ವಿಜಯಪುರ | ಎರಡು ಲಕ್ಷ ಮತಗಳ ಅಂತರದಿಂದ ಆಲಗೂರ್ ದಿಗ್ವಿಜಯ: ಮಲ್ಲಿಕಾರ್ಜುನ್ ಲೋಣಿ

Date:

ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.

ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನ ವಹಿಸಿದ್ದ ಅವರು ಮಾತನಾಡಿ, ಪಕ್ಷದ ಮುಖಂಡರು, ಕಾರ್ಯಕರ್ತರು  ಈ ಲೋಕಸಭೆ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದಾರೆ. ತಮ್ಮ ಮೇಲೆ ವಿಶ್ವಾಸವಿಟ್ಟು, ಪಕ್ಷ ಈ ಮಹತ್ತರ ಜವಾಬ್ದಾರಿ ನೀಡಿದೆ. ಇದಕ್ಕೆ ಬದ್ಧವಾಗಿ ಶ್ರಮವಹಿಸಿ ಸಂಘಟನೆಯಲ್ಲಿ ತೊಡಗುವೆ. ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನಡೆಸಿ, ಜನಾನುರಾಗಿಯಾಗಿದೆ. ಇದನ್ನು ಜನರಿಗೆ ನಮ್ಮ ಕಾರ್ಯಕರ್ತರು ತಿಳಿಸಬೇಕು ಎಂದರು.

ನಮ್ಮ ಪಕ್ಷದ ಲೋಕಸಭೆ ಅಭ್ಯರ್ಥಿ ಆಲಗೂರರು ಪ್ರಬುದ್ಧರಾಗಿದ್ದಾರೆ. ಇಷ್ಟು ದಿನ ಅವಿರತ ಶ್ರಮದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಅವರಂತೆ ತಾವು ಕೂಡ ಪಕ್ಷದ ಏಳ್ಗೆಗೆ ಶ್ರಮಿಸುವೆ ಎಂದು ಹೇಳಿದ ಲೋಣಿ, ಆಲಗೂರರ ಗೆಲುವು ನೂರಕ್ಕೆ ನೂರು ನಿಶ್ಚಿತವಾಗಿದೆ. ನಾವೆಲ್ಲ ಕಷ್ಟಪಟ್ಟರೆ ಎರಡು ಲಕ್ಷ ಮತಗಳಿಂದ ಅವರನ್ನು ಗೆಲ್ಲಿಸಬಹುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭ್ಯರ್ಥಿಯಾದ ರಾಜು ಆಲಗೂರ ಮಾತನಾಡಿ, ಲೋಣಿಯವರ ನೇಮಕದಿಂದ ಪಕ್ಷ ಸಂಘಟನೆಗೆ ಇನ್ನಷ್ಟು ಶಕ್ತಿ ಬರಲಿದೆ. ಈ ಚುನಾವಣೆಯನ್ನು ಎಲ್ಲರೂ ಒಟ್ಟಾಗಿ ಎದುರಿಸಬೇಕು. ಬಿಜೆಪಿಯ ಸುಳ್ಳುಗಳನ್ನು ಜನರಿಗೆ ಮನದಟ್ಟು ಮಾಡಿಸಬೇಕು ಎಂದರು.

ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ಜನಸಾಮಾನ್ಯರ ಮನ ಮುಟ್ಟಿದೆ, ಅವರ ಹೃದಯ ಗೆದ್ದಿದೆ. ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಪಕ್ಷ ಕೇಂದ್ರದಲ್ಲೂ ಅಧಿಕಾರ ಹಿಡಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಬೇವು-ಬೆಲ್ಲ ನೀಡಿ ಅಧಿಕಾರ ಹಸ್ತಾಂತರ

ಹೊಸ ಶಕ್ತಿ ಬಂದಿದೆ, ಲಕ್ಷ ಮತಗಳ ಅಂತರದಿಂದ ಗೆಲ್ಲುವೆ. ಇಷ್ಟು ದಿನಗಳ ಸಹಕಾರಕ್ಕೆ ಧನ್ಯವಾದ, ಎಂದು ಹೇಳುತ್ತ ರಾಜು ಆಲಗೂರ್ ಅವರು ಯುಗಾದಿಯ ಬೇವು-ಬೆಲ್ಲವನ್ನು ನೀಡಿ ಮಲ್ಲಿಕರ‍್ಜುನ ಲೋಣಿಯವರಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹಸ್ತಾಂತರಿಸಿದ್ದು ವಿಶೇಷವಾಗಿತ್ತು.

ಆಲಗೂರರು ಹೇಳಿರುವುದಕ್ಕಿಂತ ಹೆಚ್ಚಿನ ಅಂತರದಿಂದ ಪಕ್ಷ ಗೆಲ್ಲುವ ವಿಶ್ವಾಸವಿದೆ. ಎಲ್ಲರೊಡಗೂಡಿ ಸಂಘಟನೆ, ಚುನಾವಣೆ ಎದುರಿಸಲು ಪಣ ತೊಟ್ಟಿರುವೆವು. ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಮಲ್ಲಿಕಾರ್ಜುನ್‌ ಲೋಣಿ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ವಿಠ್ಠಲ ಕಟಕದೊಂಡ, ಕಾಂಗ್ರೆಸ್ ಮುಖಂಡರಾದ ಎಂ.ಆರ್. ಪಾಟೀಲ, ಹಮೀದ್ ಮುಶ್ರೀಫ್, ಗಂಗಾಧರ ಸಂಬಣ್ಣಿ, ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಷ ಕಾಲೇಬಾಗ, ಚಂದ್ರಕಾಂತ ಶೆಟ್ಟಿ, ಮಹ್ಮದರಫೀಕ ಟಪಾಲ, ಆಜಾದ ಪಟೇಲ, ಮಹಾದೇವಿ ಗೋಕಾಕ, ಎಸ್.ಎಂ. ಪಾಟೀಲ ಗಣಿಹಾರ, ಸೋಮನಾಥ ಕಳ್ಳಿಮನಿ, ಬಿಡಿಎ ಅಧ್ಯಕ್ಷ ಕನ್ನಾನ ಮುಶ್ರೀಫ್, ಉಪಮೇಯರ್ ದಿನೇಶ ಹಳ್ಳಿ, ಸ್ನೇಹಾ ಕಟ್ಟಿ, ವಿದ್ಯಾವತಿ ಅಂಕಲಗಿ, ಶಬ್ಬೀರ ಜಾಗಿರದಾರ, ಸಾಹೇಬಗೌಡ ಬಿರಾದಾರ, ಸುರೇಶ ಗೊಣಸಗಿ, ವಿಜಯಕುಮಾರ ಘಾಟಗೆ, ಐ.ಎಂ. ಇಂಡಿಕರ, ವಸಂತ ಹೊನಮೊಡೆ, ಜಾಕಿರ ಮುಲ್ಲಾ, ಹಾಜಿಲಾಲ ದಳವಾಯಿ, ಚನಬಸಪ್ಪ ನಂದರಗಿ, ಅಷ್ಫಾಕ ಮನಗೂಳಿ, ಅಮಿತ ಚವ್ಹಾಣ, ರಮೇಶ ಗುಬ್ಬೇವಾಡ, ನಿಂಗಪ್ಪ ಸಂಗಾಪೂರ, ರಾಜೇಶ್ವರಿ ಚೋಳಕೆ, ಬಾಪುಗೌಡ ಪಾಟೀಲ, ಶಂಕರಸಿಂಗ್ ಹಜೇರಿ, ಸುಭಾಷ ಗುಡಿಮನಿ, ಆನಂದ ಜಾಧವ, ಮಹ್ಮದಹನೀಫ್ ಮಕಾನದಾರ, ಬ್ಲಾಕ್ ಅಧ್ಯಕ್ಷರುಗಳಾದ ಆರತಿ ಶಹಾಪೂರ, ಗುರು ತಾರನಾಳ, ಜಾವಿದ ಮೊಮಿನ, ಸಂತೋಷ ಬಾಲಗಾಂವಿ, ಶ್ರೀದೇವಿ ಉತ್ಸಲಾರ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...