ವಿಜಯಪುರ | ಪರಿಸರ ಕಾಳಜಿಯ ಜತೆಗೆ ಸುಸ್ಥಿರ ಅಭಿವೃದ್ಧಿಯೂ ಸಮಾಜಕ್ಕೆ ಮುಖ್ಯ: ಡಾ ಬಾಬು ಸಜ್ಜನ

Date:

ಪರಿಸರ ಕಾಳಜಿಯ ಜತೆಗೆ ಸುಸ್ಥಿರ ಅಭಿವೃದ್ಧಿಯೂ ಸಮಾಜಕ್ಕೆ ಮುಖ್ಯ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಬೇಕು ಎಂದು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಿಇಒ ಡಾ ಬಾಬು ಸಜ್ಜನ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಸಸ್ಯಶಾಸ್ತ್ರ ಅಧ್ಯಯನ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಕೋಶ ಹಾಗೂ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಮಹಿಳಾ ವಸ್ತು ಸಂಗ್ರಹಾಲಯ ಇವರುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಅವರು ಮಾತನಾಡಿ, “ಸಾಮಾಜಿಕವಾಗಿ ಮುಖ್ಯ ವಾಹಿನಿಗೆ ಹೊಸ ಹೊಸ ಕಾರ್ಯಾಚರಣೆ ಮೂಲಕ ಪರಿಸರವನ್ನು ಬೆಳೆಸುವ ಸಿದ್ಧಾಂತದ ಪ್ರಯೋಗ ಕಡ್ಡಾಯವಾಗಿ ಆಗಬೇಕು. ಪರಿಸರದ ಬಗ್ಗೆ ಇರುವ ಕಾಳಜಿ, ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವವಿದ್ಯಾಲಯಗಳ ಅಧ್ಯಾಪಕರು ಮತ್ತು ಸಿಬ್ಬಂದಿ ಪ್ರಾಯೋಗಿಕ ಅಧ್ಯಯನಶೀಲರಾಗಬೇಕು. ಸಮುದಾಯದ ಜತೆಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ವಿಶ್ವವಿದ್ಯಾಲಯದ ಆವರಣ ಹಸಿರು ಅವರಣವಾಗಲು ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ಸಮಾಜ ವಿಜ್ಞಾನ ವಿಷಯದ ಡೀನ್‌ ಹಾಗೂ ರಾಷ್ಟೀಯ ಸೇವಾ ಯೋಜನೆ ಕೋಶದ ಸಂಯೋಜನಾಧಿಕಾರಿ ಪ್ರೊ.ಶಾಂತಾದೇವಿ ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಿಇಒ ಡಾ ಬಾಬು ಸಜ್ಜನ ಅವರು ತಮ್ಮ ಸಂಸ್ಥೆಯ ಪರವಾಗಿ ವಿಶ್ವವಿದ್ಯಾಲಯಕ್ಕೆ ಹಲವು ಬಗೆಯ 90 ಸಸಿಗಳನ್ನು ನೀಡಿದರು.

ಈ ಸುದ್ದಿ ಓದಿದ್ದೀರಾ? ‌ಧಾರವಾಡ | ಧೈರ್ಯದಿಂದ ದೃಢಸಂಕಲ್ಪ ಮಾಡಿದಾಗ ಉತ್ತಮ ಸಾಧನೆ ಸಾಧ್ಯ: ಇಸ್ಮಾಯಿಲ್ ತಮಟಗಾರ್

ಪ್ರೊ ಲಕ್ಷ್ಮಿದೇವಿ ವೈ, ಡಾ.ನಟರಾಜ ದುರ್ಗಣ್ಣವರ, ಡಾ.ಶಶಿಕಲಾ ರಾಠೋಡ, ಪ್ರೊ. ನಾಮದೇವಗೌಡ, ಪ್ರೊ.ಗವಿಸಿದ್ದಪ್ಪ ಆನಂದಹಳ್ಳಿ, ಪ್ರೊ. ಆರ್ ಎ ಗಂಗಶೆಟ್ಟಿ, ಪ್ರೊ.ಸಕ್ಸಾಲ್ ಹೂವಣ್ಣ, ಡಾ.ರಮೇಶ ಸೋನಕಾಂಬಳೆ ಡಾ.ಕೆ ಪಿ ಸುರೇಶ, ಡಾ.ಕಲಾವತಿ ಕಾಂಬಳೆ ಹಾಗೂ ಅತಿಥಿ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...