ವಿಜಯಪುರ | ಅಂಗನವಾಡಿ ಕೇಂದ್ರಗಳಲ್ಲಿನ ಅಕ್ರಮಕ್ಕೆ ಕಡಿವಾಣ ಹಾಕಲು ಆಗ್ರಹ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಾಯಂದಿರರ ಮತ್ತು ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರೀತಿಯ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಆದರೆ, ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಅಂಗನವಾಡಿ ಕಾರ್ಯಕರ್ತೆಯರ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ನಿರ್ಮಾಣವಾದಂತೆ ಭಾಸವಾಗುತ್ತಿವೆ ಎಂದು ಕೆಆರ್‌ಎಸ್‌ ಪಕ್ಷದ ಮುಖಂಡರು ಆರೋಪಿಸಿದ್ದಾರೆ.

ವಿಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ಸಾವಿತ್ರಿ ಗುಗ್ಗರಿ ಅವರಿಗೆ ಪಕ್ಷದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೇ ಇರುವುದಿಲ್ಲ. ಆದರೂ ಹಾಜರಾತಿ ಪೂರ್ತಿಯಾಗಿ ತೋರಿಸಿ, ಮಕ್ಕಳಿಗೆ ಬರುವ ಎಲ್ಲ ರೀತಿಯ ಸೌಲಭ್ಯಗಳನ್ನು (ಆಹಾರ ಕಿಟ್) ಹೊರಗಡೆ ಖಾಸಗಿ ವ್ಯಕ್ತಿಗಳಿಗೆ ಮಾರಿಕೊಳ್ಳುತ್ತಿರುವ ಬಗ್ಗೆ ಆರೋಪಗಳಿವೆ” ಎಂದು ಹೇಳಿದ್ದಾರೆ.

“ಅಂಗನವಾಡಿ ಕೇಂದ್ರಗಳು ಕೇವಲ ಸರ್ಕಾರಕ್ಕೆ ಸುಳ್ಳು ವರದಿ ನೀಡುವ ಕೇಂದ್ರಗಳಾಗಿ ಮಾರ್ಪಡುತ್ತಿವೆ. ಈ ಕಹಿ ಸತ್ಯವು ಇಲಾಖೆಯ ಬಹುತೇಕ ಸಿಬ್ಬಂದಿಗಳಿಗೆ ತಿಳಿದಿದ್ದರೂ, ಯಾವುದೇ ಕ್ರಮ ಕೈಕೊಂಡಿಲ್ಲ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಪಕ್ಷವು ಬೃಹತ್ ಹೋರಾಟ ನಡೆಸುತ್ತದೆ” ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೊತ್ತಾಯ ಸಲ್ಲಿಸುವ ವೇಳೆ ಹಮಿದ ಇನಾಮದಾರ, ವಿಕ್ರಮ್ ವಾಘಮೋರೆ, ದುರ್ಗಪ್ಪ ಬೂದಿಹಾಳ, ಕಾಂತುಗೌಡ ಬೆಂಡವಾಡ, ಪ್ರವೀಣ ಕನಸೇ, ರಾಕೇಶ ಇಂಗಳಗಿ ರಾಘವೇಂದ್ರ ಛಲವಾದಿ. ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ, ಲಕ್ಷಣ ಚಡಚಣ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...