ವಿಜಯಪುರ | ಕಾಂತರಾಜ ಜಾತಿಗಣತಿ ವರದಿ ಬಿಡುಗಡೆಗೆ ಅಹಿಂದ ಮುಖಂಡರ ಆಗ್ರಹ

Date:

ಕಾಂತರಾಜ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಅಹಿಂದ ಮುಖಂಡರು ವಿಜಯಪುರ ನಗರದ ಸಾರಿಪುತ್ರ ಬೌದ್ಧ ವಿಹಾರದಲ್ಲಿ ಸಭೆ ಸೇರಿ ಚರ್ಚಿಸಿದರು.

ಸಭೆಯಲ್ಲಿ ಕಾಂತರಾಜ ಅವರ ಜಾತಿಗಣತಿ ವರದಿಯ ಮಹತ್ವ ಮತ್ತು ಅದರ ಅವಶ್ಯಕತೆ ಬಗ್ಗೆ ಚರ್ಚೆ ಮಾಡಿದ ಮುಖಂಡರು, “ಜಾತಿ ಜನಗಣತಿ ಬಹಿರಂಗ ಮಾಡದಂತೆ ಸಿದ್ದರಾಮಯ್ಯ ಮತ್ತು ಸರ್ಕಾರದ ಮೇಲೆ ಕೆಲವರು ಒತ್ತಡ ಹೇರುತ್ತಿದ್ದಾರೆ. ವರದಿ ಬಹಿರಂಗ ಮಾಡುವುದನ್ನು ತಡೆಯುವ ಷಡ್ಯಂತ್ರ ಮಾಡುತ್ತಿರುವ ಶಕ್ತಿಗಳನ್ನು ತಡೆಯಬೇಕಾದರೆ ಅಹಿಂದ ವರ್ಗದ ಶೇ.80ರಷ್ಟು ಜನ ಒಂದಾಗಬೇಕು ಮತ್ತು ಅವರನ್ನು ಜಾಗೃತಿ ಮಾಡಬೇಕು” ಎಂದರು.

ಅಹಿಂದ ಮುಖಂಡರು

ಮಲ್ಲಿಕಾರ್ಜುನ ಬಟಗಿ ಮಾತನಾಡಿ, “ಅಹಿಂದ ವರ್ಗದ ಮೇಲೆ ನಿಜವಾದ ಕಾಳಜಿ ಇದ್ದರೆ ಸಿದ್ದರಾಮಯ್ಯನವರು ಕೂಡಲೇ ಮೀಸಲಾತಿ ಜಾರಿಗೆ ತಂದು ಸರ್ಕಾರದ ಶಾಲೆಯಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲು ತರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂತರಾಜ ಜಾತಿಗಣತಿ ವರದಿ ಬಿಡುಗಡೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಮುಖಂಡರು ಸಂಚರಿಸಿ ಜನರನ್ನು ಜಾಗೃತಿ ಮಾಡಿ ದೂಡ್ಡ ಹೋರಾಟ ಮಾಡವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಗೃಹಸಚಿವ ಪರಮೇಶ್ವರ್ ಸ್ವಕ್ಷೇತ್ರದಲ್ಲೇ ಅಮಾನವೀಯ ಘಟನೆ; ಮಲ ಹೊರುವ ಪದ್ದತಿ ಇನ್ನೂ ಜೀವಂತ

ಸಭೆಯಲ್ಲಿ ರಾಜಶೇಖರ ಯಡಹಳ್ಳಿ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ಮಹಾದೇವ ಬನಸೂಡೆ, ಮಂಜುಳಾ ಪೂಜಾರಿ, ಬಸವರಾಜ ಸೂಳೆಬಾವಿ, ಬಿ ಎಸ್ ಗಸ್ತಿ, ದೇವಾನಂದ ಲಚ್ಯಾಣ, ದಸ್ತಗಿರಿ ಮುಲ್ಲಾ ಸೇರಿದಂತೆ ಬಹುತೇಕ ಅಹಿಂದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...