ವಿಜಯಪುರ | ಬಿಸಿಯೂಟ ಯೋಜನೆಯ ನಿಧಿ ಹಂಚಿಕೆ; ಪುಡಿಗಾಸಿನ ಏರಿಕೆಗೆ ಎಐಯುಟಿಯುಸಿ ಖಂಡನೆ

Date:

ಬೆಲೆ ಏರಿಕೆಯ ಪರಿಣಾಮವಾಗಿ ಮಕ್ಕಳ ಅಪೌಷ್ಠಿಕತೆಯು ಹೆಚ್ಚುತ್ತಿರುವ ಪರಿಸ್ಥಿತಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಧಿ ಹಂಚಿಕೆಯಲ್ಲಿ ಪುಡಿಗಾಸಿನ ಏರಿಕೆಯನ್ನು ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

ವಿಶ್ವದ ಮೂರನೇ ಒಂದು ಭಾಗದಷ್ಟು ಅಪೌಷ್ಠಿಕ ಮಕ್ಕಳು ಭಾರತದಲ್ಲಿ ವಾಸಿಸುತ್ತಾರೆ. ಹಸಿವಿನ ಸೂಚ್ಯಂಕದಲ್ಲಿ 127 ದೇಶಗಳ ಪೈಕಿ ಭಾರತ 105ನೇ ಸ್ಥಾನ ಪಡೆದಿದೆ. ಶೇ.31.7ರಷ್ಟು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಕುಂಠಿತ ಬೆಳವಣಿಗೆಯಿಂದ ಬಳಲುತ್ತಿದ್ದಾರೆ ಹಾಗೂ 50,000ಕ್ಕೂ ಅಧಿಕ ಮಕ್ಕಳು ತೀವ್ರ ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಪೌಷ್ಠಿಕತೆಯಿಂದ ಬಳಲುವ 11 ಲಕ್ಷಕ್ಕೂ ಅಧಿಕ ಮಕ್ಕಳು ಯಾವುದೇ ಆರೋಗ್ಯ ಕೇಂದ್ರಗಳಲ್ಲಿ ದಾಖಲಾಗದೆ ಬದುಕು ಸವೆಸುತ್ತಿವೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಉದಾರವಾಗಿ ತೆರಿಗೆ ಮನ್ನಾ ನೀಡುತ್ತಿರುವಾಗ, ಸಾವಿರಾರು ಕೋಟಿ ಬ್ಯಾಂಕ್ ಸಾಲ ಸುಸ್ತಿದಾರರಿಗೆ ಮಾಫಿ ಮಾಡುತ್ತಿರುವಾಗ, ಏಕಸ್ವಾಮ್ಯ ಸಂಸ್ಥೆಗಳು ಮತ್ತು ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುತ್ತಿರುವಾಗ ಶಾಲಾ ವಿದ್ಯಾರ್ಥಿಗಳ ಬಿಸಿಯೂಟ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೆ ಹೆಚ್ಚಿಸಿರುವ ಅನುದಾನ ತೀರ ಕಡಿಮೆಯಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ(1ರಿಂದ 5ನೇ ತರಗತಿ) 74 ಪೈಸೆ ಹೆಚ್ಚಳವಾದರೆ, ಮಾಧ್ಯಮಿಕ ವಿದ್ಯಾರ್ಥಿಗಳಿಗೆ ₹1.12 ಹೆಚ್ಚಳವಾಗಿದೆ. ಅಂದರೆ, ಒಟ್ಟು ಪ್ರಾಥಮಿಕ ವಿದ್ಯಾರ್ಥಿಗಳಿಗೆ ₹6.19 ಮತ್ತು ಮಾಧ್ಯಮಿಕ ವಿದ್ಯಾರ್ಥಿಗಳಿಗೆ ₹9.29 ವಿನಿಯೋಗವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವದ ‘ಶಕ್ತಿ ಸಂಭ್ರಮ’

ಬಡತನದಿಂದ ಬಳಲುತ್ತಿರುವ ಶಾಲಾ ಮಕ್ಕಳಿಗೆ ಕನಿಷ್ಟ ಪೌಷ್ಠಿಕಾಂಶ ಒದಗಿಸುವುದಕ್ಕಾಗಿ ಸಮರ್ಪಕ ನಿಧಿಯನ್ನು ನೀಡಬೇಕು ಹಾಗೂ ಪೌಷ್ಠಿಕಾಂಶವುಳ್ಳ ಆಹಾರ ತಯಾರಿಸುವ ಬಿಸಿಯೂಟ ಸಿಬ್ಬಂದಿಗಳ ಕೆಲಸ ಖಾಯಂ ಸ್ವರೂಪದ್ದಾಗಿರುವುದರಿಂದ ಅವರ ಕೆಲಸವನ್ನು ಖಾಯಂಗೊಳಿಸಬೇಕು ಎಂದು ಎಐಯುಟಿಯುಸಿ ಪರವಾಗಿ ಶಶಿಕಲಾ ಮ್ಯಾಗೇರಿ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...