇಡ್ಕರ್ ಸಂಪುಟಗಳನ್ನು ಅರ್ಪಿಸಿದರು.

ಇದನ್ನೂ ಓದಿ: ವಿಜಯಪುರ | ಕೃಷಿ ಉಪಕರಣಗಳ ಸಮರ್ಪಕ ಪೂರೈಕೆಗೆ ರೈತ ಸಂಘ ಆಗ್ರಹ

ಬುದ್ಧವಿಹಾರ ನಿರ್ಮಾಣ ಸಮಿತಿಯ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕರಾದ ಅನಿಲ ಹೊಸಮನಿ, ರಾಜೇಶ ತೊರವಿ, ಮನೋಜ ಕೋಟ್ಯಾಳಕರ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚೆನ್ನು ಕಟ್ಟಿಮನಿ, ಮುಖಂಡರಾದ ಬಸವರಾಜ ಬ್ಯಾಳಿ, ಎಂ.ಬಿ. ಹಳ್ಳದಮನಿ, ಕೆ.ಎಂ. ಶಿವಶರಣ, ರಮೇಶ ಹಾದಿಮನಿ, ಪ್ರತಾಪ ಚಿಕ್ಕಲಕಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...