ವಿಜಯಪುರ | ಆದ್ಯತೆ ಮೇರೆಗೆ ಸೋಮದೇವರಹಟ್ಟಿ ತಾಂಡಾದ ಸಮಗ್ರ ಅಭಿವೃದ್ಧಿಗೆ ಕ್ರಮ: ಎಂ ಬಿ ಪಾಟೀಲ

Date:

ವಿಜಯಪುರದ ಸೋಮದೇವರಹಟ್ಟಿ ತಾಂಡಾದ ದುರ್ಗಾದೇವಿ ಮಂದಿರ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಒಂದು ಎಂಬ ಖ್ಯಾತಿ ಗಳಿಸಿದೆ. ಆದ್ಯತೆ ಮೇರೆಗೆ ಈ ತಾಂಡಾದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.

ತಾಂಡಾದಲ್ಲಿ ಮಹಾದ್ವಾರದಿಂದ ದೇವಸ್ಥಾನದವರೆಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ರೂ.50 ಲಕ್ಷ ಅನುದಾನದಲ್ಲಿ ಕೈಗೊಳ್ಳಲಿರುವ ಸಿಸಿ ರಸ್ತೆಯ ನಿರ್ಮಾಣಕ್ಕೆ ಚಾಲನೆ, ಅರವಿಂದ ನಾಯಕರವರ ಮನೆಯಿಂದ ಹೀರು ವೇಣು ರಾಠೋಡರ ಮನೆವರೆಗಿನ ಮಾರ್ಗಕ್ಕೆ ರೂ.20 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ, ದೇವಸ್ಥಾನದ ಸಮೀಪ ಪಿಆರ್ಇಡಿ ನಿಧಿಯಲ್ಲಿ ರೂ.11 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯೊಜನೆಗೆ ಚಾಲನೆ ಹಾಗೂ ರೂ. 5 ಲಕ್ಷ ವೆಚ್ಚದ ಹೈಮಾಸ್ಕ್ ದೀಪದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

“ದೇವಸ್ಥಾನದ ಜಗನು ಮಹಾರಾಜರು ಸೋಮದೇವರಹಟ್ಟಿ ತಾಂಡಾದಲ್ಲಿರುವ ದುರ್ಗಾದೇವಿ ದೇವಸ್ಥಾನವನ್ನು ಇಡೀ ದೇಶಕ್ಕೆ ಪರಿಚಯಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಏಕಾಂಗಿ ಸೈನಿಕ ಮತ್ತು ಸೇನಾಧಿಕಾರಿ(ಒನ್ ಮ್ಯಾನ್ ಆರ್ಮಿ) ರೀತಿಯಲ್ಲಿ ಶ್ರಮಿಸಿದ್ದಾರೆ. ದೇಶದ ನಾನಾ ಭಾಗಳಿಂದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಸಚಿವರು, ಶಾಸಕರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಆಹ್ವಾನಿಸಿ ದೇವಸ್ಥಾನದ ಮಹಿಮೆಯನ್ನು ಸಾರಿದ್ದಾರೆ. ರೂ. 75 ಲಕ್ಷ ವೆಚ್ಚದ ಅನುದಾನದಲ್ಲಿ ಸುಂದರವಾದ ಮಂಟಪವನ್ನು ಇಲ್ಲಿ ನಿರ್ಮಿಸಿದ್ದಾರೆ. ರಾಮರಾವ ಮಹಾರಾಜರ ಮಾದರಿಯಲ್ಲಿ‌ ಕ್ಷೇತ್ರವನ್ನು ಅಭಿವೃದ್ಶಿ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಈ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಯಾಗಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಡಾ. ಬಾಬುರಾಜೇಂದ್ರ ನಾಯಕ‌ ಮಾತನಾಡಿ, “ಸಚಿವ ಪಾಟೀಲರ ನೀರಾವರಿ ಮತ್ತಿತರ ಅಭಿವೃದ್ಧಿ ಕೆಲಸಗಳಿಂದ ತಾಂಡಾಗಳ ಜನ ಗುಳೆ ಹೋಗುವುದು ತಪ್ಪಿದೆ. ಜೋಳ ಬೆಳೆಯದ ಹೊಲದಲ್ಲಿ ದ್ರಾಕ್ಷಿ ಬೆಳೆಯುವಂತಾಗಿದೆ. ಜಿಲ್ಲೆಗೆ ಕೈಗಾರಿಕೆಗಳನ್ನು ತರುತ್ತಿದ್ದಾರೆ. ಸಿಎಸ್ಆರ್ ಅನುದಾನ ಬಳಸಿ ಶಾಲೆಗಳ ಅಭಿವೃದ್ಧಿ ಮಾಡುತ್ತಿದ್ದಾರೆ. ಸೋಮದೇವರಹಟ್ಟಿ‌ ತಾಂಡಾಕ್ಕೆ ದ್ವಿಪಥ ರಸ್ತೆ ಮಾಡಿಸುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ವಿರೋಧಿಸಿ ರಂಗೋಲಿ ಚಳವಳಿ

ಈ ಸಂದರ್ಭದಲ್ಲಿ ತಾಂಡಾದ ಮುಖಂಡರಾದ ಜಗನು ಮಹಾರಾಜ, ತಾಲೂಕು ಪಂಚಾಯಿತಿ ಇೊ ಬಸವಂತರಾಯಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಗುರು ಮಾಳಿ, ಸುರೇಶ ಪವಾರ, ಭೀಮು ರಾಥೋಡ, ಅರವಿಂದ್ ನಾಯಕ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...