ವಿಜಯಪುರ | ಪಾಳುಬಿದ್ದ ಸಂತೆ ಮಾರುಕಟ್ಟೆ; ಲಕ್ಷಾಂತರ ರೂಪಾಯಿ ವ್ಯರ್ಥ

Date:

ಶರಣೆ ನೀಲಾಂಬಿಕೆಯ ಐಕ್ಯ ಸ್ಥಳ, ಬಸವಣ್ಣನವರ ಆಪ್ತ ಕಾರ್ಯದರ್ಶಿ ಹಡಪದ ಅಪ್ಪಣ್ಣ ಅವರ ಗುರುಪೀಠ ಇರುವ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಿಗಿ ಗ್ರಾಮದಲ್ಲಿ ಜನರ ಅನುಕೂಲಕ್ಕೆಂದೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಸಂತೆ ಮಾರುಕಟ್ಟೆಯೊಂದು ಬಳಕೆ ಮಾಡಿಕೊಳ್ಳದ ಕಾರಣ ಪಾಳು ಬಿದ್ದಿದೆ.

ತಾಳಿಕೋಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ನಬಾರ್ಡ್ ಯೋಜನೆಯಡಿ 2024 -2025ನೇ ಸಾಲಿನಲ್ಲಿ ಅಂದಾಜು ರೂ 11 ಲಕ್ಷ ಅನುದಾನದಲ್ಲಿ ಈ ಸಂತೆ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಆದರೆ ಅದರ ಬಳಕೆ ಈವರೆಗೂ ಆಗಿಲ್ಲ. ಕಟ್ಟಿರುವ ಶೆಡ್, ಕಟ್ಟೆಗಳು ಕೆಲವೆಡೆ ಬಿದ್ದಿದ್ದರೆ ಇನ್ನೂ ಕೆಲವೆಡೆ ಖಾಸಗಿ ವ್ಯಕ್ತಿಗಳ ಪಾಲಾಗಿದೆ. ಸಂತೆ ಮಾರುಕಟ್ಟೆಗೆಂದು ಕಟ್ಟಿರುವ ಜಾಗದಲ್ಲಿ ಹಸು ಮೇಯಿಸಲು, ಹೊಟ್ಟು, ಕಟ್ಟಿಗೆ ಹಾಗೂ ಇತರ ವಸ್ತುಗಳನ್ನು ದಾಸ್ತಾನು ಮಾಡಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ.

ಸ್ವತಃ ಎಪಿಎಂಸಿ ಮಾರುಕಟ್ಟೆ ಅಧಿಕಾರಿಗಳಿಗೆ ಇಲ್ಲೊಂದು ಸಂತೆ ಮಾರುಕಟ್ಟೆಯನ್ನು ಕಟ್ಟಿದ್ದೇವೆ ಎಂಬ ನೆನಪು ಇರಲಿಕ್ಕಿಲ್ಲ ಎಂದು ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಈಗಿನ ಶಾಸಕ ಸಿ ಎಸ್ ನಾಡಗೌಡ ಅವರ ಅವಧಿಯಲ್ಲಿ ಕುಂಟೋಜಿ ಚೆನ್ನವೀರ ಆಚಾರ್ಯರು, ತಾಳಿಕೋಟಿ ಎಪಿಎಂಸಿ ಅಧ್ಯಕ್ಷರಾಗಿದ್ದ ಎಂಜಿ ಪಾಟೀಲ ಗುಂಡಕನಾಳ ಅವರ ನೇತೃತ್ವದಲ್ಲಿ ಸಂತೆ ಮಾರುಕಟ್ಟೆಯನ್ನು ಉದ್ವಾಟಸಲಾಗಿತ್ತು. ಇದೀಗ ಆ ಉದ್ಘಾಟನೆಯ ನೆನಪಿಗೆ ಅಳವಡಿಸಿದ್ದ ನಾಮಫಲಕಗಳನ್ನು ಕಿಡಿಗೇಡಿಗಳು ಹೊಡೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 04 at 1.33.38 PM

ಅಲ್ಲಲ್ಲಿ ಹಾಳಾಗಿರುವ ಸಂತೆ ಮಾರುಕಟ್ಟೆಯನ್ನು ದುರಸ್ತಿ ಮಾಡಿಸಿ ಬಳಕೆ ಮಾಡಲು ಮುಂದಾದರೆ ತಂಗಡಿಯಲ್ಲೊಂದು ಸುಸಜ್ಜಿತ ಮಾರುಕಟ್ಟೆ ಆರಂಭಗೊಳ್ಳಲಿದೆ. ಅಧಿಕಾರಿಗಳು, ಗ್ರಾಮ ಪಂಚಾಯತಿ ಆಡಳಿತ ಕಾರ್ಯಾನ್ಮೋಮುಖವಾಗಬೇಕಿದೆ.

“20 ವರ್ಷಗಳಿಂದ ನಿರ್ಮಿಸಿರುವ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಸ್ಥಳೀಯರು ಆಸಕ್ತಿ ತೋರಿದರೆ ಮಾರುಕಟ್ಟೆ ಸದುಪಯೋಗವಾಗಬಹುದು. ಆದರೆ ಸದ್ಯಕ್ಕೆ ಗ್ರಾಮ ಪಂಚಾಯತಿ ಆವರಣದಲ್ಲಿ ಪ್ರತಿ ಬುಧವಾರಕೊಮ್ಮೆ ವಾರದ ಸಂತೆ ಮಾಡಲಾಗುತ್ತಿದೆ. ಕಿರಿದಾದ ಜಾಗದಲ್ಲಿ ರಸ್ತೆಯ ಮೇಲೆ ವ್ಯಾಪಾರ ಮಾಡುವುದರಿಂದ ಹಲವು ಬಾರಿ ಅಪಘಾತಗಳು ಸಂಭವಿಸಿದ್ದು ಎರಡು ಮೂರು ಸಾವುಗಳು ಸಂಭವಿಸಿವೆ” ಎಂಬುದು ಗ್ರಾಮದ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮುರೋಳ ಅವರ ಅಭಿಪ್ರಾಯ.

WhatsApp Image 2025 03 04 at 1.33.36 PM

“ನಮ್ಮೂರ ಜನರ ಅನುಕೂಲಕ್ಕೆ ನಿರ್ಮಿಸಿರುವ ಸಂತೆ ಮಾರುಕಟ್ಟೆಯನ್ನು ಗ್ರಾಮಸ್ಥರು ಉಪಯೋಗ ಮಾಡಿಕೊಳ್ಳಬೇಕಿತ್ತು. ಆದರೆ 20 ವರ್ಷಗಳಿಂದ ಹಾಗೆಯೆ ಬಿಟ್ಟಿರುವುದು ದುರ್ದೈವದ ಸಂಗತಿ. ಎಪಿಎಂಸಿಯಿಂದ ಕಟ್ಟಿಸಿರುವ ಮಾರುಕಟ್ಟೆ ಉಪಯೋಗ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕು” ಎಂದು ತಂಗಡಿಯ ಹಿರಿಯ ನಾಗರಿಕರ ಮನವಿ ಮಾಡಿದರು.

ಎಪಿಎಂಸಿ ಯಿಂದ ನಿರ್ಮಿಸಿರುವ ಸಂತೆ ಮಾರುಕಟ್ಟೆಯನ್ನು ದುರಸ್ತಿಗೊಳಿಸಲು 15ನೇ ಹಣಕಾಸು ಯೋಜನೆ ಅಡಿ ಕ್ರಿಯಾಯೋಜನೆ ಇರಿಸಿಕೊಳ್ಳಲಾಗಿದೆ. ಗ್ರಾಮ ಪಂಚಾಯತಿಯಿಂದ ಎರಡು ಬಾರಿ ಈ ಸಂತೆ ಮಾರುಕಟ್ಟೆಯನ್ನು ಸ್ವಚ್ಛಗೊಳಿಸಿ ಅಲ್ಲಿಗೆ ವಾರದ ಸಂತೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಊರಿಂದ ದೂರವಾಗುತ್ತದೆ ಎಂಬ ಕಾರಣ ಒಡ್ಡಿ ಕೆಲವರು ಅಲ್ಲಿಗೆ ಹೋಗುವುದಕ್ಕೆ ಹಿಂದೇಟು ಹಾಕಿದರು. ಮತ್ತೊಮ್ಮೆ ಈ ಬಗ್ಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಚರ್ಚೆ ನಡೆಸಿ ಸಂತೆ ಮಾರುಕಟ್ಟೆಯಲ್ಲಿ ದುರಸ್ತಿ ಕಾರ್ಯ ಮಾಡಿಸಿ ಕಾರ್ಯಾರಂಭ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಪ್ರಭಾರ ಪಿಡಿಒ ಎಸ್.ಎಸ್. ಗಣಾಚಾರಿ ಈದಿನ ಪ್ರತಿನಿಧಿಗೆ ಮಾಹಿತಿ ನೀಡಿದರು.

WhatsApp Image 2025 03 04 at 1.33.39 PM

ಇದನ್ನೂ ಓದಿ: ವಿಜಯಪುರ | ಮಹಿಳಾ ದಿನಾಚರಣೆ; ಮಾರ್ಚ್ 6ರಂದು ಮಹಿಳಾ ಸಾಂಸ್ಕೃತಿಕ ಹಬ್ಬ-2025

ಈಗಲಾದರೂ ಸ್ಥಳೀಯ ಆಡಳಿತ ಎಚ್ಚೆತ್ತು ಸಂತೆ ಮಾರುಕಟ್ಟೆಯ ದುರಸ್ತಿಗೆ ಮುಂದಾಗಬೇಕು. ಲಕ್ಷಾಂತರ ರೂ ವೆಚ್ಚದಲ್ಲಿ ಸಾರ್ವಜನಿಕರಿಗಾಗೇ ನಿರ್ಮಿಸಿರುವ ಮಾರುಕಟ್ಟೆ ದುರಸ್ತಿಯಾದರೆ ಸುತ್ತಲಿನ ಗ್ರಾಮಗಳಿಗೂ ಅನುಕೂಲವಾಗಲಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...