ವಿಜಯಪುರ | ʼಚಿತ್ರಕಲೆʼ ಜನಪರವಾಗಬೇಕು: ಲಲಿತಕಲಾ ಮಂಡಳಿ ಸಂಚಾಲಕಿ ರಾಜೇಶ್ವರಿ

Date:

ಇತ್ತೀಚಿನ ದಿನಗಳಲ್ಲಿ ಕಲೆಯ ಬಗ್ಗೆ ಜನ ಸಾಮಾನ್ಯರಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಜನರಲ್ಲಿ ಕಲೆಯ ಬಗ್ಗೆ ಅರಿವು ಮೂಡಿಸಿ ಕಲೆಯನ್ನು ಜನಪರವಾಗಿಸಬೇಕು ಎಂದು ಲಲಿತ ಕಲಾ ಮಂಡಳಿ ಸದಸ್ಯ ಸಂಚಾಲಕಿ ರಾಜೇಶ್ವರಿ ಮೋಪಗಾರ ಹೇಳಿದರು.

ವಿಜಯಪುರದ ಪ್ರವಾಸೋದ್ಯಮ ಇಲಾಖೆಯ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಕರ್ನಾಟಕ ಲಲಿತ ಕಲಾ ಅಕಾಡೆಮಿ ಬೆಂಗಳೂರು ಹಾಗೂ ಶ್ರೀ ರಾಜರಾಜೇಶ್ವರಿ ಮಹಿಳಾ ಕಲಾ ಸಂಘ ವಿಜಯಪುರ ಇವರ ಸಹಯೋಗದೊಂದಿಗೆ ಆಯೋಜಿಸಿದ್ದ”ನಿಮ್ಮೊಂದಿಗೆ ನಾವು” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಚಿತ್ರಕಲಾ ಪ್ರದರ್ಶನ, ಪ್ರಾತ್ಯಕ್ಷಿಕೆ, ಕಲಾ ವಿಮರ್ಶೆ, ಒಂದು ದಿನದ ಶಾಲಾ ಮಕ್ಕಳ ಚಿತ್ರಕಲಾ ಶಿಬಿರವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿ, “ನಿಮ್ಮೊಂದಿಗೆ ನಾವು ಕಾರ್ಯಕ್ರಮದ ಮುಖ್ಯ ಉದ್ದೇಶವೇ ಕಲೆಯನ್ನು ಜನಪರವಾಗಿಸಬೇಕು. ಜನರಲ್ಲಿ ಕಲೆಯ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂಬುದಾಗಿದೆ. ಇದರೊಂದಿಗೆ ಕಲಾಭಿಮಾನಿಗಳ ದೊಡ್ಡ ಸಮೂಹವನ್ನು ನಿರ್ಮಿಸಿಕೊಳ್ಳಬೇಕು” ಎಂದರು.

WhatsApp Image 2025 02 11 at 4.09.38 PM

ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಭಜಂತ್ರಿ ಮಾತನಾಡಿ, “ಕಲೆಯ ಕುರಿತು ಸರ್ಕಾರದ ಜನಪರ ಯೋಜನೆಗಳು ತುಂಬಾ ಶ್ಲಾಘನೀಯ. ಈ ರೀತಿಯ ಕಾರ್ಯಕ್ರಮಗಳು ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚಾಗಿ ಆಯೋಜನೆಗೊಳ್ಳಬೇಕು. ಕಲಾವಿದರಲ್ಲಿ ಮಾತ್ರವಲ್ಲದೆ ಸಾಮಾನ್ಯ ಜನರಲ್ಲೂ ಕಲೆಯ ಕುರಿತು ಅರಿವು ಮೂಡಿಸುವ ಕೆಲಸಗಳಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಸೀತಮ್ಮನಗುಡ್ಡದ ಕೆಎಸ್‌ಐಎಸ್‌ಎಫ್ ಬಳಿ ಅಪಘಾತ; ಇಬ್ಬರಿಗೆ ಮಂದಿಗೆ ಗಂಭೀರ, ಹದಿನಾಲ್ಕು ಮಂದಿಗೆ ಗಾಯ

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪಿರ್ ವಾಲಿಕರ್, ಕನ್ನಡ ಪ್ರಾಧಿಕಾರದ ಸದಸ್ಯೆ ದಾಕ್ಷಾಯಿಣಿ ಹುಡೆದ್, ರಾಜರಾಜೇಶ್ವರಿ ಮಹಿಳಾ ಕಲಾಸಂಘದ ಸದಸ್ಯೆ ಲಲಿತಾ ಬಳಗಾನೂರ, ಬಿ ಕೆ ಶ್ರೀದೇವಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...