ವಿಜಯಪುರ | ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಮೇಲೆ ಹಿಂದುತ್ವವಾದಿಗಳಿಂದ ಹಲ್ಲೆ

Date:

ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ 15-20ಜನರ ಗುಂಪೊಂದು ದಾಳಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ.

ಬಂದೇನವಾಜ್ ಜಾತಗಾರ ಹಲ್ಲೆಗೊಳಗಾದವರು. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಭಜರಂಗದಳದವರು ಎಂದು ಹೇಳಲಾಗುತ್ತಿರುವ ವೀರೇಶ ಹಿರೇಮಠ, ರಾಜು ಬಿರಾದಾರ ಸೇರಿದಂತೆ 15-20 ಜನರು ಹಲ್ಲೆಗೈದು ಪರಾರಿಯಾಗಿದ್ದಾರೆ. ಗಾಯಾಳು ಬಂದೇನವಾಜ್ ಜಾತಗಾರರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗೂಡ್ಸ್ ವಾಹನದಲ್ಲಿ ಎರಡು ಹೋರಿ, ಒಂದು ಆಕಳು, ಒಂದು ಎಮ್ಮೆಯ ಕರ ತೆಗೆದುಕೊಂಡು ಹೋಗುವಾಗ ಈ ಹಲ್ಲೆ ನಡೆದಿದೆ. ಈ ಕುರಿತು ಬಬಲೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...