ವಿಜಯಪುರ | ಹಿರಿತನದ ಆಧಾರದ ಮೇಲೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಿ: ಶಾಸಕ ನಾಡಗೌಡ ಮನವಿ

Date:

ಸುದೀರ್ಘ 45 ವರ್ಷಗಳ ರಾಜಕೀಯ ಅನುಭವ ಹಾಗೂ ಹಿರಿತನದ ಆಧಾರದ ಮೇಲೆ ಸೂಕ್ತವಾದ ಸ್ಥಾನ ಮಾನ ನೀಡಿ ಗೌರವಿಸಬೇಕು ಎಂದು ಶಾಸಕ, ಕರ್ನಾಟಕ ಮಾರ್ಜಕ ಮತ್ತು ಸಾಬೂನು ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ ಮನವಿ ಮಾಡಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣಾ ಪ್ರಚಾರದಲ್ಲಿ ನಮ್ಮ ಮತಕ್ಷೇತ್ರದ ಜನರಿಗೆ ಕಾಂಗ್ರೆಸ್ ವರಿಷ್ಠರು ಹಾಗೂ ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಿದ್ದರು. ಪ್ರಾರಂಭದಲ್ಲೂ ಅವಕಾಶ ಕೊಡಲಿಲ್ಲ. ಸದ್ಯ ಈ ಎರಡನೇ ಅವಧಿಯ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಬೇಕೆಂದು ಮತಕ್ಷೇತ್ರದ ಜನರ ಒತ್ತಾಯದ ಕೂಗೂ ಕೇಳಿ ಬರುತ್ತಿದೆ. ಇಲ್ಲದಿದ್ದರೆ ಪಕ್ಷದ ಮೇಲೆ ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ವಿಶ್ವಾಸ ಕಳೆದುಕೊಳ್ಳುತ್ತಾರೆ. ಆಗ ಪಕ್ಷವು ಮುಜುಗರಕ್ಕೀಡಾಗಬೇಕಾಗುತ್ತದೆ” ಎಂದು ತಿಳಿಸಿದರು.

“ನಮ್ಮ ಮತ ಕ್ಷೇತ್ರದಲ್ಲಿ ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಪೂರಕ ಕಾಮಗಾರಿಗಳು ಬಾಕಿ ಉಳಿದಿದ್ದು, ನಮ್ಮ ಸರ್ಕಾರ ಬಂದರೆ ಈಡೇರಿಸುವುದಾಗಿ ಜನರಲ್ಲಿ ಭರವಸೆ ನೀಡಿದ್ದೇವೆ. ಸದ್ಯ ಅದು ಸಾಧ್ಯವಾಗುತ್ತಿಲ್ಲ. ಒಂದು ಮತಕ್ಷೇತ್ರ ಅಭಿವೃದ್ದಿ ಆಗಬೇಕೆಂದರೆ ಮಂತ್ರಿಯಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಚಿವ ಸ್ಥಾನದ
ಆಕಾಂಕ್ಷಿಯಾಗಿದ್ದೇನೆ. ಜಾತಿ ಸಮೀಕ್ಷೆ ಆಧಾರದ ಮೇಲೆ ಲಿಂಗಾಯತ ರೆಡ್ಡಿ ಹಾಗೂ ಲಿಂಗಾಯತ ಕೋಟಾದಡಿಯಲ್ಲಿ ನನ್ನನ್ನು ಮಂತ್ರಿ ಮಾಡಬೇಕೆಂದು ಒತ್ತಾಯಿಸುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಕರ್ನಾಟಕ ರಾಜ್ಯೋತ್ಸವ: ಸಚಿವ ಎಂ ಬಿ ಪಾಟೀಲರಿಂದ ಧ್ವಜಾರೋಹಣ

ಕೈಯಾಗ ಕಂಕಣ ಕಟ್ಟಿಕೊಂಡ ಮೇಲೆ ಏತಕ್ಕಾಗಿ ಕಟ್ಟಿಕೊಂಡಿದ್ದಾರೆ ಅಂತ ಎಲ್ಲರಿಗೂ ಗೊತ್ತಾಗುತ್ತದೆ. ಈಗಾಗಲೇ ನಾವು ಕೈಯಾಗ ಕಂಕಣ ಕಟ್ಟಿಕೊಂಡಿದ್ದೇವೆ. ಯಾರಿಗಾದರೂ ಉನ್ನತ ಮಟ್ಟದ ಭವಿಷ್ಯ ಬೇಕೆನ್ನುವುದು ಮನಸ್ಸಿನಲ್ಲಿರುತ್ತದೆ. ನಾನು ಲಿಂಗಾಯತರಲ್ಲಿರುವಂತಹ ಒಳಪಂಗಡದ ಕೋಟಾದಲ್ಲಿ ಕೇಳುತ್ತೇನೆ. ವಿಜಯಪುರ ಜಿಲ್ಲೆಯಲ್ಲಿಯೇ ಅತ್ಯಂತ ಹಿರಿಯ ಶಾಸಕನಾಗಿದ್ದು, ಈ ಬಾರಿ ನನಗೊಂದು ಅವಕಾಶ ಕೊಡಬೇಕೆಂದು ಕೇಳುತ್ತೇನೆ, ನಾಳೆಯೂ ಕೇಳುತ್ತೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...