ವಿಜಯಪುರ | ಡಿ.15ರಿಂದ 17ರವರೆಗೆ ಒಡಿಶಾದಲ್ಲಿ ಎಐಯುಟಿಯುಸಿ 22ನೇ ಅಖಿಲ ಭಾರತ ಸಮ್ಮೇಳನ

Date:

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ತನ್ನ 22ನೇ ಅಖಿಲ ಭಾರತ ಸಮ್ಮೇಳನವನ್ನು ಇದೇ ಡಿಸೆಂಬರ್ 15 ರಿಂದ 17ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ಹಮ್ಮಿಕೊಂಡಿದೆ.

ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ ಸ್ಕೀಮ್ ಕಾರ್ಯಕರ್ತೆಯರು ಸೇರಿದಂತೆ ಸಂಘಟಿತ ಹಾಗೂ ಅಸಂಘಟಿತ ವಲಯಗಳ ಸಾವಿರಾರು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಅಮೆರಿಕ ಮತ್ತಿತರ ಸಾಮ್ರಾಜ್ಯಶಾಹಿ ದೇಶಗಳ ಕುಮ್ಮಕ್ಕಿನಿಂದ ಇಸ್ರೇಲ್, ಉಕ್ರೇನ್, ಲೆಬನಾನ್ ಇತ್ಯಾದಿ ದೇಶಗಳ ಮೇಲೆ ಅಮಾನುಷ ಯುದ್ಧ ಜರುಗುತ್ತಿರುವ ಸಂದರ್ಭದಲ್ಲಿ ಹಾಗೂ ಜಾಗತಿಕವಾಗಿ ಮಾರುಕಟ್ಟೆ ಹಂಚಿಕೆಗಾಗಿ ಸಾಮ್ರಾಜ್ಯಶಾಹಿ ದೇಶಗಳ ನಡುವೆ ತಿಕ್ಕಾಟ ಪೈಪೋಟಿ ತೀವ್ರವಾಗುತ್ತಿರುವಾಗ, ದೇಶದಲ್ಲಿ ದುಡಿಯುವ ಜನರ ಜೀವನ ಹಾಗೂ ಜೀವನೋಪಾಯಗಳ ಮೇಲೆ ಆಳುವ ಬಂಡವಾಳಶಾಹಿ ವರ್ಗ ಮತ್ತದರ ಸರ್ಕಾರಗಳಾದ ಕೇಂದ್ರದ ಬಿಜೆಪಿ ಹಾಗೂ ವಿವಿಧ ರಾಜ್ಯ ಸರ್ಕಾರಗಳು ತೀವ್ರ ದಾಳಿಗಳನ್ನು ಎಸಗುತ್ತಿರುವ ಸಂದರ್ಭದಲ್ಲಿ ಈ ಅಖಿಲ ಭಾರತ ಸಮ್ಮೇಳನ ಜರುಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ai 2

ಈ ಸಮ್ಮೇಳನದಲ್ಲಿ ಜಗತ್ತಿನ ಹಾಗೂ ವಿಶೇಷವಾಗಿ ದೇಶದ ಸಮಸ್ತ ದುಡಿಯುವ ಜನರ ಶೋಚನೀಯ ಪರಿಸ್ಥಿತಿಯ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಬಲಿಷ್ಟ ಕಾರ್ಮಿಕ ಚಳುವಳಿಯನ್ನು ಕಟ್ಟಲು ನಿರ್ದಿಷ್ಟ ಸಂಘಟನಾತ್ಮಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಎಐಯುಟಿಯುಸಿ 22 ನೇ ಅಖಿಲ ಭಾರತ ಸಮ್ಮೇಳನದ ಅಂಗವಾಗಿ ಡಿಸೆಂಬರ್ 15 ರಂದು ಬೆಳಿಗ್ಗೆ ಒರಿಸ್ಸಾದ ರಾಜಧಾನಿ ಭುವನೇಶ್ವರದಲ್ಲಿ ಪಿಎಂಜಿ ಸ್ಕೆಟರ್ ಹತ್ತಿರ ಬಹಿರಂಗ ಅಧಿವೇಶನವು ಜರುಗಲಿದೆ, ಇದರ ಅಧ್ಯಕ್ಷತೆಯನ್ನು ಎಐಯುಟಿಯುಸಿ ಅಖಿಲ ಭಾರತ ಅಧ್ಯಕ್ಷರಾದ ಕೆ ರಾಧಾಕೃಷ್ಣ ಅವರು ವಹಿಸಲಿದ್ದಾರೆ. ಇತರ ರಾಷ್ಟಿಯ ನಾಯಕರಾದ ಸತ್ಯವಾನ್, ಸ್ವಪನ್ ಘೋಷ್, ಅರುಣ್ ಕುಮಾರ್ ಸಿಂಗ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶಂಕರ್ ದಾಸ್ ಗುಪ್ತ ಅವರು ಭಾಷಣಕಾರರಾಗಿ ಮಾತನಾಡಲಿದ್ದಾರೆ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾ ಮುಖಂಡ ಮಲ್ಲಿಕಾರ್ಜುನ ಎಚ್. ಟಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...