ವಿಜಯಪುರ | ನಿಖರತೆ, ಸ್ಪಷ್ಟತೆಯಿರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುತ್ತದೆ: ಪ್ರೊ. ಪಿ ಜಿ ತಡಸದ

Date:

ನಿಖರತೆ ಮತ್ತು ಸ್ಪಷ್ಟತೆ ಇರುವ ಬರವಣಿಗೆಯೇ ಜನರ ವಿಶ್ವಾಸ ಗಳಿಸುವಲ್ಲಿ ಸಹಾಯಕವಾಗುತ್ತದೆ ಎಂದು ವಿಜಯಪುರದ ಮಹಿಳಾ ವಿವಿಯ ಐಕ್ಯೂಎಸಿ ನಿರ್ದೇಶಕ ಪ್ರೊ. ಪಿ ಜಿ ತಡಸದ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವುಮೆನ್ ಮೀಡಿಯಾ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ‘ಟಿವಿ ಸುದ್ದಿ ಬರವಣಿಗೆ’ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

“ಸುದ್ದಿಯನ್ನು ಜನರ ಹೃದಯಕ್ಕೆ ನೇರವಾಗಿ ತಲುಪಿಸುವುದು ಟಿವಿ ಮಾಧ್ಯಮದ ಮುಖ್ಯ ಉದ್ದೇಶವಾಗಿದೆ. ಅದಕ್ಕಾಗಿ ಬಳಸುವ ಭಾಷೆ ಸರಳ, ಸ್ಪಷ್ಟ ಮತ್ತು ಜನರಿಗೆ ಆಕರ್ಷಕವಾಗಿರಬೇಕು. ಪ್ರತಿ ಪದವೂ ಅರ್ಥಪೂರ್ಣವಾಗಿದ್ದು, ಜನರ ಮನಸ್ಸಿನಲ್ಲಿ ಪ್ರಭಾವ ಬೀರುವಂತೆ ಇರಬೇಕು. ಭಾಷೆಯ ಶೈಲಿ ಮೃದು, ಸಂವೇದನಾಶೀಲ ಹಾಗೂ ನೈತಿಕ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, “ಟಿವಿ ಬರವಣಿಗೆ ಇಂದು ದೊಡ್ಡ ಸವಾಲಾಗಿ ರೂಪುಗೊಂಡಿದೆ. ಏಕೆಂದರೆ ಪ್ರತಿ ಕ್ಷಣವೂ ತ್ವರಿತವಾಗಿ ಬದಲಾಗುತ್ತಿರುವ ಲೋಕದಲ್ಲಿ ನಿಖರವಾದ, ಸ್ಪಷ್ಟವಾದ ಮತ್ತು ಆಕರ್ಷಕ ಸುದ್ದಿಯನ್ನು ತಲುಪಿಸುವ ಹೊಣೆಗಾರಿಕೆ ಮಾಧ್ಯಮದ ಮೇಲಿದೆ. ಈ ಸವಾಲನ್ನು ಯಶಸ್ವಿಯಾಗಿ ನಿಭಾಯಿಸಲು ಭಾಷಾ ಕೌಶಲಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಆಗತ್ಯವಾಗಿದೆ. ಪರಿಣಾಮಕಾರಿಯಾದ ಬರವಣಿಗೆ ಮಾತ್ರವೇ ಪ್ರೇಕ್ಷಕರ ಗಮನ ಸೆಳೆಯಲು ಮತ್ತು ಸತ್ಯಸ್ಥಿತಿಯನ್ನು ಸರಿಯಾಗಿ ಪ್ರಸ್ತುತಪಡಿಸಲು ನೆರವಾಗುತ್ತದೆ” ಎಂದರು.‌

ಇದನ್ನೂ ಓದಿದ್ದೀರಾ? ಹಾರೋಹಳ್ಳಿ | ಬನವಾಸಿಯಲ್ಲಿ ಅಸ್ಪೃಶ್ಯತೆ ಆಚರಣೆ: ರಾಜಿ, ಮಾತುಕತೆ ನೆಪದಲ್ಲಿ ಆರೋಪಿಗಳ ರಕ್ಷಣೆ

ಕಾರ್ಯಾಗಾರದಲ್ಲಿ ಬೆಂಗಳೂರಿನ ನ್ಯೂಸ್ ಫಸ್ಟ್ ಕನ್ನಡ ವಾಹಿನಿಯ ಸೀನಿಯರ್ ಕಾಪಿ ಎಡಿಟರ್ ಪೂರ್ಣಿಮಾ ಹೀರೆಮಠ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...