ವಿಜಯಪುರ | ಬೌದ್ಧ ಧರ್ಮ ಬೆಳವಣಿಗೆಯಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ: ಸಚಿವ ಶಿವಾನಂದ ಪಾಟೀಲ

Date:

ಈ ದೇಶದಲ್ಲಿ ಸಾಮರಸ್ಯದಿಂದ ಬದುಕು ನಡೆಸಲು ಅವಕಾಶ ಕಲ್ಪಿಸಿ ಕೊಟ್ಟವರು ಡಾ. ಅಂಬೇಡ್ಕರ್ ಅವರು. ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.

ವಿಜಯಪುರ ಜಿಲ್ಲೆಯ ನಡುಗುಂದಿ ಪಟ್ಟಣದ ಎಚ್‌ಪಿಎಸ್ ಶಾಲೆ ಆವರಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತೋತ್ಸವ, ಅಂಬೇಡ್ಕರ್ ರತ್ನ ಪ್ರಶಸ್ತಿ ವಿತರಣೆ, ಪ್ರತಿಭಾ ಪುರಸ್ಕಾರ, ತಾಲೂಕು ಛಲವಾದಿ ಮಹಾಸಭಾ ಹಾಗೂ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, “ಸಿದ್ದರಾಮಯ್ಯ 6,000 ಕೋಟಿ ಇದ್ದ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು 42 ಸಾವಿರ ಕೋಟಿಗೆ ಏರಿಕೆ ಮಾಡಿ ದಲಿತರ ಏಳಿಗೆಗೆ ಶ್ರಮಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ದಲಿತರಿಗೆ ಭೂಮಿ ಹಂಚಿಕೆ ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 11 at 6.01.40 PM

ವಿಶ್ರಾಂತ ಉಪನ್ಯಾಸಕ ಎಚ್ ಟಿ ಕೋಟೆ ಮಾತನಾಡಿ, “ಶೇಕಡ 15ರಷ್ಟು ಮೀಸಲಾತಿ ಪಡೆದುಕೊಂಡ ಎಸ್‌ಸಿ ಎಸ್‌ಟಿ ಜನಾಂಗದವರು ಅಂಬೇಡ್ಕರ್ ಜಯಂತಿ ಮಾಡುತ್ತಾರೆ. ಆದರೆ ಶೇಕಡ 32ರಷ್ಟು ಮೀಸಲಾತಿ ಪಡೆದ ಜನಾಂಗದವರು ಅಂಬೇಡ್ಕರ್ ಜಯಂತಿ ಆಚರಿಸುವುದಿಲ್ಲ. ಅಂಬೇಡ್ಕರ್ ಅವರ ಚಿಂತನೆ ತತ್ವಗಳನ್ನು ಅರ್ಥಮಾಡಿಕೊಳ್ಳುವಲ್ಲಿ ನಾವು ನಿಸ್ವಾರ್ಥಗಳಾಗಬೇಕು” ಎಂದರು.

ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಂಟು ಜೋಡಿ ದಂಪತಿ ನವಜೀವನಕ್ಕೆ ಕಾಲಿಟ್ಟರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಕಾರ್ಯಕ್ರಮದಲ್ಲಿ ಸುಜಾತ ಚಲವಾದಿ, ರಾಜು ಕೋಚಬಾಳ, ಎಚ್ ಎಚ್ ದೊಡ್ಡಮನಿ, ರುದ್ರಮುನಿ ಶಿವಾಚಾರ್ಯ, ಎಸ್ ಜಿ ನಾಗಠಾಣ, ಅಭಿಷೇಕ್ ಚಕ್ರವರ್ತಿ, ತಾಲೂಕು ಪಂಚಾಯತಿ ಇ ಓ ವೆಂಕಟೇಶ ಒಂದಾಲ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ವೀರೇಶ ಹಟ್ಟಿ, ಬಿಟಿ ಗೌಡರ, ಸಂಗಮೇಶ ಬಳೆಗಾರ, ಎಂ ಎಂ ಮುಲ್ಲಾ, ಶಾಮ್ ಪಾತ್ರದ, ಬೀಡಿ ಚಲುವಾದಿ, ಕುಮಾರ್ ಬಾಗೇವಾಡಿ, ಶೇಖರ್ ದೊಡಮನಿ, ಪ್ರಶಾಂತ ಚಲುವಾದಿ, ಸಿಂಧೂರ ಬೈರವಾಡಗಿ, ಚಂದ್ರಶೇಖರ ನುಗ್ಲಿ, ಬಸವರಾಜ ಹಾಲಕೊಪ್ಪಾರ, ಡಂಗ್ರಿ ಭಜಂತ್ರಿ, ಖಮೇಶ ಭಜಂತ್ರಿ, ಬಸವರಾಜ ನೀಡಗುಂದಿ, ಸಿಜಿ ವಿಜಯಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...