ವಿಜಯಪುರ | ದುಶ್ಚಟಗಳಿಂದ ಕ್ಯಾನ್ಸರ್ ಬರಲು ಕಾರಣ: ಮಂಜುನಾಥ ಕೋಟಣ್ಣವರ

Date:

“ಮೊದಲು ಹೆಚ್ಚಾಗಿ ವೃದ್ಧಾಪ್ಯದಲ್ಲಿ ಕಂಡುಬರುತ್ತಿದ್ದ ನಾನಾಕ್ಯಾನ್ಸರ್ ಗಳು ಇಂದು ಯುವಕರಲ್ಲಿ ಕಾಣುತ್ತಿವೆ.  ಕಾರಣ ತಂಬಾಕು, ಗುಟ್ಕಾ ಹಾಗೂ ಶರಾಬು ಸೇವನೆಯಂಥ ದುಶ್ಚಟಗಳು ಇದಕ್ಕೆ ಕಾರಣವಾಗಿವೆ. ಜೊತೆಯಾಗಿ ಊಟ ಮಾಡುವುದರಿಂದ ಮತ್ತು ಕೈಕುಲುಕುವುದರಿಂದ ಈ ಕಾಯಿಲೆ ಹರಡುವುದಿಲ್ಲ” ಎಂದು ಬಿ.ಎಲ್.ಡಿ.ಇ ಡೀಮ್ಡ್ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದರು.

ವಿಜಯಪುರ ಪಟ್ಟಣದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ  ಮಹಾವಿದ್ಯಾಲಯದಲ್ಲಿ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆಯೋಜಿಸಿದ್ದ ಕ್ಯಾನ್ಸರ್ ಉಚಿತ ತಪಾಸಣೆ ಶಿಬಿರ ಮತ್ತು ಜಾಗೃತಿ ಅಭಿಯಾನ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

“ಶರೀರದ ಯಾವುದೇ ಭಾಗದಲ್ಲಿ ಶೀಘ್ರವಾಗಿ ಬೆಳೆಯುವ ನೋವಿಲ್ಲದ ಗಂಟುಗಳು, ನಿಯಂತ್ರಣವಿಲ್ಲದ ರಕ್ತಸ್ರಾವ, ಕಾರಣವಿಲ್ಲದೆ ಹಸಿವು ಮತ್ತು ಶರೀರದ ತೂಕ ಕಡಿಮೆಯಾಗುವುದು ಕ್ಯಾನ್ಸರ್ ರೋಗದ ಪ್ರಮುಖ ಲಕ್ಷಣಗಳಾಗಿರಬಹುದು. ಕ್ಯಾನ್ಸರ್ ರೋಗವನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ, ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಬಹುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿ.ಎಲ್.ಡಿ.ಇ. ಆಸ್ಪತ್ರೆಯಲ್ಲಿ ವಿವಿಧ ಕ್ಯಾನ್ಸರ್ ಸಂಬಂಧಿತ ರೋಗಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡಲು ತಜ್ಞ ವೈದ್ಯರ ಜೊತೆಗೆ ವಿಶ್ವ ದರ್ಜೆಯ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದೆ. ವಿಜಯಪುರ ಮತ್ತು ನೆರೆಯ ಜಿಲ್ಲೆಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ನಿರ್ಮಾಣ ಹಂತದಲ್ಲಿರುವ, ಪೂರ್ಣ ಪ್ರಮಾಣದ ಸುಸಜ್ಜಿತ ಬಿ.ಎಲ್.ಡಿ.ಇ. ಕ್ಯಾನ್ಸರ್ ಆಸ್ಪತ್ರೆ ಶೀಘ್ರದಲ್ಲಿ ತಲೆಎತ್ತಲಿದೆ” ಎಂದು ಅವರು ಹೇಳಿದರು. 

ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಮಾತನಾಡಿ, “ಕ್ಯಾನ್ಸರ್ ರೋಗವು ದುಶ್ಚಟಗಳಿಂದ ಅಷ್ಟೇ ಅಲ್ಲದೆ ಅನುವಂಶಿಕವಾಗಿ ಮತ್ತು ಕೆಲವು ವೈರಸ್ ಸೋಂಕುಗಲಿಂದಲೂ ಬರಬಹುದು.  ಇಂಥ ಸಂದರ್ಭಲ್ಲಿ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣೆಯಿಂದ ರೋಗಲಕ್ಷಣಗಳು ಕಾಣುವ ಪೂರ್ವದಲ್ಲಿಯೇ ರೋಗವನ್ನು ಕಂಡುಹಿಡಿದು ಗುಣಪಡಿಸಬಹುದಾಗಿದೆ” ಎಂದು ಹೇಳಿದರು.

ಭಾರತೀಯ ವೈದ್ಯಕೀಯ ಸಂಘ ವಿಜಯಪುರದ ಅಧ್ಯಕ್ಷ ಡಾ. ಗಿರೀಶ ಕುಲ್ಲೊಳ್ಳಿ ಮಾತನಾಡಿ, “ಕ್ಯಾನ್ಸರ್ ರೋಗವು ಮಾರಣಾಂತಿಕ ಕಾಯಿಲೆಯಾಗಿದ್ದು ಇದರ ಭಯ ಬೇಡ, ಎಚ್ಚರವಿರಲಿ” ಎಂದು ಹೇಳಿದರು.

ಈ ಸಪ್ತಾಹ ಶಿಬಿರದಲ್ಲಿ ಸುಮಾರು 350ಕ್ಕೂ ಹೆಚ್ಚು ರೋಗಿಗಳು ತಪಾಸಣೆ ಮಾಡಿಸಿಕೊಂಡರು. ಅಗತ್ಯವಿರುವ ರೋಗಿಗಳು ವಿಶೇಷ ತಪಾಸಣೆಗಳಾದ ಮೆಮೊಗ್ರಾಫಿ, ಸೂಜಿ ತಪಾಸಣೆ (FNAC), ಬಯಾಪ್ಸಿ, ಸ್ಕ್ಯಾನಿಂಗ್‌ಗಳಿಗೆ ಒಳಪಟ್ಟು ಸೂಕ್ತ ಚಿಕಿತ್ಸೆಯನ್ನು ಪಡೆದರು. ಪ್ರತಿದಿನ ತಜ್ಞ ವೈದ್ಯರು ರೋಗಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್ಐಆರ್ ಕುರಿತ ಕಾಂಗ್ರೆಸ್‌ ಮೌನ ಅಪಾಯಕಾರಿ: ಎಸ್‌ಡಿಪಿಐನ ಅಬ್ದುಲ್ ಹನ್ನಾನ್

ಕ್ಯಾನ್ಸರ್ ಜಾಗೃತಿ ಅಭಿಯಾನ ಸಪ್ತಾಹದ ಅಂಗವಾಗಿ ಕ್ಯಾನ್ಸರ್ ತಜ್ಞರಾದ ಡಾ. ಸಂಜೀವ ರಾಠೋಡ ಮತ್ತು ಡಾ. ರಾಜಶ್ರೀ ಯಲಿವಾಳ ಅವರು ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆಬ್ರವರಿ 4 ರಂದು ಕ್ಯಾನ್ಸರ್ ಜಾಗೃತಿ ಕುರಿತು ಉಪನ್ಯಾಸ ನೀಡಿದರು. ಮತ್ತೋರ್ವ ಕ್ಯಾನ್ಸರ್ ತಜ್ಞರಾದ ಡಾ.ಶೈಲೇಶ.ಕನ್ನೂರ ಅಂದೇ, ಬಿ.ಎಲ್.ಡಿ.ಇ. ಎಫ್.ಎಂ. ರೇಡಿಯೋ ಬಾನುಲಿಯಲ್ಲಿ ಕ್ಯಾನ್ಸರ್ ಜಾಗೃತಿಯ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ. ಎಂ. ಬಿ. ಪಾಟೀಲ, ಡಾ. ವಿಕ್ರಂ ಸಿಂದಗಿಕರ, ಡಾ. ದಯಾನಂದ ಬಿರಾದಾರ, ಡಾ. ನಾಗರಾಜ ಬಿರಾದಾರ, ಡಾ. ಭುವನೇಶ್ವರಿ, ಡಾ. ಪ್ರೀತಿ ಮಾಲಪುರೆ, ಐಎಂಎ ಕಾರ್ಯದರ್ಶಿ ಡಾ. ವಿಜಯ ಪಾಟೀಲ ಮತ್ತು ಕಿರಿಯ ವೈದ್ಯರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...