ವಿಜಯಪುರ | ಮನುಸ್ಮೃತಿ, ಆರೆಸ್ಸೆಸ್ ಕುರಿತು‌ ಅಂಬೇಡ್ಕರ್ ಕಠಿಣವಾಗಿ ಟೀಕಿಸಿದ್ದರು: ಮಾಜಿ ಶಾಸಕ ರಾಜು ಆಲಗೂರ

Date:

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕ‌ರ್ ಅವರು ಕಾಂಗ್ರೆಸ್‌ಗಿಂತಲೂ ಹೆಚ್ಚಾಗಿ ಮನುಸ್ಮೃತಿ ಮತ್ತು ಆರೆಸ್ಸೆಸ್‌ ಕುರಿತು ಕಠಿಣವಾಗಿ ಟೀಕೆ ಮಾಡುತ್ತಿದ್ದರೆಂಬ ಸತ್ಯವನ್ನು ಈಗಿನ ಬಿಜೆಪಿ ನಾಯಕರು ತಿಳಿದುಕೊಳ್ಳಬೇಕು. ಅಂಬೇಡ್ಕರ್ ಕಾಂಗ್ರೆಸ್ ಬಗ್ಗೆ ಟೀಕಿಸುತ್ತಿದ್ದರೆಂಬುದೂ ನಿಜ. ಆದರೆ, ಅಂಬೇಡ್ಕರ್ ವಿಷಯದಲ್ಲಿ ಕಾಂಗ್ರೆಸ್‌ ಯಾವತ್ತೂ ಅಪಮಾನ ಮಾಡಿಲ್ಲ.‌ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಸುಳ್ಳು ಪ್ರಚಾರ ಮಾಡುವುದು ಸರಿಯಲ್ಲ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.

ವಿಜಯಪುರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ಕುರಿತು ಇತ್ತೀಚೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ನೀಡಿದ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಬೇಕಿದೆ. ಪಕ್ಷಾತೀತವಾಗಿ ಎಲ್ಲ ದಲಿತ ಸಂಸದರೂ ಅಮಿತ್ ಶಾ ರಾಜೀನಾಮೆಗೆ ಒತ್ತಾಯ ಮಾಡಬೇಕು. ಅಮಿತ್ ಶಾ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುವುದು ಖಂಡನೀಯ. ಸಂಸದ ರಮೇಶ ಜಿಗಜಿಣಗಿ, ಅಮಿತ್ ಶಾ ಪರವಾಗಿ ನಿಂತಿರುವುದು ಸಲ್ಲದು” ಎಂದರು.

“ಇಷ್ಟೇ ಅಲ್ಲ, ಅಮಿತ್ ಶಾ ವಿಚಾರದಲ್ಲಿ ತಮ್ಮ ರಾಜೀನಾಮೆ ಬಗ್ಗೆ ಕೇಳಿದರೆ ರಮೇಶ ಜಿಗಜಿಣಗಿ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡಿದ್ದು ಸರಿಯಲ್ಲ. ಇದು ಅವರ ದುರಹಂಕಾರವನ್ನು ತೋರಿಸುತ್ತದೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ಸುಳ್ಳುಗಳನ್ನು ಹೇಳಲಾಗುತ್ತಿದೆ. ಅಂಬೇಡ್ಕರ್ ಕುರಿತ ಘಟನಾವಳಿಗಳು ನಡೆದಾಗ ಜನಸಂಘದ ಮೂಲಕ ಆಗ ಬಿಜೆಪಿಯೂ ಅಸ್ತಿತ್ವ ಹೊಂದಿತ್ತು. ಅಂಬೇಡ್ಕರ್ ಅವರಿಗೆ ಜನಸಂಘದವರು ಯಾವತ್ತಾದರೂ ಬೆಂಬಲ ಕೊಟ್ಟಿದ್ದರಾ?, ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಯಾಕೆ ಗೆಲ್ಲಿಸುವ ಪ್ರಯತ್ನ ಮಾಡಲಿಲ್ಲ?. ಭಾರತ ರತ್ನ ವಿಚಾರದಲ್ಲೂ ಬಿಜೆಪಿ ಸುಳ್ಳು ಹರಡುತ್ತಿದೆ. ಆಗಿನ ಪ್ರಧಾನಿ ವಿ ಪಿ ಸಿಂಗ್ ನೇತೃತ್ವದಲ್ಲಿ ಸರ್ಕಾರದಲ್ಲಿ ಬಿಜೆಪಿ ಸರ್ಕಾರದ ಕೇವಲ ಒಂದು ಭಾಗವಾಗಿತ್ತು ಅಷ್ಟೇ. ಭಾರತ ರತ್ನಕ್ಕೆ ರಾಮ್‌ವಿಲಾಸ್ ಪಾಸ್ವಾನ್ ಒತ್ತಡ ಹೇರಿದ್ದರು. ಇದರಲ್ಲಿ ಬಿಜೆಪಿಯ ಯಾವ ಪಾತ್ರವಿರಲಿಲ್ಲ. ಅಲ್ಲದೇ, ಅಂಬೇಡ್ಕರ್ ಅವರ ಕುಟುಂಬದ ಇಚ್ಛೆಯಂತೆ ಮಹಾರಾಷ್ಟ್ರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿತ್ತೇ ಹೊರತು ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅಪಮಾನ ಮಾಡುವ ರೀತಿಯಲ್ಲಿ ನಡೆದುಕೊಂಡಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಭೀಮಾ ಕೋರೆಗಾಂವ್ ವಿಜಯೋತ್ಸವದಂತೆ ಬಾಡೂಟ ಚಳವಳಿ: ಬಿಟಿವಿ

ಹಿರಿಯ ಮುಖಂಡ ಚಂದ್ರಶೇಖರ ಕೊಡಬಾಗಿ ಮಾತನಾಡಿ, “ಅಂಬೇಡ್ಕರ್ ಅವರನ್ನು ಸಂವಿಧಾನದ ಕರಡು ಸಮಿತಿ ಅಧ್ಯಕರನ್ನಾಗಿ ಮಾಡಿದ್ದು ಕಾಂಗ್ರೆಸ್. ಅಲ್ಲದೆ, ಅವರ ಅಂತ್ಯಸಂಸ್ಕಾರದ ವೇಳೆ ಅಗತ್ಯವಾದ ಕ್ರಮಗಳನ್ನು ಕಾಂಗ್ರೆಸ್ ಮಾಡಿತ್ತು. ಆದರೆ, ಅಂಬೇಡ್ಕರ್ ತತ್ವಗಳಿಗೆ ವಿರುದ್ಧವಾಗಿ ಸಂಸದ ರಮೇಶ ಜಿಗಜಿಣಗಿ ನಡೆದುಕೊಳ್ಳುತ್ತಿದ್ದಾರೆ. ಇವತ್ತಿಗೂ ಸ್ವತಃ ಅವರೇ ಅಸ್ಪೃಶ್ಯತೆ ಆಚರಣೆಯಲ್ಲಿ ತೊಡಗಿದ್ದಾರೆ. ವಿಜಯಪುರದ ಘನತೆಯನ್ನು ಜಿಗಜಿಣಗಿ ಅಸ್ಪೃಶ್ಯತೆ ಆಚರಣೆ ಮಾಡಿ ತಲೆ ತಗ್ಗಿಸುವಂತೆ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಬ್ದುಲ್ ಮುಶ್ರೀಫ್, ಮಾಹಿನ್ ಮುಖಂಡರಾದ ಸೋಮನಾಥ ಕಳ್ಳಿಮನಿ, ಎಂ ಸಿ ಮುಲ್ಲಾ, ನಾಗರಾಜ ಲಂಬು, ವಸಂತ ವನಮೋಡೆ,ಗಂಗಾಧರ ಸಂಬಣ್ಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...